ತಿಮ್ಮ

ಬೆಂಗಳೂರಿನಲ್ಲಿ ಒಂದು ಮಾವಿನ ತೋಪು. ಆ ತೋಪಿನಲ್ಲಿ ಒಂದು ಹಿಂಡು ಕಪಿಗಳು ಇದ್ದವು. ಅವು ತಮ್ಮ ಮರಿಗಳನ್ನೆಲ್ಲಾ ಕಟ್ಟಿಕೊಂಡು ದಿನವೂ ತಿಂಡಿಗಾಗಿ ಬೀದಿಬೀದಿ ಆಲೆಯುತ್ತಿದ್ದವು. ತಾಯಿತಂದೆ ಕಪಿಗಳು, ಮರಿಗಳನ್ನು ಕರೆದು “ಜೊಕೇ! ಹಿಂಡು ಬಿಟ್ಟು ಹೋದೀರಿ!” ಎಂದು ಆಗಾಗ ಹೇಳುತ್ತಿದ್ದವು.

ಆ ಹಿಂಡಿನಲ್ಲಿ ತಿಮ್ಮ ಎಂಬ ಒಂದು ಮರಿ ಇತ್ತು. ಆದು ಒಂದು ದಿನ “ಯಾವಾ ಗಲೂ ಇವರ ಜೊತೆಯಲ್ಲಿಯೇ ಏಕೆ ಹೋಗಬೇಕು? ಇಂದು ನಾನೇ ಬೇರೆ ಹೋಗುತ್ತೇನೆ” ಎಂದುಕೊಂಡಿತು. ಅಂದು ಹಾಗೆಯೇ, ಅವರೆಲ್ಲರೂ ಹೋಗುತ್ತಿದ್ದ ದಾರಿಯನ್ನು ಬಿಟ್ಟು, ಮತ್ತೊಂದು ಹಾದಿಯನ್ನು ಹಿಡಿಯಿತು. ಎಂದಿನಂತೆ ಮರಿಗಳೆಲ್ಲ ಜತೆಯಲ್ಲಿ ಬರುತ್ತಿವೆ ಎಂದು ದೊಡ್ಡ ಕಪಿಗಳೂ ಮುಂದು ಮುಂದಕ್ಕೆ ಹೋದವು. ತಿಮ್ಮನು ಹಿಂದೆ ಉಳಿದುದು ಯಾರಿಗೂ ತಿಳಿಯದು.

ತಿಮ್ಮನು ಕೊಂಚದೂರ ಹೋಗುವುದರೊಳಗಾಗಿ, ಒಂದು ನಾಯಿ ಬಂತು; ತಿಮ್ಮನನ್ನು ಕಂಡು ಬೊಗಳಿತು. ಅದನ್ನು ಕಂಡು ಕೆಲವರು ತುಂಟ ಹುಡುಗರು ಬಂದರು. ತಿಮ್ಮನನ್ನು ಬೇಕಾದಷ್ಟು ಕೀಟಲೆ ಮಾಡಿದರು. ಕೆಲವರು ಮುಖವನ್ನು ಉದ್ದಮಾಡಿ, “ಗುರ್‌ಗುರ್‌” ಎಂದು ಅಣಕಿಸಿದರು. ಮತ್ತೆ ಕೆಲವರು ಕೈಚಪ್ಪಾಳೆಯಿಟ್ಟು “ಕೋತೀ ತಿಮ್ಮಾ! ಲೇ! ಕೋತೀ ತಿಮ್ಮಾ!” ಎಂದು ಅದನ್ನು ರೇಗಿಸಿದರು. ಇನ್ನು ಕೆಲವರು ಕಲ್ಲಿನಿಂದ ಹೊಡೆದರು. ಇದನ್ನೆಲ್ಲಾ ಕಂಡು ತಿಮ್ಮನಿಗೆ ಬಲು ದಿಗಿಲಾಯಿತು. ಅರಿಚಿಕೊಂಡಿತು; ಅಲ್ಲಿಂದ ತಪ್ಪಿಸಿಕೊಂಡು ಹೋಗುವುದು ಹೇಗೋ ತಿಳಿಯದೆ, ಸುಮ್ಮನೆ “ಕಿಚಿಕಿಚಿ” ಎಂದು ಒರಲಿಕೊಂಡಿತು.

ಅಷ್ಟರಲ್ಲಿ ಅದರ ಅರಚಾಟವು ದೊಡ್ಡ ಕಪಿಗಳಿಗೆ ಕೇಳಿಸಿತು. ಕೂಡಲೇ ಹಿಂಡಿಗೆ ಹಿಂಡೇ ತಿಮ್ಮನಿರುವ ತಾವಿಗೆ ಓಡಿಬಂದವು. ಅವು ಬರುತ್ತಲೇ ಹುಡುಗರೂ ಓಡಿಹೋದರು. ನಾಯಿಯೂ ಓಡಿಹೋಯಿತು.

ಆಗ ಅದಕ್ಕೆ ಬುದ್ಧಿ ಬಂತು. ತಿಮ್ಮನು ಅಲ್ಲಿಂದ ಮುಂದೆ ಎಂದೂ ಅವಿಧೇಯನಾಗಿ ನಡೆಯಲಿಲ್ಲ. ಹಿಂಡಿನಲ್ಲಿ ಯಾರಾದರೂ ತಾಯಿತಂದೆಗಳು ಹೇಳಿದ ಮಾತು ಕೇಳದೆ ಹೋದರೆ, ತಿಮ್ಮನು ಅವರಿಗೆ ತನ್ನ ಕಥೆಯನ್ನು ಹೇಳಿ ದಾರಿಗೆ ತರುತ್ತಿತ್ತು.
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...