Home / ಕವನ / ಕವಿತೆ / ಕುಳಿರ್ ಮಂಜು

ಕುಳಿರ್ ಮಂಜು

ಉದುರಿಸುತ ಮಣಿ ಮಂಜು | ಮಾಡಿ ಮಲ್ವಾಸುಗಳ
ನೆಲದ ಹಸುರನು ಮುಚ್ಚಿ – ಹರಡಿ ಬಿಳಿ ಬಣ್ಣಗಳ
ಬೆದೆಯನಾರಿಸಿ ತಣ್ಪ | ನೆರಚಿ ಚಳಿ ಹೊದಿಕೆಗಳ
ಹೊದಿಸಿ ನಡುಗುವ ಕುಳಿರ | ನೂಕುತಿದೆ ಕುರುಡಿರುಳ.

ಬೆಟ್ಟಗಳ ನಡುವಿಂದ | ಹರಿದು ಬಹ ಹೊಳೆಯಂತೆ
ಮಂಜಿನೆಳೆ ವಸ್ತ್ರಗಳ | ಹೊದಿಸಿ ಚಳಿ ಮುರಿವಂತೆ
ಆಗಸವೆ ಧರೆಗಿಳಿದು | ಬೆಟ್ಟದಲಿ ನಿಂದಂತೆ
ತೋರುತಿದೆ ಸುತ್ತಲುಂ | ತುಹಿನಗಿರಿ ಬಂದಂತೆ.

ರಸವೇರಿ ಚೆಲುವೆತ್ತು | ಮೈದೋರಿ ಕಾಣುತಿವೆ
ಪೂಗಾಯಿ ಪಣ್ಗಳುಂ | ನುಡಿಗಳಿಗೆ ಸಿಲುಕದಿವೆ
ಸುತ್ತಣ ದಿಗಂತದಲಿ | ಹಿಮದ ರೇಖೆಯ ನಾವೆ
ಮನ ಸೆಳೆದು ಜಗ ಮರೆದು | ಎಲ್ಲೆಲ್ಲು ತೇಲುತಿವೆ.

ಓಡಿಹೋದನು ಚಂದ್ರ | ಹಿಮಗಿರಿಯ ಸೆರೆಯಲ್ಲಿ
ಚಳಿಯ ಹೂದಿಕೆಯ ಸೂರ್ಯ | ಝಳನೀಗಿ ಹಗಲಲ್ಲಿ
ಕುಳಿರ ಕುಣಿತಕೆ ಸೋತು | ಪಣ್ಪಿರಿಯೆ ಮರದಲ್ಲಿ
ಮೈಯುರುಬಿ ನುಡಿಯುತಿವೆ | ಗಿಳಿವಿಂಡು ಮರೆಯಲ್ಲಿ.

ಎಳೆಯ ಹರೆಯದ ವೃದ್ಧ | ರೆಲ್ಲರುಂ ಗಡಗಡನೆ
ನಡುಗುತ್ತ ಬೆನ್ ಬಾಗಿ | ಮೈ ಕುಗ್ಗಿ ಬರುತೊಡನೆ
ಕುಳಿರು ಬರುತಿರೆ ಸಾಗಿ | ಸೂರ್ಯನಲ್ಲೆನುತೊಡನೆ
ಉರಿಗೆ ನೀರೆರೆದಂತೆ | ಸಹಿಸದೆಯೆ ಬಲು ಬೇನೆ.

ಕಾಯ್ಗಟ್ಟಿ ಮೈಯೆಲ್ಲ | ಹುರಿಗಟ್ಟಿ ನವಿರೆಲ್ಲ
ಹಿಮ ತಣ್ಪು ಒಳಗೇರೆ | ರಕುತಮಂ ಹೊರಚೆಲ್ಲಿ
ಕುಳಿರ ಚಲುವಂ ನೋಡೆ | ಮೈಯೊಡೆವ ತೆರನೆಲ್ಲ
ಕೂಪಗೊಂಡಿವೆ ಹಸಿದು | ನಿಮಿರಿ ರೋಮಗಳೆಲ್ಲ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್