Home / ಕವನ / ಕವಿತೆ / ಹಗೆಯ ಗೆಳೆಯ

ಹಗೆಯ ಗೆಳೆಯ


ಜಯವು ಶಾಂತಿಯ ಶರಣ, ಭಾರತ-
ಪಾರತಂತ್ರ್ಯ ನಿವಾರಣಾ!
ಜಯ ಮಹಾತ್ಮಾ, ಜಯವು ಮೋಹನ,
ಪತಿತಜನ ಸಂಜೀವನಾ !


ಬೆಳಕು ಬಿದ್ದಿತು ಭರತಭುವಿಯಲಿ
ಜನ್ಮಿಸಲು ಗುರುಗಾಂಧಿಯು,
ಕಳಕಳನೆ ನಗೆಯೆದ್ದು ನಿಂತಿತು,
ಶಾಂತಿ-ಸೌಖ್ಯದ ನಾಂದಿಯು !


ಭರತಮಾತೆಯ ಪೂರ್ವಪುಣ್ಯವೆ
ಪುರುಷರೂಪವ ತಳೆಯಿತೋ,
ಕರಮಚಂದರ ಮನೆಯೊಳಾಡುತ
ಅರಿವನುಣ್ಣುತ ಬೆಳೆಯಿತೋ !


ಪುಣ್ಯ ಪುರುಷನ ತೆರೆದ ಕಂಗಳು
ಕಂಡವೈ ಜನದವನತಿ ;
ತನ್ನ ತಾಯ್‌ನೆಲ ಅನ್ನಿಗರ ವಶ-
ಅಣ್ಣ-ತಮ್ಮರ ದುರ್‍ಗತಿ !


ಪೊಡವಿ ತಮ್ಮದು, ದುಡಿಮೆ ತಮ್ಮದು,
ಕಡೆಯಿರದ ಸಿರಿ ತಮ್ಮದು….
ಒಡಲಿಗನ್ನವು ಉಡಲು ವಸನವು
ಇರದೆ ಜನ ಬಾಯ್‌ಬಿಡುವುದು !


ನೋಡಿದನು ಗುರುಗಾಂಧಿದೇವನು-
ನಾಡಿಗರ ಪರಿತಾಪವ ;
ಓಡಿಸುವೆ ಪರದಾಸ್ಯಭೂತವ-
ನೆಂದು ಹಿಡಿದನು ಚಾಪವ!


ಕತ್ತಿಯಿಲ್ಲದ ನೆತ್ತರಿಲ್ಲದ
ಸತ್ಯಸಮರದ ನೀತಿಯ-
ಒತ್ತಿಸಾರುತ ಕಿತ್ತಿಸಿದನಿವ
ಹಗೆಯ ಹಿಂಸೆಯ ಭೀತಿಯ!


ಭರತಧರಣಿಯೊಳೆಲ್ಲ ತಿರುಗುತ
ಮುರಲಿಯೂದಿದ ಮೋಹನ;
ಕುರಿಜನರು ನರಹರಿಗಳಾದರು,
ಅರಿತರೋ ತಮ್ಮಾಳ್‌ತನ !


ಹಗೆಯು ಸೋತನು, ಶರಣುಬಂದನು,
ಜಗದ ಗುರು ನೀನೆಂದನು ;
ನಗುತ ಗಾಂಧಿಯು ಹಗೆಯನುಪ್ಪುತ
ಗೆಳೆಯನಾಗಿಯೆ ನಿಂದನು.

೧೦
ಇಂದು ಗಾಂಧಿಯ ಗೆಯ್ಮೆಯಿಂದಲಿ
ಬಂಧಮುಕ್ತಳು ಭಾರತಿ,
ಎಂದೆ ಕಂದರು ಸೇರಿ ಗಾಂಧಿಗೆ
ಬೆಳಗುವೆವು ನಾವಾರತಿ!

೧೧
ಜಯವು ಶಾಂತಿಯ ಶರಣ ಭಾರತ-
ಪಾರತಂತ್ರ್ಯನಿವಾರಣಾ !
ಜಯ ಮಹಾತ್ಮಾ ಜಯವು ಮೋಹನ
ಪತಿತಜನ ಸಂವಾಹನಾ !
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...