Home / ಕಥೆ / ಕಾದಂಬರಿ / ರಂಗಣ್ಣನ ಕನಸಿನ ದಿನಗಳು – ೩೦

ರಂಗಣ್ಣನ ಕನಸಿನ ದಿನಗಳು – ೩೦

ತಿಮ್ಮರಾಯಪ್ಪನ ಮೆಚ್ಚಿಕೆ

ರಂಗಣ್ಣ ಬೆಂಗಳೂರನ್ನು ತಲುಪಿದ್ದಾಯಿತು; ಮನೆಯನ್ನು ಸೇರಿದ್ದಾಯಿತು. ರೈಲ್ ಸ್ಟೇಷನ್ನಿಗೆ ಗೋಪಾಲನೂ ಶಂಕರಪ್ಪ ನೂ ಬಂದಿದ್ದುದರಿಂದ ಹೆಚ್ಚು ತೊಂದರೆಯನ್ನು ಪಡದೆ, ಹೆಚ್ಚು ಗಾಡಿಗಳನ್ನು ಮಾತ್ರ ಮಾಡಿಕೊಂಡು ಮನೆಯನ್ನು ಸೇರಿದನು. ಮಾರನೆಯ ದಿನ ಶಂಕರಪ್ಪನಿಗೆ ಬಹಳವಾಗಿ ಸಮಾಧಾನ ಮಾಡಬೇಕಾಯಿತು. ಅವನು, `ಸ್ವಾಮಿ! ನನ್ನ ಜೀವಮಾನದಲ್ಲಿ ಅಂಥ ಸುಖ ಸಂತೋಷದ ದಿನಗಳನ್ನು ಮತ್ತೆ ನಾನು ಕಾಣುವುದಿಲ್ಲ. ನಾನೂ ಹಲವು ಅಪರಾಧಗಳನ್ನು ಮಾಡಿದೆ. ತಾವು ಒಳ್ಳೆಯ ಮಾತಿನಲ್ಲಿಯೇ ಬುದ್ದಿ ಹೇಳಿ ತಿದ್ದಿ ನಡೆಸಿ ಕೂ೦ಡುಬ೦ದಿರಿ. ಊಟದ ಹೊತ್ತಿನಲ್ಲಿ ಪಕ್ಕದಲ್ಲಿಯೇ ಮಣೆಹಾಕಿಸಿ ಕೂಡಿಸಿಕೊಂಡು ಸ್ನೇಹಿತನಂತೆ ಉಪಚಾರ ಮಾಡುತ್ತ ಆದರಿಸಿದಿರಿ. ನಾನು ಸಲಿಗೆಯಿಂದ ಏನಾದರೂ ಹೆಚ್ಚು ಕಡಮೆ ನಡೆದುಕೊಂಡಿದ್ದರೆ ಮನ್ನಿಸಬೇಕು’ ಎಂದು ಹೇಳಿದನು. ರಂಗಣ್ಣ ಯಥೋಚಿತವಾಗಿ ಅವನಿಗೆ ಉತ್ತರ ಹೇಳಿ ಗೋಪಾಲನ ಕೈಗೆ ಐದು ರುಪಾಯಿಗಳನ್ನು ಇನಾಮಾಗಿ ಕೊಟ್ಟನು. ಅವರಿಬ್ಬರ ರೈಲು ಖರ್ಚಿಗೆ ಬೇರೆ ಹಣವನ್ನೂ ಕೊಟ್ಟು ಕಳಿಸಿದನು.

ಭಾನುವಾರ ಬೆಳಗ್ಗೆ ಹತ್ತು ಗಂಟೆಗೆ ತಿಮ್ಮರಾಯಪ್ಪ ತನ್ನ ಹೆಂಡತಿ ಮತ್ತು ಮಕ್ಕಳೊಡನೆ ರಂಗಣ್ಣನ ಮನೆಗೆ ಬಂದನು. ಆ ದಿನ ಅವರಿಗೆ ಭೋಜನ ರಂಗಣ್ಣನ ಮನೆಯಲ್ಲೇ ಏರ್ಪಾಟಾಗಿತ್ತು. ರಂಗಣ್ಣನು ಬಹಳ ಸಂತೋಷದಿಂದಲೂ ಸಂಭ್ರಮದಿಂದಲೂ ಅವರನ್ನೆಲ್ಲ ಸ್ವಾಗತಿಸಿದನು. ರಂಗಣ್ಣನ ಹೆಂಡತಿ ತಿಮ್ಮರಾಯಪ್ಪನ ಹೆಂಡತಿಯನ್ನು ಕರೆದುಕೊಂಡು ಒಳ ಕೊಟಡಿಗೆ ಹೋದಳು. ಸ್ವಲ್ಪ ಕಾಫಿ ಸಮಾರಾಧನೆ ಆಗಿ ಆ ಬಳಿಕ ಊಟಗಳಾಗಿ ಹಾಲಿನಲ್ಲಿ ಎರಡು ಸಂಸಾರದವರೂ ಸೇರಿ ತಾಂಬೂಲವನ್ನು ಹಾಕಿಕೊಳ್ಳುತ್ತಾ ಮಾತನಾಡತೊಡಗಿದರು. ಎಲ್ಲವೂ ಜನಾರ್ದನಪುರದಲ್ಲಿ ರ೦ಗಣ್ಣ ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಮಾತುಗಳೇ ಆಗಿದ್ದುವು. ಮಧ್ಯೆ ಮಧ್ಯೆ ತಿಮ್ಮರಾಯಪ್ಪ ತಾನು ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಕೆಲವು ಕಥೆಗಳನ್ನೂ ಹೇಳುತ್ತಿದ್ದನು. ರಂಗಣ್ಣನು ಉಗ್ರಪ್ಪನ ವಿಚಾರವನ್ನೂ, ಅವನ ವಾದವನ್ನೂ, ಅವನಲ್ಲಾದ ಪರಿವರ್ತನೆಯನ್ನೂ , ಶಾಂತವೀರ ಸ್ವಾಮಿಯಾಗಿ ತನಗೆ ಮಾಡಿದ ಆತಿಥ್ಯವನ್ನೂ, ಕಲ್ಲೇಗೌಡ ಮತ್ತು ಕರಿಯಪ್ಪ ನವರೊಡನೆ ಆದ ಶಾಂತಿ ಸಂಧಾನವನ್ನೂ-ಎಲ್ಲವನ್ನೂ ಹೇಳಿದಾಗ ತಿಮ್ಮರಾಯಪ್ಪನು,

`ಅಯ್ಯೋ ಶಿವನೇ! ಎಂತಹ ಮಾರ್ಪಾಟು!’ ಎಂದು ಉದ್ಗಾರ ತೆಗೆದನು.

‘ನೋಡಿದೆಯಾ ತಿಮ್ಮರಾಯಪ್ಪ! ನನ್ನ ಇನ್ ಸ್ಪೆಕ್ಟರ್‌ಗಿರಿ! ಮಧ್ಯೆ ಮಧ್ಯೆ ಮನಸ್ಸಿಗೆ ಬೇಜಾರಾಗಿ ಹಾಳು ಇನ್ ಸ್ಪೆಕ್ಟರ್ ಗಿರಿ ನನಗೆ ಸಾಕಪ್ಪ! ಎಂದು ನಿನಗೆ ನಾನು ಬರೆಯುತ್ತಿದ್ದೆ, ಆದರೂ ಕೊನೆಯಲ್ಲಿ ನನಗೆ ಜನಾರ್ದನಪುರವನ್ನು ಬಿಟ್ಟು ಬರುವುದಕ್ಕೆ ಬಹಳ ವ್ಯಥೆಯಾಯಿತು. ಒಟ್ಟಿನಲ್ಲಿ ನನ್ನ ದರ್ಬಾರು ನಿನಗೆ ಮೆಚ್ಚಿಕೆಯಾಯಿತೇ?’ ಎಂದು ರಂಗಣ್ಣ ಕೇಳಿದನು.

`ಶಿವನಾಣೆ ರಂಗಣ್ಣ! ಶಿವನಾಣೆ! ನಿನಗೆ ಪ್ರಮಾಣವಾಗಿ ಹೇಳುತ್ತೇನೆ. ನಾವುಗಳೂ ಹಲವರು ಇನ್ಸ್ಪೆಕ್ಟರ್ ಗಿರಿ ಮಾಡಿದೆವು. ಹತ್ತರಲ್ಲಿ ಹನ್ನೊಂದು! ಲೆಕ್ಕವೇ ಪಕ್ಕವೇ! ನಿನ್ನ ಇನ್ ಸ್ಪೆಕ್ಟರ್ ಗಿರಿ ಒ೦ದು ಮಹಾಕಾವ್ಯ! ಚಂದ್ರಾರ್ಕವಾಗಿ ನಿಂತು ಹೋಯಿತು! ನನಗೆ ಬಹಳ ಸಂತೋಷ ರಂಗಣ್ಣ !’ ಎಂದು ಹೇಳುತ್ತಾ ತಿಮ್ಮರಾಯಪ್ಪ ರಂಗಣ್ಣನನ್ನು ಆಲಿಂಗನ ಮಾಡಿಕೊಂಡನು.

`ದೇವರೇ! ನಾನು ನೂರತೊಂಬತ್ತು ಪೌಂಡು ತೂಕ ಇಲ್ಲ! ನಾನು ಅಪ್ಪಚ್ಚಿಯಾಗಿ ಹೋಗ್ತೇನೆ! ಬಿಡು, ತಿಮ್ಮರಾಯಪ್ಪ! ಅವರಿಬ್ಬರೂ ನೋಡಿ ನಗುತ್ತಿದಾರೆ! ನನ್ನ ಇನ್ ಸ್ಪೆಕ್ಟರ್‌ಗಿರಿ ಇರಲಿ, ನಿನ್ನ ಸ್ನೇಹ ನಿಜವಾಗಿಯೂ! ಒಂದು ಮಹಾಕಾವ್ಯ! ಅದು ಆಚಂದ್ರಾರ್ಕವಾಗಿ ನಿಂತಿರುತ್ತದೆ!’ ಎಂದು ರಂಗಣ್ಣ ನಗುತ್ತಾ ಹೇಳಿದನು.
*****
ಮುಗಿಯಿತು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...