Home / ಬಾಲ ಚಿಲುಮೆ / ಕಥೆ / ಗರುಡನೂ ಗೂಬೆಯೂ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯೇ ಆರಸಾಗಬೇಕು” ಎಂದವು.

ಇದೆಲ್ಲಾ ನಡೆಯುವವರೆಗೂ ಕಾಗೆಯು ಒಂದು ಮೂಲೆಯಲ್ಲಿ ಕುಳಿತಿತ್ತು. “ಕೊಳಕನಾದ ಗೂಬೆಯು ದೊರೆಯಾಗುವುದೆಂದರೇನು?” ಎಂದು ಎಲ್ಲರಿಗೂ ಅಸಹ್ಯವಾಗಿತ್ತು. ಆದರೂ ಮಾತನಾಡದೆ ಎಲ್ಲರೂ ಸುಮ್ಮನಿದ್ದರು. ಆಗ ಕಾಗೆಯು ಎದ್ದು ನಿಂತುಕೊಂಡು “ಸ್ವಾಮಿ! ಕೊಂಚ ತಡೆಯಿರಿ. ಗೂಬೆಯನ್ನು ಎಲ್ಲರೂ ಕೊಂಚ ಕಣ್ಣಿಟ್ಟು ನೋಡಿರಿ. ಜಗತ್ತಿನಲ್ಲಿ ಇಂತಹ ಕೊಳಕು ಹಕ್ಕಿಯು ಇನ್ನು ಉಂಟೆ? ಮುಖವನ್ನು ತೊಳೆದು ಎಷ್ಟು ದಿವಸವಾಯಿತೋ? ಮೈಯ್ಯನ್ನು ತೊಳೆವುದಂತೂ ಉಂಟೋ ಇಲ್ಲವೇ ಇಲ್ಲವೋ? ಆ ಕಣ್ಣುಗಳನ್ನು ನೋಡಿ. ಜಿಬರು ಗುಡ್ಡೆ ಗುಡ್ಡೆಯಾಗಿದೆ. ಮೂಗು ನೋಡಿ. ಸಿಂಬಳವು ಹರಿಯುತ್ತಿದೆ. ಇಂತಹ ಶೊಬಚನನ್ನು ಅರಸಾಗಿ ಮಾಡಿಕೊಂಡರೆ ಎಲ್ಲರೂ ನಗುವರು. ಅತ್ತ ನೋಡಿ. ಶುಚಿವಂತನಾದ ಗರುಡನು ಕುಳಿತಿರುವನು. ಯಾವಾಗ ನೋಡಿದರೂ ಮಡಿಯಾಗಿಯೇ ಇರುವನು. ಆತನನ್ನು ನೋಡಿದರೆ ಎಷ್ಟು ಸಂತೋಷವಾಗುವುದು! ಆತನ ಶುಚಿಯನ್ನು ನೋಡಿಯೇ ಭಗವಂತನಾದ ವಿಷ್ಣುವೂ ಆತನನ್ನು ಮೆಚ್ಚಿಕೊಂಡಿರುವನು. ಆತನನ್ನೇ ದೊರೆಯನ್ನು ಮಾಡಬೇಕು. ಈ ಕೊಳಕನನ್ನು ಹೊರಕ್ಕೆ ನೂಕಬೇಕು” ಎಂದಿತು. ಉಳಿದ ಹಕ್ಕಿಗಳು “ಹೌದು. ಗೂಬೆಯನ್ನು ನೂಕಿ. ಗರುಡನಿಗೇ ಪಟ್ಟಿಕಟ್ಟರಿ” ಎಂದವು. ಎಲ್ಲರೂ ಸೇರಿ ಹಾಗೆಯೇ ಮಾಡಿದರು. ಅರಸುತನವು ಗೂಬೆಗೆ ತಪ್ಪಿ ಗರುಡನಿಗೇ ಆಯಿತು.

“ತನ್ನ ಕೊಳಕುತನದಿಂದ ದೊರೆತನವನ್ನು ತಪ್ಪಿಸಿಕೂಂಡನು” ಎಂದು ಎಲ್ಲರೂ ಹಾಸ್ಯ ಮಾಡುವರು ಎಂದೋ ಏನೋ, ಗೂಬೆಯು ಈಗಲೂ ಹಗಲಿನಲ್ಲಿ ಹೊರಗೆ ಬರುವುದಿಲ್ಲ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...