Home / ಕವನ / ಕವಿತೆ / ಮಹಾತ್ಮನಿಗೆ

ಮಹಾತ್ಮನಿಗೆ

– ಪಲ್ಲವಿ –

ನಮನವಿದೋ, ನಮನವಿದೋ, ನಮನ ಸಹಜಯೋಗಿ !
ಸಮತೆಗಾಗಿ ಬಾಳ್ವೆಯನೇ ಬೇಳ್ದ ನವವಿರಾಗಿ !


ಕತ್ತಲಲಿಯು ಗುರಿಯ ದಾರಿ ಕಾಂಬ ಕಣ್ಣು ನಿನ್ನ ದೊ,
ತತ್ತ್ವಮಾತೆಯಶ್ರುತ ರವ ಕೇಳ್ವ ಕಿವಿಯು ನಿನ್ನದೊ,
ವಿಗಡ ರಜದೊಳಿದ್ದು ಸೊವಡು ತಗಲದ ಮನ ನಿನ್ನದೊ,
ಜಗದ ಸೌಖ್ಯಕೆಂದೆ ಬೆರಳನೆಣಿಪ ಬುದ್ದಿ ನಿನ್ನದೊ….
ನಮನವಿದೋ, ನವನವಿದೋ ನಮನ ಸಹಜಯೋಗಿ !


ನಿನ್ನ ಉಸಿರದೊಂದೊಂದೂ ಜಡಕೆ ಜೀವವಿತ್ತಿತೊ,
ನಿನ್ನ ಧಮನಿಮಿಡಿತವಹಹ ಚೈತನ್ಯವ ಬಿತ್ತಿತೊ,
ನಿನ್ನ ವಾಣಿ ದಿಗ್‌ದೇಶಕೆ ನನ್ನಿಯ ನೆಲೆ ತಿಳುಹಿತೊ,
ನಿನ್ನ ಗೆಯ್ಮೆ ಸಾವ ಜೀವಜಂಗುಳಿಯನ್ನುಳುಹಿತೊ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಮೈತ್ರಿಯಿಂದೆ ಶತ್ರುಗಳನ್ನು ಸೋಲಿಸಿರುವ ವೀರ,
ಮೃತ್ಯುವನೂ ಮಿತ್ರನಂತೆ ಸ್ವಾಗತಿಸಿದ ಧೀರ,
ನಿನ್ನ ನೌಕೆ ನಂಬಿದರನು ತಲ್ಪಿಸಿತೈ ತೀರ-
ನೀನು ನಡೆದ ದಾರಿಯದೇ ಸತ್ಯ ಧರ್ಮ ಸಾರ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಬಲುಮೆ-ಮೋಸಗಳನು ಹಣಿಯೆ ಕಲಹಗೈದೆ ರಾಜ !
ಕಲಿಸಿದೆ ಜೀವನವ ಚೆಲ್ವುಗೊಳಿಪ ಕಲೆಯನೋಜ !
ನಿಲಿಸಿದೆ ನಾಡಿಗರ ಹೃದಯದೊಳಗೆ ದಿವ್ಯ ತೇಜ-
ಸಲಿಪುದೆಂತು ಶ್ರದ್ಧಾಂಜಲಿ ಎಲ್ಲರಂತೆ ಸಾಜ !….
ನಮನವಿದೋ, ನಮನವಿದೋ, ನಮನ ಸಹಜಯೋಗಿ !

* * *
ನಮನವಿದೋ, ನಮನವಿದೋ, ನಮನ ಸಹಜಯೋಗಿ,
ಸಮತೆಗಾಗಿ ಸರ್ವಸ್ವವ ತತ್ವ ಮಹಾತ್ಯಾಗಿ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...