Home / ಬಾಲ ಚಿಲುಮೆ / ಕಥೆ / ಸೋಮೇಗೌಡ

ಸೋಮೇಗೌಡ

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ ಕುಳಿತವರು “ಈ ಊರಿನ ಪಟೇಲನು ಯಾರು?” ಎಂದು ವಿಚಾರಿಸಿಕೊಂಡು ಬಂದರು. ಗೌಡನು ತಾನೇ ಮುಂದೆ ಬಂದು “ನೀವು ಯಾರಪ್ಪಾ?” ಎಂದು ಕೇಳಿದನು. ಬಂದವರು “ಅಯ್ಯಾ! ನಾನೊಬ್ಬ ದಾರಿಗನು. ಹಾದಿ ತಪ್ಪಿ ಬಂದಿರುವೆನು. ಈ ರಾತ್ರಿ ತಂಗುವುದಕ್ಕೆ ನನಗೆ ಕೊಂಚ ತಾವನ್ನು ಕೊಡಬೇಕು” ಎಂದರು. ಗೌಡನು “ಅದಕ್ಕೇನಪ್ಪ! ಬಾ!” ಎಂದು ಮನೆಗೆ ಕರೆದುಕೊಂಡು ಹೋದನು.

ಮನೆಯೊಳಗೆ ದೀಪದ ಬೆಳಕಿಗೆ ಹೋಗುತ್ತಲೇ ಬಂದಿರುವವರು ಯಾರು ಎಂಬುದು ಗೌಡನಿಗೆ ತಿಳಿಯಿತು. ಅವನು ಕೂಡಲೆ ಕಾಲಿಗೆ ಬಿದ್ದು “ನನ್ನ ಮನೆ ದೇವರು ಬಂದಿತು; ನನ್ನ ಮನೆ ದೇವರು!” ಎಂದು ಉಬ್ಬಿಹೋದನು; ಅವರ ಕಾಲಿಗೆ ಬಿಸಿನೀರು ಎರೆದನು. ಹಾಲು ಹಣ್ಣು ತಂದೊಪ್ಪಿಸಿದನು. ಬೆಚ್ಚಗೆ ಇರುವೆಡೆಯಲ್ಲಿ ಹಾಸಿ, ಮಲಗಿಸಿದನು. ಮನೆಯ ಮಂದಿ ಮಕ್ಕಳೆಲ್ಲರೂ ಬಂದು ಉಪಚರಿಸಿದರು. ಗೌಡನು ಕುದುರೆಗೆ ಚನ್ನಾಗಿ ಮೈತಿಕ್ಕಿಸಿ, ಬೇಯಿಸಿದ ಹುರುಳಿಯನ್ನು ಇಟ್ಟು, ಹೊಸಹುಲ್ಲನ್ನು ಹಾಕಿ ಆದರಿಸಿದನು. ಬಂದಿದ್ದವರು ಮಹಾರಾಜರು.

ಬೆಳಗಾಗುವ ವೇಳೆಗೆ ದಂಡು ದಾಳಿಯವರೆಲ್ಲರೂ ದೊರೆಗಳನ್ನು ಹುಡುಕಿಕೊಂಡು ಬಂದು ಗೌಡನ ಮನೆಯ ಬಾಗಿಲಲ್ಲಿ ನಿಂತಿದ್ದರು. ದೊರೆಗಳು ಎದ್ದು ಈಚೆಗೆ ಬರುತ್ತಲೆ ಎಲ್ಲರೂ ಒಬ್ಬೊಬ್ಬರಾಗಿ ಬಂದು ಕಾಣಿಸಿಕೊಂಡು ಕೈ ಮುಗಿದರು.

ದೊರೆಗಳು ಗೌಡನನ್ನು ಹತ್ತಿರಕ್ಕೆ ಕರೆದು, “ಗೌಡ! ನೀನು ನಮಗೆ ಬಲು ಉಪಕಾರ ಮಾಡಿದೆ” ಎಂದು ಬಹಳವಾಗಿ ಹೊಗಳಿದರು. ಗೌಡನು “ಬಿಡು ನಮ್ಮಪ್ಪ! ನೀನು ನಮಗೆಲ್ಲ ಹೆತ್ತತಾಯಿಗಿಂತೆ ಹೆಚ್ಚು. ಸಮಯ ಬಂದರೆ ಪ್ರಾಣ ಕೂಡಾ ನಿನ್ನ ಪಾದಕ್ಕೆ ಒಬ್ಬಸಬೇಡವೇ? ಅಂಥಾದ್ದರಲ್ಲಿ ಇದೇನು ಹೆಚ್ಚು?” ಎಂದನು. ದೊರೆಗಳು ಅವನ ರಾಜಭಕ್ತಿಗೆ ಮೆಚ್ಚಿ ಆ ಹಳ್ಳಿಯನ್ನೇ ಅವನಿಗೆ ಮಾನ್ಯವಾಗಿ ಕೊಟ್ಟರು.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...