Home / ಕವನ / ಕವಿತೆ / ಇದೊ, ಶ್ರಾವಣ ಬಂದಿದೆ!

ಇದೊ, ಶ್ರಾವಣ ಬಂದಿದೆ!

(ಭಾರತ ಸ್ವಾತಂತ್ರ್ಯೋದಯದ ರೂಪಕ)

ಇದೊ, ಶ್ರಾವಣಬಂದಿದೆ ಭೂವನಕೆ,
ಜನಜೀವನ ಪಾವನ ಗೈಯಲಿಕೆ-
ಇದೊ, ಶ್ರಾವಣ ಬಂದಿದೆ ಭಾರತಕೆ !


ತೆರಳಿತು ವೈಶಾಖದ ಬಿರುಬಿಸಿಲು,
ಸರಿಯಿತು ಮೃಗಜಲದಾ ಹುಸಿಹೊನಲು ;
ಮರೆಯಾಯಿತು ಸುಟ್ಟುರೆಗಳ ಹೊಯಿಲು,
ಬರಿ ಬಾನೊಳು ತುಂಬಿದೆ ನೀರ್‌ ಮುಗಿಲು !
ಬರಗಾಲದ ಬಾಧೆಯ ಹಣಿಯಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ !


ಮುಂಗಾರಿನ ಕಾರ್‍ಮೋಡದ ಕೂಟ….
ಮುನ್ನೀರಲೆಗಳ ತಾಂಡವದಾಟ….
ಕಂಗೆಡಿಸುವ ಕೋಲ್ಮಿಂಚಿನ ಕಾಟ….
ಹಿಂಗಿದುವೋ ಸಿಡಿಲಿನ ಗುಡುಗಾಟ-
ಸಮಯೋಗದ ಸರಿಯನು ಸುರಿಸಲಿಕೆ
ಇದೊ, ಶ್ರಾವಣ ಬಂದಿದೆ ಭೂತಲಕೆ !


ಕಾಡುವ ತಗರಿನ ಕೊಂಬನು ಕಳೆದು….
ಹೋರುವ ಹೋರಿಯ ಹಮ್ಮನು ಹಿಳಿದು….
ಹೆಣ್‌-ಗಂಡನು ಹುರುಪಿಸಿ ಮನಸೆಳೆದು….
ರಣಹೇಡಿ ಏಡಿಯಾ ತಲೆ ತುಳಿದು….
ಮೃಗರಾಜನ ಮೈ ಗುಣ ಮೆರೆಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಬಾನೊಳು ತುಂಬಿದೆ ಜೀವನ ಜಲವು….
ಬುವಿಯೊಳು ತಂಗಿದೆ ಬೆಳಕಿನ ಬಲವು….
‘ಏಳಲಿ, ಏಳಲಿ, ಕೃಷಿಕರ ಕುಲವು’ …
ಗಾಳಿ ಕೂಗುತಿದೆ ಕೇಳದೆ ಉಲಿವು ?
ನಮ್ಮೆಲ್ಲರ ಹಸಿವನ್ನು ತಣಿಸಲಿಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ !


ಬರತ ತೊರೆಗಳದೊ, ಸೂಸಿ ಹರಿದಿವೆ….
ಅರತ ಕೆರೆಗಳಗೊ, ತುಂಬಿ ಮೆರೆದಿವೆ….
ಬರಡು ಬಳ್ಳಿ-ಗಿಡ ಚಿಗಿತು ನಗುತಿವೆ…
ಬರಿಹೊಲ-ನೆಲ ಸಸಿ-ಹಸಿರನುಗುತಿವೆ….
ಚೆಲುವಿಂಗೆ ಗೆಲವ ತಾನೀಯಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!


‘ಬಂದಿದೆ ಗೆಳೆಯರೆ ನಲ್ಮಳೆಗಾಲ….
‘ತಂದಿದೆ ಬಲ್‌ಬೆಳಸಿಗೆ ಹದಗಾಲ….
‘ಉಳುಮೆ-ಬಿಗೆಗೆ ಇದುವೆ ಸಕಾಲ….
‘ಕಳೆದುಕೊಳ್ಳದಿರಿ, ನಿಮ್ಮಯ ಪಾಲ’ –
ಇಂತೊರೆದು ಜಗವ ಜಾಗರಿಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಶ್ರಾವಣದೀ ಶುಭಯೋಗವೆಂಧದೋ
ದೇವಭಾವ ತಲೆಯೆತ್ತಿ ನಿಂತುದೋ!
ಹಾವು-ಹುಳುವನೂ ದೇವರು ಎನುವ …
ಭಾವನೆಯಲಿ ಜನ ಪೂಜಿಸುತಿಹುದೊ ?
ಆ ದೇವನ ಮಹಿಮೆಯ ಗಾಯನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಕನಸಿರದಾ ನಿದ್ದೆ ಯನೋಡಿಸುತ….
ಮನದಾಶೆಗೆ ಕುಸುರನು ಮೂಡಿಸುತ…
ಮನುಕುಲವನೆ ಉಯ್ಯಲೆಯಾಡಿಸುತ…
ಕಣಸಿನ ಕತೆಗಳ ಕೊಂಡಾಡಿಸುತ-
ಸವಿಯೊಲವನು ಹಂಚುತ ಮನಮನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಬರಲಿದೆ ಮಾನವಮಿಯ ಬಲರಾಗ
ಕರೆದಿದೆ ಗೆಲವಿನ ದಸರೆಯ ಭೋಗ….
ತರಲಿದೆ ಇದೆ ದೀವಳಿಗೆಯ ಯೋಗ….
ಬೆಳಕಿನ ರಾಜ್ಯವೆ ಇಳೆಯೊಳಗಾಗ..
ಆ ಬೆಳಕಿನ ದಾರಿಯ ತಿಳುಹಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!
* * *

ಜನಜೀವನ ಪಾವನ ಗೈಯಲಿಕೆ
ಇದೊ, ಬಂದಿದೆ ಶ್ರಾವಣ ಭಾರತಕೆ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...