Home / ಕವನ / ಕವಿತೆ / ಶ್ರೀ’ಯವರನ್ನು ನೆನೆದು

ಶ್ರೀ’ಯವರನ್ನು ನೆನೆದು

ಬೆಳ್ಳೂರು ಮೈಲಾರ ಶ್ರೀಕಂಠನಡಿದೆಗೆದು
ಸಾಲ್ಗುಮೀ ತಿರೆಯಲ್ಲಿ ಪಾಡಿದುದು ನೋಡಿದುದು
ಇಂದ್ರಸಭೆಯೋಳು ನಮ್ಮ ತಾಯ ಕೀರ್ತಿಯ ಹಾಡಿ
ಕನ್ನಡ ಧ್ವಜಕೀರ್ತಿಯಲ್ಲಿ ನರ್ತನ ಮಾಡಿ
ಸಾಹಿತ್ಯ ಸೊಬಗುಗಳನೆಲ್ಲರ್ಗೆ ತೋರುವೊಡೆ
ಎಲ್ಲರೊಳು ತಾ ಹೊಕ್ಕ ಹೃದಯದಲಿ ನಲಿದಾಡೆ.

ಪಂಪ ರನ್ನರ ಬಸವ ಲಕ್ಷ್ಮೀಶ ಹರಿಹರರ
ವರಕುಮಾರವ್ಯಾಸ ರಾಘವ ಪುರಂದರರ
ಕವಿಗಳಾಡುಂಬೊಲದಿ ಸರಸ ಗೋಷ್ಠಿಯೊಳೊಲಿದು
ಕನ್ನಡದ ಕರ್ಚಾಳುಗಳ ನಡೆಸಿ ತಾ ನಲಿದು
ಕನ್ನಡಾಂಬೆಯ ಪೆರ್ಮೆ ಕೂರಮೆಗಳ ನೆನೆನೆನೆದು
ನುಡಿವನದಕೋ ನಮ್ಮ ಶ್ರೀ ಕವೀಂದ್ರಂ ನಿಂದು.

ನಲಿನಲಿದು ಸಾಹಿತ್ಯದಧಿದೇವಿ ದರ್ಶನದಿ
ಒಲಿಸಿ ನಲ್ನುಡಿಯಿಂದ ತಾಯ ತೊಡೆಯಲಿ ಮುದದಿ
ಮಂಡಿಸುತಲೊರೆಸಿರ್ದ ತಾಯ್ಕೊರಗ ಮರೆಸಿರ್ದ
ವೆತೆಗಳಂ ತೊರೆಯಿಸುತ ಮತ್ತೊಮ್ಮೆ ನಗಿಸಿರ್ದ
ಕನ್ನಡದ ತಾಯ್ನೋಟಮನ್ನೊರೆದು ಸೊಗಸಿರ್ದ
ಬಿಜಗೆಯ್ಸಿ ದೇವಿಯಂ ಕೀರ್ತಿಯನ್ ಪಾಡಿದನ್.

ತನ್ನಂತೆ ತರುಣರಂ ಕಿರಿಯರಂ ಹಿರಿಯರಂ
ಕನ್ನಡದ ನುಡಿಸೇವೆಯಲಿ ನಡೆಸಿ ಅಣಿಯರಂ
ಧರ್ಮದಲಿ ಕರ್ಮದಲಿ ತ್ಯಾಗದಲಿ ಭೋಗದಲಿ
ತೋರಿಸಿದ ಕರ್ಣಾಟ ಕವಿತಿಲಕ ನಡೆಗಳಲಿ
ಅಗಲಿದ ಕಣ್ಣೀರ ಹೊಳೆಹರಿಸಿ ಮತಿ ಮರೆಸಿ
ನಮ್ಮೆಲ್ಲರೊಲವೊಯ್ದು ಮರೆಯಾದನತಿ ಸರಸಿ.

ಎಲ್ಲಿರಲಿ ಎಂತಿರಲಿ ಅವರ ನಡೆನುಡಿ ಮನವು
ಗಾಂಭೀರ್ಯ ರಸಜೀವ ನಗು ಹಾಸ್ಯ ಚೆಲುವೊಲವು
ಭೀಷ್ಮರಾ ಹಿರಿತನವ ತಳೆದು ತಾ ಹೂಳೆದಿಹರು.
ಸರ್ವರನು ನಡಯಿಸುತ ಮಾರ್ಗದಲಿ-ಮೆರೆದಿಹರು.
ಕರ್ಣಾಟ ಕಣ್ನೋಟ ತಣ್ನೋಟಮಂ ಕಂಡು
ಶ್ರೀಯೋಲಿಯೆ ಎಚ್ಚರಾದುದು ನಮಗೆ ಸವಿಯುಂಡು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...