Home / ಕಥೆ / ಕಾದಂಬರಿ / ರಂಗಣ್ಣನ ಕನಸಿನ ದಿನಗಳು – ೩೦

ರಂಗಣ್ಣನ ಕನಸಿನ ದಿನಗಳು – ೩೦

ತಿಮ್ಮರಾಯಪ್ಪನ ಮೆಚ್ಚಿಕೆ

ರಂಗಣ್ಣ ಬೆಂಗಳೂರನ್ನು ತಲುಪಿದ್ದಾಯಿತು; ಮನೆಯನ್ನು ಸೇರಿದ್ದಾಯಿತು. ರೈಲ್ ಸ್ಟೇಷನ್ನಿಗೆ ಗೋಪಾಲನೂ ಶಂಕರಪ್ಪ ನೂ ಬಂದಿದ್ದುದರಿಂದ ಹೆಚ್ಚು ತೊಂದರೆಯನ್ನು ಪಡದೆ, ಹೆಚ್ಚು ಗಾಡಿಗಳನ್ನು ಮಾತ್ರ ಮಾಡಿಕೊಂಡು ಮನೆಯನ್ನು ಸೇರಿದನು. ಮಾರನೆಯ ದಿನ ಶಂಕರಪ್ಪನಿಗೆ ಬಹಳವಾಗಿ ಸಮಾಧಾನ ಮಾಡಬೇಕಾಯಿತು. ಅವನು, `ಸ್ವಾಮಿ! ನನ್ನ ಜೀವಮಾನದಲ್ಲಿ ಅಂಥ ಸುಖ ಸಂತೋಷದ ದಿನಗಳನ್ನು ಮತ್ತೆ ನಾನು ಕಾಣುವುದಿಲ್ಲ. ನಾನೂ ಹಲವು ಅಪರಾಧಗಳನ್ನು ಮಾಡಿದೆ. ತಾವು ಒಳ್ಳೆಯ ಮಾತಿನಲ್ಲಿಯೇ ಬುದ್ದಿ ಹೇಳಿ ತಿದ್ದಿ ನಡೆಸಿ ಕೂ೦ಡುಬ೦ದಿರಿ. ಊಟದ ಹೊತ್ತಿನಲ್ಲಿ ಪಕ್ಕದಲ್ಲಿಯೇ ಮಣೆಹಾಕಿಸಿ ಕೂಡಿಸಿಕೊಂಡು ಸ್ನೇಹಿತನಂತೆ ಉಪಚಾರ ಮಾಡುತ್ತ ಆದರಿಸಿದಿರಿ. ನಾನು ಸಲಿಗೆಯಿಂದ ಏನಾದರೂ ಹೆಚ್ಚು ಕಡಮೆ ನಡೆದುಕೊಂಡಿದ್ದರೆ ಮನ್ನಿಸಬೇಕು’ ಎಂದು ಹೇಳಿದನು. ರಂಗಣ್ಣ ಯಥೋಚಿತವಾಗಿ ಅವನಿಗೆ ಉತ್ತರ ಹೇಳಿ ಗೋಪಾಲನ ಕೈಗೆ ಐದು ರುಪಾಯಿಗಳನ್ನು ಇನಾಮಾಗಿ ಕೊಟ್ಟನು. ಅವರಿಬ್ಬರ ರೈಲು ಖರ್ಚಿಗೆ ಬೇರೆ ಹಣವನ್ನೂ ಕೊಟ್ಟು ಕಳಿಸಿದನು.

ಭಾನುವಾರ ಬೆಳಗ್ಗೆ ಹತ್ತು ಗಂಟೆಗೆ ತಿಮ್ಮರಾಯಪ್ಪ ತನ್ನ ಹೆಂಡತಿ ಮತ್ತು ಮಕ್ಕಳೊಡನೆ ರಂಗಣ್ಣನ ಮನೆಗೆ ಬಂದನು. ಆ ದಿನ ಅವರಿಗೆ ಭೋಜನ ರಂಗಣ್ಣನ ಮನೆಯಲ್ಲೇ ಏರ್ಪಾಟಾಗಿತ್ತು. ರಂಗಣ್ಣನು ಬಹಳ ಸಂತೋಷದಿಂದಲೂ ಸಂಭ್ರಮದಿಂದಲೂ ಅವರನ್ನೆಲ್ಲ ಸ್ವಾಗತಿಸಿದನು. ರಂಗಣ್ಣನ ಹೆಂಡತಿ ತಿಮ್ಮರಾಯಪ್ಪನ ಹೆಂಡತಿಯನ್ನು ಕರೆದುಕೊಂಡು ಒಳ ಕೊಟಡಿಗೆ ಹೋದಳು. ಸ್ವಲ್ಪ ಕಾಫಿ ಸಮಾರಾಧನೆ ಆಗಿ ಆ ಬಳಿಕ ಊಟಗಳಾಗಿ ಹಾಲಿನಲ್ಲಿ ಎರಡು ಸಂಸಾರದವರೂ ಸೇರಿ ತಾಂಬೂಲವನ್ನು ಹಾಕಿಕೊಳ್ಳುತ್ತಾ ಮಾತನಾಡತೊಡಗಿದರು. ಎಲ್ಲವೂ ಜನಾರ್ದನಪುರದಲ್ಲಿ ರ೦ಗಣ್ಣ ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಮಾತುಗಳೇ ಆಗಿದ್ದುವು. ಮಧ್ಯೆ ಮಧ್ಯೆ ತಿಮ್ಮರಾಯಪ್ಪ ತಾನು ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಕೆಲವು ಕಥೆಗಳನ್ನೂ ಹೇಳುತ್ತಿದ್ದನು. ರಂಗಣ್ಣನು ಉಗ್ರಪ್ಪನ ವಿಚಾರವನ್ನೂ, ಅವನ ವಾದವನ್ನೂ, ಅವನಲ್ಲಾದ ಪರಿವರ್ತನೆಯನ್ನೂ , ಶಾಂತವೀರ ಸ್ವಾಮಿಯಾಗಿ ತನಗೆ ಮಾಡಿದ ಆತಿಥ್ಯವನ್ನೂ, ಕಲ್ಲೇಗೌಡ ಮತ್ತು ಕರಿಯಪ್ಪ ನವರೊಡನೆ ಆದ ಶಾಂತಿ ಸಂಧಾನವನ್ನೂ-ಎಲ್ಲವನ್ನೂ ಹೇಳಿದಾಗ ತಿಮ್ಮರಾಯಪ್ಪನು,

`ಅಯ್ಯೋ ಶಿವನೇ! ಎಂತಹ ಮಾರ್ಪಾಟು!’ ಎಂದು ಉದ್ಗಾರ ತೆಗೆದನು.

‘ನೋಡಿದೆಯಾ ತಿಮ್ಮರಾಯಪ್ಪ! ನನ್ನ ಇನ್ ಸ್ಪೆಕ್ಟರ್‌ಗಿರಿ! ಮಧ್ಯೆ ಮಧ್ಯೆ ಮನಸ್ಸಿಗೆ ಬೇಜಾರಾಗಿ ಹಾಳು ಇನ್ ಸ್ಪೆಕ್ಟರ್ ಗಿರಿ ನನಗೆ ಸಾಕಪ್ಪ! ಎಂದು ನಿನಗೆ ನಾನು ಬರೆಯುತ್ತಿದ್ದೆ, ಆದರೂ ಕೊನೆಯಲ್ಲಿ ನನಗೆ ಜನಾರ್ದನಪುರವನ್ನು ಬಿಟ್ಟು ಬರುವುದಕ್ಕೆ ಬಹಳ ವ್ಯಥೆಯಾಯಿತು. ಒಟ್ಟಿನಲ್ಲಿ ನನ್ನ ದರ್ಬಾರು ನಿನಗೆ ಮೆಚ್ಚಿಕೆಯಾಯಿತೇ?’ ಎಂದು ರಂಗಣ್ಣ ಕೇಳಿದನು.

`ಶಿವನಾಣೆ ರಂಗಣ್ಣ! ಶಿವನಾಣೆ! ನಿನಗೆ ಪ್ರಮಾಣವಾಗಿ ಹೇಳುತ್ತೇನೆ. ನಾವುಗಳೂ ಹಲವರು ಇನ್ಸ್ಪೆಕ್ಟರ್ ಗಿರಿ ಮಾಡಿದೆವು. ಹತ್ತರಲ್ಲಿ ಹನ್ನೊಂದು! ಲೆಕ್ಕವೇ ಪಕ್ಕವೇ! ನಿನ್ನ ಇನ್ ಸ್ಪೆಕ್ಟರ್ ಗಿರಿ ಒ೦ದು ಮಹಾಕಾವ್ಯ! ಚಂದ್ರಾರ್ಕವಾಗಿ ನಿಂತು ಹೋಯಿತು! ನನಗೆ ಬಹಳ ಸಂತೋಷ ರಂಗಣ್ಣ !’ ಎಂದು ಹೇಳುತ್ತಾ ತಿಮ್ಮರಾಯಪ್ಪ ರಂಗಣ್ಣನನ್ನು ಆಲಿಂಗನ ಮಾಡಿಕೊಂಡನು.

`ದೇವರೇ! ನಾನು ನೂರತೊಂಬತ್ತು ಪೌಂಡು ತೂಕ ಇಲ್ಲ! ನಾನು ಅಪ್ಪಚ್ಚಿಯಾಗಿ ಹೋಗ್ತೇನೆ! ಬಿಡು, ತಿಮ್ಮರಾಯಪ್ಪ! ಅವರಿಬ್ಬರೂ ನೋಡಿ ನಗುತ್ತಿದಾರೆ! ನನ್ನ ಇನ್ ಸ್ಪೆಕ್ಟರ್‌ಗಿರಿ ಇರಲಿ, ನಿನ್ನ ಸ್ನೇಹ ನಿಜವಾಗಿಯೂ! ಒಂದು ಮಹಾಕಾವ್ಯ! ಅದು ಆಚಂದ್ರಾರ್ಕವಾಗಿ ನಿಂತಿರುತ್ತದೆ!’ ಎಂದು ರಂಗಣ್ಣ ನಗುತ್ತಾ ಹೇಳಿದನು.
*****
ಮುಗಿಯಿತು

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...