ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು “ಬೇರೆ ಕಡೆಯಲ್ಲಿ ಕಲಿತು ಬರುವೆನು” ಎಂದು ಆಣೆಯಿಟ್ಟುಕೊಂಡನು.

ಆಗಿನ ಕಾಲದಲ್ಲಿ ಪರಶುರಾಮರನ್ನು ಬಿಟ್ಟರೆ, ದ್ರೋಣಾಚಾರ್ಯರನ್ನು ಮೀರಿಸಿದವರು ಯಾರೂ ಇರಲಿಲ್ಲ. ಅದರಿಂದ ಕರ್‍ಣನು ಅವರ ಬಳಿಗೇ ಹೋದನು. ಅವರು ಬ್ರಾಹ್ಮಣರಲ್ಲದವರಿಗೆ ವಿದ್ಯೆಯನ್ನು ಹೇಳುತ್ತಿರಲಿಲ್ಲ. ಕರ್ಣನು “ತಾನೂ ಬ್ರಾಹ್ಮಣನು” ಎಂದು ಸಟೆಯಾಡಿದನು. ಅವರು ಅದು ದಿಟಿನೆಂದು ನಂಬಿ ಅವನನ್ನು ಶಿಷ್ಯನನ್ನಾಗಿ ಸೇರಿಸಿಕೊಂಡರು.

ಆದರೆ ಈ ಕಪಟವು ಬಹಳ ಕಾಲದವರೆಗೆ ಹೊರಬೀಳಲಿಲ್ಲ. ಕರ್‍ಣನು ಬ್ರಾಹ್ಮಣನೆಂದೇ ಪರಶುರಾಮರು ವಿದ್ಯೆಯನ್ನೆಲ್ಲಾ ಹೇಳಿಕೊಟ್ಟರು. ಇನ್ನು ಕೆಲವು ದಿನವಾದರೆ ಎಲ್ಲವೂ ಮುಗಿದು ಕರ್‍ಣನು ಹಿಂತಿರುಗಬಹುದು. ಆಗ ಒಂದು ದಿನ ಅವನ ಗುಟ್ಟು ಹೊರಬಿತ್ತು. “ಕರ್‍ಣನು ಬ್ರಾಹ್ಮಣನಲ್ಲ” ಎಂಬುದು ಅವರಿಗೆ ತಿಳಿದುಹೋಯಿತು. ಸಟೆಯಾಡಿ ಮೋಸ ಮಾಡಿದನೆಂದು ಅವರಿಗೆ ಬಹಳ ಸಿಟ್ಟು ಬಂತು. “ಸುಳ್ಳು ಹೇಳಿ ಮೋಸದಿಂದ ಈ ವಿದ್ಯೆಯನ್ನು ಸಂಪಾದಿಸಿದೆ. ಇದು ನಿನಗೆ ಸಮಯದಲ್ಲಿ ಫಲಿಸದೆ ಹೋಗಲಿ” ಎಂದು ಹೇಳಿಬಿಟ್ಟರು.

ಅದರಂತೆಯೇ ಕರ್‍ಣನು ಯುದ್ಧಕ್ಕೆ ಹೋದಾಗಲೆಲ್ಲಾ ಅವನಿಗೆ ಬಾಣ ವಿದ್ಯೆಯು ಮರೆತು ಹೋಗುತ್ತಿತ್ತು. ಅದರಿಂದಲೇ ಅವನಿಗೆ ಸಾವೂ ಬಂದಿತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...