ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು “ಬೇರೆ ಕಡೆಯಲ್ಲಿ ಕಲಿತು ಬರುವೆನು” ಎಂದು ಆಣೆಯಿಟ್ಟುಕೊಂಡನು.

ಆಗಿನ ಕಾಲದಲ್ಲಿ ಪರಶುರಾಮರನ್ನು ಬಿಟ್ಟರೆ, ದ್ರೋಣಾಚಾರ್ಯರನ್ನು ಮೀರಿಸಿದವರು ಯಾರೂ ಇರಲಿಲ್ಲ. ಅದರಿಂದ ಕರ್‍ಣನು ಅವರ ಬಳಿಗೇ ಹೋದನು. ಅವರು ಬ್ರಾಹ್ಮಣರಲ್ಲದವರಿಗೆ ವಿದ್ಯೆಯನ್ನು ಹೇಳುತ್ತಿರಲಿಲ್ಲ. ಕರ್ಣನು “ತಾನೂ ಬ್ರಾಹ್ಮಣನು” ಎಂದು ಸಟೆಯಾಡಿದನು. ಅವರು ಅದು ದಿಟಿನೆಂದು ನಂಬಿ ಅವನನ್ನು ಶಿಷ್ಯನನ್ನಾಗಿ ಸೇರಿಸಿಕೊಂಡರು.

ಆದರೆ ಈ ಕಪಟವು ಬಹಳ ಕಾಲದವರೆಗೆ ಹೊರಬೀಳಲಿಲ್ಲ. ಕರ್‍ಣನು ಬ್ರಾಹ್ಮಣನೆಂದೇ ಪರಶುರಾಮರು ವಿದ್ಯೆಯನ್ನೆಲ್ಲಾ ಹೇಳಿಕೊಟ್ಟರು. ಇನ್ನು ಕೆಲವು ದಿನವಾದರೆ ಎಲ್ಲವೂ ಮುಗಿದು ಕರ್‍ಣನು ಹಿಂತಿರುಗಬಹುದು. ಆಗ ಒಂದು ದಿನ ಅವನ ಗುಟ್ಟು ಹೊರಬಿತ್ತು. “ಕರ್‍ಣನು ಬ್ರಾಹ್ಮಣನಲ್ಲ” ಎಂಬುದು ಅವರಿಗೆ ತಿಳಿದುಹೋಯಿತು. ಸಟೆಯಾಡಿ ಮೋಸ ಮಾಡಿದನೆಂದು ಅವರಿಗೆ ಬಹಳ ಸಿಟ್ಟು ಬಂತು. “ಸುಳ್ಳು ಹೇಳಿ ಮೋಸದಿಂದ ಈ ವಿದ್ಯೆಯನ್ನು ಸಂಪಾದಿಸಿದೆ. ಇದು ನಿನಗೆ ಸಮಯದಲ್ಲಿ ಫಲಿಸದೆ ಹೋಗಲಿ” ಎಂದು ಹೇಳಿಬಿಟ್ಟರು.

ಅದರಂತೆಯೇ ಕರ್‍ಣನು ಯುದ್ಧಕ್ಕೆ ಹೋದಾಗಲೆಲ್ಲಾ ಅವನಿಗೆ ಬಾಣ ವಿದ್ಯೆಯು ಮರೆತು ಹೋಗುತ್ತಿತ್ತು. ಅದರಿಂದಲೇ ಅವನಿಗೆ ಸಾವೂ ಬಂದಿತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...