Home / ಬಾಲ ಚಿಲುಮೆ / ಕಥೆ / ಸೋಮೇಗೌಡ

ಸೋಮೇಗೌಡ

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ ಕುಳಿತವರು “ಈ ಊರಿನ ಪಟೇಲನು ಯಾರು?” ಎಂದು ವಿಚಾರಿಸಿಕೊಂಡು ಬಂದರು. ಗೌಡನು ತಾನೇ ಮುಂದೆ ಬಂದು “ನೀವು ಯಾರಪ್ಪಾ?” ಎಂದು ಕೇಳಿದನು. ಬಂದವರು “ಅಯ್ಯಾ! ನಾನೊಬ್ಬ ದಾರಿಗನು. ಹಾದಿ ತಪ್ಪಿ ಬಂದಿರುವೆನು. ಈ ರಾತ್ರಿ ತಂಗುವುದಕ್ಕೆ ನನಗೆ ಕೊಂಚ ತಾವನ್ನು ಕೊಡಬೇಕು” ಎಂದರು. ಗೌಡನು “ಅದಕ್ಕೇನಪ್ಪ! ಬಾ!” ಎಂದು ಮನೆಗೆ ಕರೆದುಕೊಂಡು ಹೋದನು.

ಮನೆಯೊಳಗೆ ದೀಪದ ಬೆಳಕಿಗೆ ಹೋಗುತ್ತಲೇ ಬಂದಿರುವವರು ಯಾರು ಎಂಬುದು ಗೌಡನಿಗೆ ತಿಳಿಯಿತು. ಅವನು ಕೂಡಲೆ ಕಾಲಿಗೆ ಬಿದ್ದು “ನನ್ನ ಮನೆ ದೇವರು ಬಂದಿತು; ನನ್ನ ಮನೆ ದೇವರು!” ಎಂದು ಉಬ್ಬಿಹೋದನು; ಅವರ ಕಾಲಿಗೆ ಬಿಸಿನೀರು ಎರೆದನು. ಹಾಲು ಹಣ್ಣು ತಂದೊಪ್ಪಿಸಿದನು. ಬೆಚ್ಚಗೆ ಇರುವೆಡೆಯಲ್ಲಿ ಹಾಸಿ, ಮಲಗಿಸಿದನು. ಮನೆಯ ಮಂದಿ ಮಕ್ಕಳೆಲ್ಲರೂ ಬಂದು ಉಪಚರಿಸಿದರು. ಗೌಡನು ಕುದುರೆಗೆ ಚನ್ನಾಗಿ ಮೈತಿಕ್ಕಿಸಿ, ಬೇಯಿಸಿದ ಹುರುಳಿಯನ್ನು ಇಟ್ಟು, ಹೊಸಹುಲ್ಲನ್ನು ಹಾಕಿ ಆದರಿಸಿದನು. ಬಂದಿದ್ದವರು ಮಹಾರಾಜರು.

ಬೆಳಗಾಗುವ ವೇಳೆಗೆ ದಂಡು ದಾಳಿಯವರೆಲ್ಲರೂ ದೊರೆಗಳನ್ನು ಹುಡುಕಿಕೊಂಡು ಬಂದು ಗೌಡನ ಮನೆಯ ಬಾಗಿಲಲ್ಲಿ ನಿಂತಿದ್ದರು. ದೊರೆಗಳು ಎದ್ದು ಈಚೆಗೆ ಬರುತ್ತಲೆ ಎಲ್ಲರೂ ಒಬ್ಬೊಬ್ಬರಾಗಿ ಬಂದು ಕಾಣಿಸಿಕೊಂಡು ಕೈ ಮುಗಿದರು.

ದೊರೆಗಳು ಗೌಡನನ್ನು ಹತ್ತಿರಕ್ಕೆ ಕರೆದು, “ಗೌಡ! ನೀನು ನಮಗೆ ಬಲು ಉಪಕಾರ ಮಾಡಿದೆ” ಎಂದು ಬಹಳವಾಗಿ ಹೊಗಳಿದರು. ಗೌಡನು “ಬಿಡು ನಮ್ಮಪ್ಪ! ನೀನು ನಮಗೆಲ್ಲ ಹೆತ್ತತಾಯಿಗಿಂತೆ ಹೆಚ್ಚು. ಸಮಯ ಬಂದರೆ ಪ್ರಾಣ ಕೂಡಾ ನಿನ್ನ ಪಾದಕ್ಕೆ ಒಬ್ಬಸಬೇಡವೇ? ಅಂಥಾದ್ದರಲ್ಲಿ ಇದೇನು ಹೆಚ್ಚು?” ಎಂದನು. ದೊರೆಗಳು ಅವನ ರಾಜಭಕ್ತಿಗೆ ಮೆಚ್ಚಿ ಆ ಹಳ್ಳಿಯನ್ನೇ ಅವನಿಗೆ ಮಾನ್ಯವಾಗಿ ಕೊಟ್ಟರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...