Home / ಕವನ / ಕವಿತೆ / ಜಯ ಭಾರತ!

ಜಯ ಭಾರತ!

– ಪಲ್ಲವಿ –
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲವಿಖ್ಯಾತೇ !
ಜಯ ಸತ್ಯಸಾರ ಸಂಭೂತೇ….
ಜಯ ಜಯ ಭಾರತ ಭೂಮಾತೇ !


ವರುಣದೇವ ವರವಾಗಿ ನೀಡಿರುವ
ಶರನಿಧಿಗಳು ಘೂರ್ಣಿಸುತ….
ಮೊರೆಯುತಿಹವು ಹಗಲಿರುಳನು ಗಣಿಸದೆ
ನಿನ್ನ ಯಶದ ಸಂಗೀತ !
ಮೂಡಣ ಪಡುವಣ ತೆಂಕಣ ಗಡಿಯೊಳು
ಎಲ್ಲೆಲ್ಲಿಯು ಜಲದೂತ-
ಹೂಡಿಯಿರುವ ಕಾಸಿನ ಕಡುಗೋಂಟೆಯ
ನಿನ್ನ ರಾಜ್ಯ ನಿರ್ಭೀತ !
ಹೆಣೆದಿವೆ ಅಲೆಗಳ ಮಾಲೆ….ರ-
ಕ್ಷಣೆಯನ್ನು ಪಡೆದಿವೆ ವೇಲೆ….ಓ
ಜನನಿ, ನಿನಗಿರದು ಸೋಲೇ !
ಜಯ ಜಯ ಭಾರತ ಭೂಮಾತೇ-ಜಯ-
ಜಯ ಮಹಿಮಾಕುಲವಿಖ್ಯಾತೇ !


ಗಿರಿಯ ರಾಜ ಪರಿವಾರ ಸಹಿತ ನಿಂ-
ತಿರುವ ಬಡಗಲಲ್ಲಿ….
ಹೊರೆಯುತಿರುವ ದಿಗ್‌ನಾಗನಾಗಿ ನಿಡು-
ನೋಟಗಳನು ಚೆಲ್ಲಿ ;
ಹರಿಸುತಿಹನು ನಿರ್ಝರಿಣಿಗಳನು ನೂ-
ರಾರು ರೂಪಗಳಲಿ….
ಸಿರಿಯಿಂದಲಿ ನಿನ್ನರಮನೆ ತುಂಬುವ
ಹೃದಯಾಕೂತಿಯಲಿ.
ಸುರಗಂಗೆಯನಿಳುಹಿರುವ-ಸುಧೆ-
ಯೊರತೆಯನ್ನು ಬಲಿದಿರುವ-ಬಲ-
ದರಿಮೆಯನ್ನು ಬೆಳಸಿರುವ…
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ !


ಮೊದಲು ನಿನ್ನಂಗಣದಲಿ ಹರಡಿದನು
ರವಿಯು ಕಿರಣ ಜಾಲಾ…
ಮೊದಲ ಬೆಳಕು ಕಂಡವಳು ನೀನೆ ತೋ-
ರಿದೆಯೆ ಲೋಕಕೆಲ್ಲಾ !
ನಿನ್ನ ಸಂತಾನ ಮನು-ಮುನಿ ವಿತಾನ
ಹಾಡಿ ಸಾಮಗಾನಾ….
ಬನ್ನಗಳನ್ನು ನೀಗಿಸಿತು ಬಾಳಿನೊಳೆ
ಮಾಡಿ ಅಮೃತಪಾನಾ !
ಜಗವು ಜಡತಿಯಲ್ಲಿರಲು-ನಿನ-
ಗೊಗೆಯಿತಂದೆ ಮುಂಬಗಲು-ಇದು
ನಿನ್ನ ವುಣ್ಯದೊಂದರಳು….
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ!


ಧರ್ಮದೈವತದ ಮರ್ಮವರಿದು ಕೈ –
ಗೊಡುತ ಕರೆದು ತಂದೆ….
ಕರ್ಮದಾ ಹುರುಳ ಮೊರ್ಮೆದಲೆ ತಿಳಿದು
ದುರ್ಮತಿಯನೆಲ್ಲ ಕೊಂದೆ.
ನೂರು ನೂರು ತರೆಯೂರಿನಲ್ಲಿ ಮರೆ-
ಗೊಂಡ ಸತ್ಯ ಮುಖವ…
ಏರಿ ಮೇಲೆ, ತರೆಹಾರಿಸುತ ಜಗಕೆ
ತೋರಿದೆ ನಿಜಸುಖವ.
ಕವಿರಾಜರ ನೀ ಕರೆದೆ-ನವ-
ನವ ಕಾವ್ಯದ ಮಳೆಗರೆದೆ-ಭುವಿ-
ಗೆಲ್ಲ ಜೀವಕಳೆಯೆರೆದೆ….
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ !
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...