Home / ಕವನ / ಕೋಲಾಟ / ಸುಗ್ಗಿ ಪದ – ಜಾಗಡಿ ಪದ

ಸುಗ್ಗಿ ಪದ – ಜಾಗಡಿ ಪದ

ಅತಾಳ ಪಾತಾಳ ಸಾತಾಳ ರಸತಾಳ
ಭೂತಾಳದೊಳಗೊಂದು ಶಶಿ ಹುಟ್ಟಿ ಕೋಲೇ || ೧ ||

ಭೂತಾಳದೊಳಗೊಂದು ಶಶಿ ಹುಟ್ಟಿ
ಪಾತಾಳಕೆ ಬೇರೂ ಜಿಗಿದಾವೂ ಕೋಲೇ || ೨ ||

ಪಾತಾಳಕೆ ಬೇರೂ ಜಿಗಿದಾವಾ ಶಶಿಯಲ್ಲಿ
ಆಕಾಶಕೆ ಸೈವಾಗಿ ನೆಗುದಾವೇ ಕೋಲೇ || ೩ ||

ಆಕಾಶಕೆ ಸೈವಾಗಿ ನೆಗುದೀತಾ ಶಶೀ
ವೃಕ್ಷವೆಂಬ ಹೆಸರೂ ಬಂದೀತು ಕೋಲೇ || ೪ ||

ವೃಕ್ಷವೆಂಬ ಹೆಸರೂ ಬಂದೀತಾ ಶಶೀಗೇ
ಕಾಯಿ ಹಣ್ಣಾಗಿ ಬೆಳುಗೀತು ಕೋಲೇ || ೫ ||

ಕಾಯಿ ಹಣ್ಣಾಗಿ ಬೆಳುಗಿತಾ ವೃಕ್ಷಕ್ಕೆ
ನೂರ್ವೊಂದು ಕಪಿಗಳು ಯೆರುಗಾವೆ ಕೋಲೇ || ೬ ||

ನೂರ್ವೊಂದು ಕಪಿಗಳು ಯೆರುಗಾವಾ ವೃಕ್ಷಕ್ಕೆ
ಭೂಮೀಗ್ವೊಂದು ಹೆಗಲೂ ಯೆರುಗಾವೆ ಕೋಲೇ || ೭ ||

ಭೂಮೀಗ್ವೊಂದು ಹೆಗಲೂ ಯೆರುಗಾವಾ ವೃಕ್ಷಕ್ಕೆ
ಆಚೇರಿ ತಿಮ್ಮಣ್ಣ ಕಡುತಂದಾ ಕೋಲೇ || ೮ ||

ಆಚೇರಿ ತಿಮ್ಮಣ್ಣ ಕಡುತಂದಾ ಹೆಗಲಾ
ಗುಡುಗಾರ ಬೊಮ್ಮಣ್ಣ ಪಡತಿಕೆತ್ತಿದ ಕೋಲೇ || ೯ ||

ಪಡತಿಕೆತ್ತಿ ಬೆಳಗಿಟ್ಟ ಕೋಲಿಗೆ
ಹೊನೆ ಮಾಣ ದೇವ್ರ ಮುಂದೆ ಮಡುಗಿದರು ಕೋಲೇ || ೧೦ ||

ಹೊನೆ ಮಾಣ ದೇವ್ರ ಮುಂದೆ ಮಡಗೀದಾ ಕೋಲಿಗೆ
ಗಂದಾ ಹೂವನ್ನೆ ಪೂಸಿದರು ಕೋಲೇ || ೧೧ ||

ಗಂದಾ ಹೂವನ್ನೆ ಪೂಸಿದಾ ಕೋಲಿಗೆ
ಹಣ್ಣುವೀಳ್ಯಾವಾ ಇಟ್ಟಿದರು ಕೋಲೇ || ೧೨ ||

ಹಣ್ಣುವೀಳ್ಯಾವಾ ಇಟ್ಟಿದಾ ಕೋಲಿಗೆ
ಕಾಯೊಡದಿ ಕಯ್ಯಾ ಮುಗಿದಾರೂ ಕೋಲೇ || ೧೩ ||

ಕಾಯೊಡದಿ ಕಯ್ಯಾ ಮುಗಿದಾರಾ ಕೋಲಿಗೆ
ಮಂಗಳಾರತಿಯಾ ಬೆಳಗಿದರು ಕೋಲೇ || ೧೪ ||

ಮಲವಯ್ಯನೆಂಬವ ಮಾದೊಡ್ ಶೂರ
ಮಲವಯ್ಯನೆಂಬವ ಮಾದೊಡ್ ಶೂರನು ಕೋಲೇ || ೧೫ ||

ಉಟ್ಟಾ ಮೈಲಿಗೆಯಾ ತೆಗೆಯನು ತೊಳೆಯಾನು ಮಲವಯ್ಯ
ಉಂಡಾ ಯಂಳ್ಳಕೆ ಅಂಜನು ಕೋಲೇ || ೧೬ ||

ಮಲವಯ್ಯಾ ನೆಂಬವ ಮರಕೆ ಹಬ್ಬಿದ ಬಳ್ಳೀ
ಎಂದೀಗೂ ಬಳ್ಳಿ ಹರಿಯಾವು ಕೋಲೇ || ೧೭ ||

ಇಂದೀಗಾ ಬಳ್ಳಿ ಹರಿಯಾವು ಹುಸಿಯಾವು
ಇಂದೀಗಾ ಮರನಾ ಬಿಡಲಾರೆ ಕೋಲೇ || ೧೮ ||

ಮಲವಯ್ಯ ಮಲಗೂವ ಮಂಚಾದ ಕೋಲಿಗೆ
ಜಂತಾದವೆಂಬೂ ಬೊಂಬೇಗಳು ಕೋಲೇ || ೧೯ ||

ಜಂತಾದವೆಂಬೂ ಬೊಂಬೇಗಳು ಮಂಚಕ್ಕೆ
ಇಂದಿಗಾ ಮರನಾ ಬಿಡಲಾರೆ ಕೋಲೇ || ೨೦ ||

ಕೋಲಣ್ಣ ಗಂಗೀಗೂ ಕೋಲಣ್ಣ ಗೌರಿಗೂ
ಕೋಲು ಕೋಲೇನಾ ಕೋಲೆನ್ನ ಕೋಲೇ || ೨೧ ||

ಕಾಲೂ ಬಾಲಾ ಚಂದಾ ಮೇಲೇ ಹೆಗಲೂ ಚಂದಾ
ಬಾಲದಲ್ಲೀ ಚಂದಾ ಬಸುವಯ್ಯಾ ಕೋಲೇ || ೨೨ ||

ಬಾಲದಲ್ಲಿ ಚಂದಾ ಬಸವಯ್ಯಾನಾ ಪಾದಕ್ಕೆ
ಹಣ್ಣುವೀಳ್ಯಾ ಇಟ್ಟು ಶರಣೆಂಬೆ ಕೋಲೇ || ೨೩ ||

ಹಣ್ಣುವೀಳ್ಯಾ ಇಟ್ಟು ಏನಂದಿ ಶರಣಂಬೇ
ನಾವ ಮಾಡುವಾ ಕಾರ್ಯ ಜೀಯ ಎಂದು ಕೋಲೇ || ೨೪ ||

ಕಾಲು ಬಾಲಾ ಚಂದಾ ಮೇಲೆ ಪಾವ್ಡಾ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ಯನ ಕೋಲೇ || ೨೫ ||

ಹಾಲಗಾಯೀ ವಡೂದೂ ಬಸವಯ್ಯನ ಪಾದಕ್ಕೆ
ಹಾಲಗಾಯೀ ವಡುದೂ ಶರಣಂಬೆ ಕೋಲೇ || ೨೬ ||

ಹಾಲಗಾಯೀ ವಡುದೂ ಏನಂದಿ ಶರಣಂಬೇ?
ನಾವ ಮಾಡೂವಾ ಕಾಯಕ ಜಂಬುವೆಂದೂ ಕೋಲೇ || ೨೭ ||

ಕಾಲೂ ಬಾಲಾ ಚಂದಾ ಮೇಲೇ ಶೊಂಬೂ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ನ ಕೋಲೇ || ೨೮ ||

ಬಾಲಾದಲ್ಲಿ ಚಂದಾ ಬಸುವಯ್ನ ಪಾದಕ್ಕೆ
ಮಂಗಲಾರತಿಯಾ ಬೆಳಗಿರೇ ಕೋಲೇ || ೨೯ ||

ಮಂಗಲಾರತಿಯಾ ಬೆಳಗಿರೇ ಬಸುವಯ್ಯಗೇ
ನಾವು ಮಾಡುವಾ ಕಾರ್ಯಾ ಜಯವೆಂದೂ ಕೋಲೇ || ೩೦ ||
*****
ಹೇಳಿದವರು: ಶ್ರೀ ಮಂಜು ಬಡವ ನಾಯ್ಕ, ಹೊನ್ನಾಕುಳಿ, ೨೪/೧೦/೭೨

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...