Home / ಕವನ / ಕೋಲಾಟ / ಮದುವೆಗೆ ಶೃಂಗಾರ ಗೈದ

ಮದುವೆಗೆ ಶೃಂಗಾರ ಗೈದ

(ಕೋಲಾಟದ ಪದ)

ತಾನತನ್ನನಾಲೋ ತಂದನ್ನಾನಾ
ತನನ ತಂದನ್ನಾಲೋ ತಂದನ್ನಾನಾ || ಪಲ್ಲವಿ ||

ಯಜಮನ ಗೌಡಾ ರಾಯನಲ್ಲೋ (ಲಂಬೊ ರಾಯ)
ಮಗನಿಗೆ ಮದಿಯ ಮಾಡಬೇಕಂದ || ೧ ||

ಮಗನಿಗೆ ಮದಿಯ ಮಾಡಬೇಕಂದ
ಬಾಜರ ಮನೆಗೆ ಹೋಗವನಲ್ಲೋ
ಬಾಜರ ಮನೆಗೆ ಹೋಗವನಲ್ಲೋ
ಬಾಜರ ಹೆಣ್ಣ ಕೇಳವನಲ್ಲೋ || ೨ ||

ಬಾಜರ ಹೆಣ್ಣ ಕೇಳವಾಗೆ
ಹೆಣ್ಣ ಕೇಳಿ ಭರವಸೆ ಮಾಡಿ
ಹೆಣ್ಣ ಕೇಳಿ ಭರವಸೆ ಮಾಡಿ
ತಿರಗಿ ಮನೆಗೆ ಬರುವಾನಲ್ಲೋ || ೩ ||

ತಿರಗಿ ಮನೆಗೆ ಬಂದೆಕಂಡೇ
ಹೇಳುಲೂರಿಗೆ ಹೇಳಿಕೆ ಮಾಡಿ
ಹೇಳುಲೂರಿಗೆ ಹೇಳಿಕೆ ಮಾಡಿ
ಹೇಳದಿದ್ದ ಊರಿಗೆ ಡಂಗರ ಶರದ || ೪ ||

ದೂರಿನೂರಿಗೆ ಡಂಗರ ಹೋ ಡದಿ
ಕೂಡಿಸೂರಿಗೆ ವಾಲಿ ಬರೆದ
ಕೂಡಿಸೂರಿಗೆ ವಾಲಿ ಬರೆದ
ಬೇಳೆಬೆಲ್ಲ ಶಾಮನ ಕೂಡೇ || ೫ ||

ಬೇಳೆಬೆಲ್ಲ ಶಾಮನ ಕೂಡೇ
ಬಾಕಲ ಮುಂದೆ ತೋರಣಗೈದ
ಬಾಕಲ ಮುಂದೆ ತೋರಣಗೈದ
ಬಾಗಿಲಿಗೆ ಮುತ್ತೆಲ್ಲಾ ಸುರದ || ೬ ||

ಬಾಗಿಲಿಗೆ ಮುತ್ತೆಲ್ಲಾ ಸುರದ
ದೊಣಪೆಗೆ ತೋರಣವ ಗೈದ
ದೊಣಪೆಗೆ ತೋರಣವ ಗೈದ
ಮದಿವಿಗೆ ಶೃಂಗಾರಗೈದ (ಶುಂಗಾರ) || ೭ ||

ಯಜಮಾನಗೌಡ ರಾಜನಲ್ಲೋ
ಬಾವನೆಂಟರ ಸೇರುವಾಗೇ (ಸೇಯ್ಯು)
ಬಂದು ಬಳಗ ಸೆಯ್ಯುವಾಗೆ
ಬಂದು ಬಳಗ ಸೆಯ್ಯುವಾಗೆ || ೮ ||

ಮುತ್ತಿನ ಬಾಸಿಂಗ ಸೂಡೇ
ಯಜಮಾನಗೌಡ ರಾಜನಲ್ಲೋ
ಯಜಮಾನಗೌಡ ರಾಜನಲ್ಲೋ
ಮಗನಿಗೆ ಮದಿವೆಯ ಮಾಡಬೇಕೆಂದೆ
ದಿಬ್ಬಣ ಶೋವನ ಹೋಗುವಾಗೆ || ೯ ||

ದಿಬ್ಬಣ ಶೋವನ ಹೋಗುವಾಗೆ
ವಾದಿ ಪೇಪೆ ಹೊಡವರಲ್ಲೋ
ವಾದಿ ಪೇಪೆ ಹೊಡವರಲ್ಲೋ
ಮದ್ದುಗುಂಡು ಶುಡುವಾರಲ್ಲೋ || ೧೦ ||

ದರಕಿಕ್ರೇದರ ಮುರದಂಗಲ್ಲೋ
ಆಕಾಶಬಾಣ ಬಿಡುವಾಗ
ದರಕಿತ್ರೇದರ ಮುರದಂಗಲ್ಲೋ
ಹಗಲುಬತ್ತಿ ನೋ ಡಿದರೆ || ೧೧ ||

ಹಗಲು ಇರುಳುಲಾದರಲಾಗೇ
ಕೋಣನ ಕೊಂಬ ನೋಡಿದರೆ
ದರಕಿತ್ರೇದರ ಮುರದಂಗಲ್ಲೋ
ಯಜಮಾನಗೌಡ ರಾಜನಲ್ಲೋ || ೧೨ ||

ದಿಬ್ಬಣ ಶೋವನ ಹೋಗುವಾಗೇ
ಪಟ್ಟಣದೊಳಗಿನ ಪಟ್ಟಣಶೆಟ್ಟಿ
ದಂಡು ದಾವುಳಿ ಬರತಿದಂದೇ
ಪಟ್ಣ ಬಿಟ್ಟಾಕಿ ಓಡಿಹೋದ || ೧೩ ||
*****
ಹೇಳಿದವರು: ದೇವು ನಾಗು ಗುನಗ, ಅಡಲೂರು

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...