Home / ಕವನ / ಅನುವಾದ / ಹಿಂದುಸ್ತಾನ್‌ ಹಮಾರಾ

ಹಿಂದುಸ್ತಾನ್‌ ಹಮಾರಾ

(ಲಾಹೋರಿನ ಡಾ ಶೇಖ್‌ ಮಹಮ್ಮದ್‌ ಇಖ್ಬಾಲರ ಉರ್ದು ಘಜಲನ್ನು ಅವಲಂಬಿಸಿ ಬರೆದುದು)

ನಮ್ಮವಳೀ ಭಾರತ ಜನನಿ ||ಧ್ರುವ||

ಭೂಮಂಡಲದಿ ರಮಣೀಯಂ
ಈ ಭಾರತವೆಮ್ಮಯ ನಿಲಯಂ,
ನಾವೀಕೆಯ ಮರಿದುಂಬಿಗಳು,
ಈಕೆಯೆಮ್ಮ ಜೀವನನಳಿನಿ ||೧||

ನಾವೆತ್ತಲಲೆದರು ಮುದದಿ
ಹೃದಯಂಗಳೀಕೆಯ ಪದದಿ,
ಇರಬಲ್ಲೆವಲ್ಲಿಯೆ ನಿಸದಂ
ಹರಿವುದೆತ್ತಲೆಮ್ಮೆದೆ ಧಮನಿ ||೨||

ಗಿರಿಗುಂಪುಗಳ ಮುಡಿಯೇರಿ
ಗಿರಿಯಾವುದೊ ಗಗನವಿಹಾರಿ-
ಅದೆ ನಮ್ಮ ಚಿರ ಪ್ರತಿಹಾರಿ,
ಅದೆ ಕಾವನೆಮ್ಮಯ ಕರುಣಿ ||೩||

ನೂರಾರು ನದಿಬಾಲೆಯರು
ಈಕೆಯಂಕದಲಿ ನಲಿಯುವರು,
ಈ ನವನಂದನದಿನಿದುಸುರಿಂ
ಕರುಬಾಂತುದಮರರ ಧರಣಿ ||೪||

ಧುನಿರಾಣಿ ಗಂಗೆಯೆ ನಿನಗೆ
ನೆನಪಿಹುದೇನಾ ಶುಭ ಗಳಿಗೆ
ಇಳಿದಂದು ನಿನ್ನಯ ದಡದಿ
ಮುನ್ನಮೆಮ್ಮ ಪರಿಸೆಯ ಸರಣಿ? ||೫||

ಧರುಮಂಗಳರುಹವು ನಮಗೆ
ಹಗೆಯನ್ನಿರಿಸಲೆಮ್ಮೊಳಗೆ-
ಭಾರತೇಯರಾವೆಮಗೊಂದೆ
ತವರೀಕೆಯೆ ನಮ್ಮಯ ಜನನಿ ||೬||

ಮುನ್ನಾದ ಹಲ ನಾಡಿಂದು
ಇತಿಹಾಸದಿ ಕನವರಿಪಂದು,
ಕಂದದು ಕುಂದದು ಎಂದೆಂದು
ಮೀಕೆಯ ಸೌಭಾಗ್ಯದ ತರಣಿ ||೭||

ನಿನ್ನ ನಾಮವನೆ ಪಾಡುವೆವು,
ನಾವಿದನೊಂದನೆ ಬೇಡುವೆವು-
ನಮ್ಮನಿಂತೆ ಜನುಮಜನುಮದಿ
ನಿನ್ನುದರದಿ ತಳೆಯೌ ಜನನಿ ||೮||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...