Home / ಕವನ / ಕವಿತೆ / ಅರಿಷಿಣ ಹಚ್ಚೂ ಹಾಡು – ೧

ಅರಿಷಿಣ ಹಚ್ಚೂ ಹಾಡು – ೧

ದೇವ ದೇವರೆಣ್ಣಿ ಯಾವ ದೇವರೆಣ್ಣಿ|
ಮನಿಯ ದೇವಽರ ಮೊದಲೆಣ್ಣಿ|
ಹರಹರ ನಮ ಸಿವಗ ನೆಯ್ಯೆಣೆ ||೧||

ಬಾಲಽಗೆಣ್ಣಿ ಹಚ್ಚೊಟಿಗೆ ಬಾಗಿಲಿಗೆ ಬಿಸಿಲ್ಬಂದ|
ನಾಲ್ವತ್ತ್ವಾಟಽದ ಎಲಿ ಬಂದ| ಹರಹರ…. ||೨||

ಕಂದಽಗೆಣ್ಣಿ ಹೆಚ್ಚೊಟಿಗೆ ಅಂಗಳಕ ಬಿಸಿಲ್ಬಂದ|
ಐವತ್ತ್ವಾಟಽದ ಎಲಿ ಬಂದ| ಹರಹರ…. ||೩||

ನೀರಿಲ್ಲಽದಂಗಳಾಗ ನೀರ್‍ಯಾಕನಾಗ್ಯಾವ|
ಊರಿಗಿ ದೊಡ್ಡವರ ಮಗ ಮಿಂದ| ಹರಹರ…. ||೪||

ಕೆಸರಿಲ್ಲದಂಗಳಾಗ ಕೆಸರ್‍ಯಾಕನಾಗ್ಯಾವ|
ಹೆಸರಿಗಿ ದೊಡ್ಡವರ ಮಗ ಮಿಂದ| ಹರಹರ…. ||೫||

ಹೆಸರಿಽಗಿ ದೊಡ್ಡವರ ಮಗ ಮಿಂದ ತಮ್ಮಗ।
ಹಸರ ಪಲ್ಲಕ್ಕಿ ನೆರಳಾಗಿ| ಹೆರಹರ…. ||೬||
*****

ಅರಿಸಿಣ ಹಚ್ಚುವುದು ಲಗ್ನದ ಕಾಲದಲ್ಲಿ ಪ್ರಥಮದೀಕ್ಷೆಯುತಿರುವುದು. ವರನಿಗೆ ಅರಿಷಿಣ ಹಚ್ಚುವಾಗ ಇದನ್ನು ಹಾಡುತ್ತಾರೆ. ಆಗ ಮುತ್ತೈದೆಯರು ನೆರೆದು ಹಾಡುತ್ತ, ವರನ ತಲೆಗೆ ವೀಳ್ಯದ ಎಲೆಯಿಂದ ಎಣ್ಣೆಯನ್ನು ಹಚ್ಚಿ, ಮೈಗೆ ಅರಿಸಿಣವನ್ನು ಬಳಿದು, ಸ್ನಾನ ಮಾಡಿಸುವರು.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧ.

ಶಬ್ದಪ್ರಯೋಗಗಳು:- ನಮ ಶಿವರ್=ನಮ್ಮ ಮದುಮಗನಿಗೆ. ನೆಯ್ಯೆಣ್ಣೆ=ಸ್ನಿಗ್ಧವಾದ ಎಣ್ಣೆ. ಹೆಚ್ಚೊಟಿಗೆ=ಹಚ್ಚುವಷ್ಟರಲ್ಲಿ. ತ್ವಾಟ=ತೋಟ.ಎಲಿ=ವೀಳ್ಯದ ಎಲೆ. ನೀರ್ಯಾಕನಾಗ್ಯಾವ=ನೀರೇಕೆ ಆಗಿವೆ.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...