Home / ಕವನ / ಕೋಲಾಟ / ಸುಗ್ಗಿ ಪದ – ಜಾಗಡಿ ಪದ

ಸುಗ್ಗಿ ಪದ – ಜಾಗಡಿ ಪದ

ಅತಾಳ ಪಾತಾಳ ಸಾತಾಳ ರಸತಾಳ
ಭೂತಾಳದೊಳಗೊಂದು ಶಶಿ ಹುಟ್ಟಿ ಕೋಲೇ || ೧ ||

ಭೂತಾಳದೊಳಗೊಂದು ಶಶಿ ಹುಟ್ಟಿ
ಪಾತಾಳಕೆ ಬೇರೂ ಜಿಗಿದಾವೂ ಕೋಲೇ || ೨ ||

ಪಾತಾಳಕೆ ಬೇರೂ ಜಿಗಿದಾವಾ ಶಶಿಯಲ್ಲಿ
ಆಕಾಶಕೆ ಸೈವಾಗಿ ನೆಗುದಾವೇ ಕೋಲೇ || ೩ ||

ಆಕಾಶಕೆ ಸೈವಾಗಿ ನೆಗುದೀತಾ ಶಶೀ
ವೃಕ್ಷವೆಂಬ ಹೆಸರೂ ಬಂದೀತು ಕೋಲೇ || ೪ ||

ವೃಕ್ಷವೆಂಬ ಹೆಸರೂ ಬಂದೀತಾ ಶಶೀಗೇ
ಕಾಯಿ ಹಣ್ಣಾಗಿ ಬೆಳುಗೀತು ಕೋಲೇ || ೫ ||

ಕಾಯಿ ಹಣ್ಣಾಗಿ ಬೆಳುಗಿತಾ ವೃಕ್ಷಕ್ಕೆ
ನೂರ್ವೊಂದು ಕಪಿಗಳು ಯೆರುಗಾವೆ ಕೋಲೇ || ೬ ||

ನೂರ್ವೊಂದು ಕಪಿಗಳು ಯೆರುಗಾವಾ ವೃಕ್ಷಕ್ಕೆ
ಭೂಮೀಗ್ವೊಂದು ಹೆಗಲೂ ಯೆರುಗಾವೆ ಕೋಲೇ || ೭ ||

ಭೂಮೀಗ್ವೊಂದು ಹೆಗಲೂ ಯೆರುಗಾವಾ ವೃಕ್ಷಕ್ಕೆ
ಆಚೇರಿ ತಿಮ್ಮಣ್ಣ ಕಡುತಂದಾ ಕೋಲೇ || ೮ ||

ಆಚೇರಿ ತಿಮ್ಮಣ್ಣ ಕಡುತಂದಾ ಹೆಗಲಾ
ಗುಡುಗಾರ ಬೊಮ್ಮಣ್ಣ ಪಡತಿಕೆತ್ತಿದ ಕೋಲೇ || ೯ ||

ಪಡತಿಕೆತ್ತಿ ಬೆಳಗಿಟ್ಟ ಕೋಲಿಗೆ
ಹೊನೆ ಮಾಣ ದೇವ್ರ ಮುಂದೆ ಮಡುಗಿದರು ಕೋಲೇ || ೧೦ ||

ಹೊನೆ ಮಾಣ ದೇವ್ರ ಮುಂದೆ ಮಡಗೀದಾ ಕೋಲಿಗೆ
ಗಂದಾ ಹೂವನ್ನೆ ಪೂಸಿದರು ಕೋಲೇ || ೧೧ ||

ಗಂದಾ ಹೂವನ್ನೆ ಪೂಸಿದಾ ಕೋಲಿಗೆ
ಹಣ್ಣುವೀಳ್ಯಾವಾ ಇಟ್ಟಿದರು ಕೋಲೇ || ೧೨ ||

ಹಣ್ಣುವೀಳ್ಯಾವಾ ಇಟ್ಟಿದಾ ಕೋಲಿಗೆ
ಕಾಯೊಡದಿ ಕಯ್ಯಾ ಮುಗಿದಾರೂ ಕೋಲೇ || ೧೩ ||

ಕಾಯೊಡದಿ ಕಯ್ಯಾ ಮುಗಿದಾರಾ ಕೋಲಿಗೆ
ಮಂಗಳಾರತಿಯಾ ಬೆಳಗಿದರು ಕೋಲೇ || ೧೪ ||

ಮಲವಯ್ಯನೆಂಬವ ಮಾದೊಡ್ ಶೂರ
ಮಲವಯ್ಯನೆಂಬವ ಮಾದೊಡ್ ಶೂರನು ಕೋಲೇ || ೧೫ ||

ಉಟ್ಟಾ ಮೈಲಿಗೆಯಾ ತೆಗೆಯನು ತೊಳೆಯಾನು ಮಲವಯ್ಯ
ಉಂಡಾ ಯಂಳ್ಳಕೆ ಅಂಜನು ಕೋಲೇ || ೧೬ ||

ಮಲವಯ್ಯಾ ನೆಂಬವ ಮರಕೆ ಹಬ್ಬಿದ ಬಳ್ಳೀ
ಎಂದೀಗೂ ಬಳ್ಳಿ ಹರಿಯಾವು ಕೋಲೇ || ೧೭ ||

ಇಂದೀಗಾ ಬಳ್ಳಿ ಹರಿಯಾವು ಹುಸಿಯಾವು
ಇಂದೀಗಾ ಮರನಾ ಬಿಡಲಾರೆ ಕೋಲೇ || ೧೮ ||

ಮಲವಯ್ಯ ಮಲಗೂವ ಮಂಚಾದ ಕೋಲಿಗೆ
ಜಂತಾದವೆಂಬೂ ಬೊಂಬೇಗಳು ಕೋಲೇ || ೧೯ ||

ಜಂತಾದವೆಂಬೂ ಬೊಂಬೇಗಳು ಮಂಚಕ್ಕೆ
ಇಂದಿಗಾ ಮರನಾ ಬಿಡಲಾರೆ ಕೋಲೇ || ೨೦ ||

ಕೋಲಣ್ಣ ಗಂಗೀಗೂ ಕೋಲಣ್ಣ ಗೌರಿಗೂ
ಕೋಲು ಕೋಲೇನಾ ಕೋಲೆನ್ನ ಕೋಲೇ || ೨೧ ||

ಕಾಲೂ ಬಾಲಾ ಚಂದಾ ಮೇಲೇ ಹೆಗಲೂ ಚಂದಾ
ಬಾಲದಲ್ಲೀ ಚಂದಾ ಬಸುವಯ್ಯಾ ಕೋಲೇ || ೨೨ ||

ಬಾಲದಲ್ಲಿ ಚಂದಾ ಬಸವಯ್ಯಾನಾ ಪಾದಕ್ಕೆ
ಹಣ್ಣುವೀಳ್ಯಾ ಇಟ್ಟು ಶರಣೆಂಬೆ ಕೋಲೇ || ೨೩ ||

ಹಣ್ಣುವೀಳ್ಯಾ ಇಟ್ಟು ಏನಂದಿ ಶರಣಂಬೇ
ನಾವ ಮಾಡುವಾ ಕಾರ್ಯ ಜೀಯ ಎಂದು ಕೋಲೇ || ೨೪ ||

ಕಾಲು ಬಾಲಾ ಚಂದಾ ಮೇಲೆ ಪಾವ್ಡಾ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ಯನ ಕೋಲೇ || ೨೫ ||

ಹಾಲಗಾಯೀ ವಡೂದೂ ಬಸವಯ್ಯನ ಪಾದಕ್ಕೆ
ಹಾಲಗಾಯೀ ವಡುದೂ ಶರಣಂಬೆ ಕೋಲೇ || ೨೬ ||

ಹಾಲಗಾಯೀ ವಡುದೂ ಏನಂದಿ ಶರಣಂಬೇ?
ನಾವ ಮಾಡೂವಾ ಕಾಯಕ ಜಂಬುವೆಂದೂ ಕೋಲೇ || ೨೭ ||

ಕಾಲೂ ಬಾಲಾ ಚಂದಾ ಮೇಲೇ ಶೊಂಬೂ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ನ ಕೋಲೇ || ೨೮ ||

ಬಾಲಾದಲ್ಲಿ ಚಂದಾ ಬಸುವಯ್ನ ಪಾದಕ್ಕೆ
ಮಂಗಲಾರತಿಯಾ ಬೆಳಗಿರೇ ಕೋಲೇ || ೨೯ ||

ಮಂಗಲಾರತಿಯಾ ಬೆಳಗಿರೇ ಬಸುವಯ್ಯಗೇ
ನಾವು ಮಾಡುವಾ ಕಾರ್ಯಾ ಜಯವೆಂದೂ ಕೋಲೇ || ೩೦ ||
*****
ಹೇಳಿದವರು: ಶ್ರೀ ಮಂಜು ಬಡವ ನಾಯ್ಕ, ಹೊನ್ನಾಕುಳಿ, ೨೪/೧೦/೭೨

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...