Home / ಕವನ / ಕವಿತೆ / ಮಹಾತ್ಮನಿಗೆ

ಮಹಾತ್ಮನಿಗೆ

– ಪಲ್ಲವಿ –

ನಮನವಿದೋ, ನಮನವಿದೋ, ನಮನ ಸಹಜಯೋಗಿ !
ಸಮತೆಗಾಗಿ ಬಾಳ್ವೆಯನೇ ಬೇಳ್ದ ನವವಿರಾಗಿ !


ಕತ್ತಲಲಿಯು ಗುರಿಯ ದಾರಿ ಕಾಂಬ ಕಣ್ಣು ನಿನ್ನ ದೊ,
ತತ್ತ್ವಮಾತೆಯಶ್ರುತ ರವ ಕೇಳ್ವ ಕಿವಿಯು ನಿನ್ನದೊ,
ವಿಗಡ ರಜದೊಳಿದ್ದು ಸೊವಡು ತಗಲದ ಮನ ನಿನ್ನದೊ,
ಜಗದ ಸೌಖ್ಯಕೆಂದೆ ಬೆರಳನೆಣಿಪ ಬುದ್ದಿ ನಿನ್ನದೊ….
ನಮನವಿದೋ, ನವನವಿದೋ ನಮನ ಸಹಜಯೋಗಿ !


ನಿನ್ನ ಉಸಿರದೊಂದೊಂದೂ ಜಡಕೆ ಜೀವವಿತ್ತಿತೊ,
ನಿನ್ನ ಧಮನಿಮಿಡಿತವಹಹ ಚೈತನ್ಯವ ಬಿತ್ತಿತೊ,
ನಿನ್ನ ವಾಣಿ ದಿಗ್‌ದೇಶಕೆ ನನ್ನಿಯ ನೆಲೆ ತಿಳುಹಿತೊ,
ನಿನ್ನ ಗೆಯ್ಮೆ ಸಾವ ಜೀವಜಂಗುಳಿಯನ್ನುಳುಹಿತೊ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಮೈತ್ರಿಯಿಂದೆ ಶತ್ರುಗಳನ್ನು ಸೋಲಿಸಿರುವ ವೀರ,
ಮೃತ್ಯುವನೂ ಮಿತ್ರನಂತೆ ಸ್ವಾಗತಿಸಿದ ಧೀರ,
ನಿನ್ನ ನೌಕೆ ನಂಬಿದರನು ತಲ್ಪಿಸಿತೈ ತೀರ-
ನೀನು ನಡೆದ ದಾರಿಯದೇ ಸತ್ಯ ಧರ್ಮ ಸಾರ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಬಲುಮೆ-ಮೋಸಗಳನು ಹಣಿಯೆ ಕಲಹಗೈದೆ ರಾಜ !
ಕಲಿಸಿದೆ ಜೀವನವ ಚೆಲ್ವುಗೊಳಿಪ ಕಲೆಯನೋಜ !
ನಿಲಿಸಿದೆ ನಾಡಿಗರ ಹೃದಯದೊಳಗೆ ದಿವ್ಯ ತೇಜ-
ಸಲಿಪುದೆಂತು ಶ್ರದ್ಧಾಂಜಲಿ ಎಲ್ಲರಂತೆ ಸಾಜ !….
ನಮನವಿದೋ, ನಮನವಿದೋ, ನಮನ ಸಹಜಯೋಗಿ !

* * *
ನಮನವಿದೋ, ನಮನವಿದೋ, ನಮನ ಸಹಜಯೋಗಿ,
ಸಮತೆಗಾಗಿ ಸರ್ವಸ್ವವ ತತ್ವ ಮಹಾತ್ಯಾಗಿ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...