Home / ಬಾಲ ಚಿಲುಮೆ / ಕಥೆ / ಸೋಮೇಗೌಡ

ಸೋಮೇಗೌಡ

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ ಕುಳಿತವರು “ಈ ಊರಿನ ಪಟೇಲನು ಯಾರು?” ಎಂದು ವಿಚಾರಿಸಿಕೊಂಡು ಬಂದರು. ಗೌಡನು ತಾನೇ ಮುಂದೆ ಬಂದು “ನೀವು ಯಾರಪ್ಪಾ?” ಎಂದು ಕೇಳಿದನು. ಬಂದವರು “ಅಯ್ಯಾ! ನಾನೊಬ್ಬ ದಾರಿಗನು. ಹಾದಿ ತಪ್ಪಿ ಬಂದಿರುವೆನು. ಈ ರಾತ್ರಿ ತಂಗುವುದಕ್ಕೆ ನನಗೆ ಕೊಂಚ ತಾವನ್ನು ಕೊಡಬೇಕು” ಎಂದರು. ಗೌಡನು “ಅದಕ್ಕೇನಪ್ಪ! ಬಾ!” ಎಂದು ಮನೆಗೆ ಕರೆದುಕೊಂಡು ಹೋದನು.

ಮನೆಯೊಳಗೆ ದೀಪದ ಬೆಳಕಿಗೆ ಹೋಗುತ್ತಲೇ ಬಂದಿರುವವರು ಯಾರು ಎಂಬುದು ಗೌಡನಿಗೆ ತಿಳಿಯಿತು. ಅವನು ಕೂಡಲೆ ಕಾಲಿಗೆ ಬಿದ್ದು “ನನ್ನ ಮನೆ ದೇವರು ಬಂದಿತು; ನನ್ನ ಮನೆ ದೇವರು!” ಎಂದು ಉಬ್ಬಿಹೋದನು; ಅವರ ಕಾಲಿಗೆ ಬಿಸಿನೀರು ಎರೆದನು. ಹಾಲು ಹಣ್ಣು ತಂದೊಪ್ಪಿಸಿದನು. ಬೆಚ್ಚಗೆ ಇರುವೆಡೆಯಲ್ಲಿ ಹಾಸಿ, ಮಲಗಿಸಿದನು. ಮನೆಯ ಮಂದಿ ಮಕ್ಕಳೆಲ್ಲರೂ ಬಂದು ಉಪಚರಿಸಿದರು. ಗೌಡನು ಕುದುರೆಗೆ ಚನ್ನಾಗಿ ಮೈತಿಕ್ಕಿಸಿ, ಬೇಯಿಸಿದ ಹುರುಳಿಯನ್ನು ಇಟ್ಟು, ಹೊಸಹುಲ್ಲನ್ನು ಹಾಕಿ ಆದರಿಸಿದನು. ಬಂದಿದ್ದವರು ಮಹಾರಾಜರು.

ಬೆಳಗಾಗುವ ವೇಳೆಗೆ ದಂಡು ದಾಳಿಯವರೆಲ್ಲರೂ ದೊರೆಗಳನ್ನು ಹುಡುಕಿಕೊಂಡು ಬಂದು ಗೌಡನ ಮನೆಯ ಬಾಗಿಲಲ್ಲಿ ನಿಂತಿದ್ದರು. ದೊರೆಗಳು ಎದ್ದು ಈಚೆಗೆ ಬರುತ್ತಲೆ ಎಲ್ಲರೂ ಒಬ್ಬೊಬ್ಬರಾಗಿ ಬಂದು ಕಾಣಿಸಿಕೊಂಡು ಕೈ ಮುಗಿದರು.

ದೊರೆಗಳು ಗೌಡನನ್ನು ಹತ್ತಿರಕ್ಕೆ ಕರೆದು, “ಗೌಡ! ನೀನು ನಮಗೆ ಬಲು ಉಪಕಾರ ಮಾಡಿದೆ” ಎಂದು ಬಹಳವಾಗಿ ಹೊಗಳಿದರು. ಗೌಡನು “ಬಿಡು ನಮ್ಮಪ್ಪ! ನೀನು ನಮಗೆಲ್ಲ ಹೆತ್ತತಾಯಿಗಿಂತೆ ಹೆಚ್ಚು. ಸಮಯ ಬಂದರೆ ಪ್ರಾಣ ಕೂಡಾ ನಿನ್ನ ಪಾದಕ್ಕೆ ಒಬ್ಬಸಬೇಡವೇ? ಅಂಥಾದ್ದರಲ್ಲಿ ಇದೇನು ಹೆಚ್ಚು?” ಎಂದನು. ದೊರೆಗಳು ಅವನ ರಾಜಭಕ್ತಿಗೆ ಮೆಚ್ಚಿ ಆ ಹಳ್ಳಿಯನ್ನೇ ಅವನಿಗೆ ಮಾನ್ಯವಾಗಿ ಕೊಟ್ಟರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...