Home / ಕವನ / ಕೋಲಾಟ / ಮದುವೆಗೆ ಶೃಂಗಾರ ಗೈದ

ಮದುವೆಗೆ ಶೃಂಗಾರ ಗೈದ

(ಕೋಲಾಟದ ಪದ)

ತಾನತನ್ನನಾಲೋ ತಂದನ್ನಾನಾ
ತನನ ತಂದನ್ನಾಲೋ ತಂದನ್ನಾನಾ || ಪಲ್ಲವಿ ||

ಯಜಮನ ಗೌಡಾ ರಾಯನಲ್ಲೋ (ಲಂಬೊ ರಾಯ)
ಮಗನಿಗೆ ಮದಿಯ ಮಾಡಬೇಕಂದ || ೧ ||

ಮಗನಿಗೆ ಮದಿಯ ಮಾಡಬೇಕಂದ
ಬಾಜರ ಮನೆಗೆ ಹೋಗವನಲ್ಲೋ
ಬಾಜರ ಮನೆಗೆ ಹೋಗವನಲ್ಲೋ
ಬಾಜರ ಹೆಣ್ಣ ಕೇಳವನಲ್ಲೋ || ೨ ||

ಬಾಜರ ಹೆಣ್ಣ ಕೇಳವಾಗೆ
ಹೆಣ್ಣ ಕೇಳಿ ಭರವಸೆ ಮಾಡಿ
ಹೆಣ್ಣ ಕೇಳಿ ಭರವಸೆ ಮಾಡಿ
ತಿರಗಿ ಮನೆಗೆ ಬರುವಾನಲ್ಲೋ || ೩ ||

ತಿರಗಿ ಮನೆಗೆ ಬಂದೆಕಂಡೇ
ಹೇಳುಲೂರಿಗೆ ಹೇಳಿಕೆ ಮಾಡಿ
ಹೇಳುಲೂರಿಗೆ ಹೇಳಿಕೆ ಮಾಡಿ
ಹೇಳದಿದ್ದ ಊರಿಗೆ ಡಂಗರ ಶರದ || ೪ ||

ದೂರಿನೂರಿಗೆ ಡಂಗರ ಹೋ ಡದಿ
ಕೂಡಿಸೂರಿಗೆ ವಾಲಿ ಬರೆದ
ಕೂಡಿಸೂರಿಗೆ ವಾಲಿ ಬರೆದ
ಬೇಳೆಬೆಲ್ಲ ಶಾಮನ ಕೂಡೇ || ೫ ||

ಬೇಳೆಬೆಲ್ಲ ಶಾಮನ ಕೂಡೇ
ಬಾಕಲ ಮುಂದೆ ತೋರಣಗೈದ
ಬಾಕಲ ಮುಂದೆ ತೋರಣಗೈದ
ಬಾಗಿಲಿಗೆ ಮುತ್ತೆಲ್ಲಾ ಸುರದ || ೬ ||

ಬಾಗಿಲಿಗೆ ಮುತ್ತೆಲ್ಲಾ ಸುರದ
ದೊಣಪೆಗೆ ತೋರಣವ ಗೈದ
ದೊಣಪೆಗೆ ತೋರಣವ ಗೈದ
ಮದಿವಿಗೆ ಶೃಂಗಾರಗೈದ (ಶುಂಗಾರ) || ೭ ||

ಯಜಮಾನಗೌಡ ರಾಜನಲ್ಲೋ
ಬಾವನೆಂಟರ ಸೇರುವಾಗೇ (ಸೇಯ್ಯು)
ಬಂದು ಬಳಗ ಸೆಯ್ಯುವಾಗೆ
ಬಂದು ಬಳಗ ಸೆಯ್ಯುವಾಗೆ || ೮ ||

ಮುತ್ತಿನ ಬಾಸಿಂಗ ಸೂಡೇ
ಯಜಮಾನಗೌಡ ರಾಜನಲ್ಲೋ
ಯಜಮಾನಗೌಡ ರಾಜನಲ್ಲೋ
ಮಗನಿಗೆ ಮದಿವೆಯ ಮಾಡಬೇಕೆಂದೆ
ದಿಬ್ಬಣ ಶೋವನ ಹೋಗುವಾಗೆ || ೯ ||

ದಿಬ್ಬಣ ಶೋವನ ಹೋಗುವಾಗೆ
ವಾದಿ ಪೇಪೆ ಹೊಡವರಲ್ಲೋ
ವಾದಿ ಪೇಪೆ ಹೊಡವರಲ್ಲೋ
ಮದ್ದುಗುಂಡು ಶುಡುವಾರಲ್ಲೋ || ೧೦ ||

ದರಕಿಕ್ರೇದರ ಮುರದಂಗಲ್ಲೋ
ಆಕಾಶಬಾಣ ಬಿಡುವಾಗ
ದರಕಿತ್ರೇದರ ಮುರದಂಗಲ್ಲೋ
ಹಗಲುಬತ್ತಿ ನೋ ಡಿದರೆ || ೧೧ ||

ಹಗಲು ಇರುಳುಲಾದರಲಾಗೇ
ಕೋಣನ ಕೊಂಬ ನೋಡಿದರೆ
ದರಕಿತ್ರೇದರ ಮುರದಂಗಲ್ಲೋ
ಯಜಮಾನಗೌಡ ರಾಜನಲ್ಲೋ || ೧೨ ||

ದಿಬ್ಬಣ ಶೋವನ ಹೋಗುವಾಗೇ
ಪಟ್ಟಣದೊಳಗಿನ ಪಟ್ಟಣಶೆಟ್ಟಿ
ದಂಡು ದಾವುಳಿ ಬರತಿದಂದೇ
ಪಟ್ಣ ಬಿಟ್ಟಾಕಿ ಓಡಿಹೋದ || ೧೩ ||
*****
ಹೇಳಿದವರು: ದೇವು ನಾಗು ಗುನಗ, ಅಡಲೂರು

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...