Home / ಕವನ / ಕವಿತೆ / ಇದೊ, ಶ್ರಾವಣ ಬಂದಿದೆ!

ಇದೊ, ಶ್ರಾವಣ ಬಂದಿದೆ!

(ಭಾರತ ಸ್ವಾತಂತ್ರ್ಯೋದಯದ ರೂಪಕ)

ಇದೊ, ಶ್ರಾವಣಬಂದಿದೆ ಭೂವನಕೆ,
ಜನಜೀವನ ಪಾವನ ಗೈಯಲಿಕೆ-
ಇದೊ, ಶ್ರಾವಣ ಬಂದಿದೆ ಭಾರತಕೆ !


ತೆರಳಿತು ವೈಶಾಖದ ಬಿರುಬಿಸಿಲು,
ಸರಿಯಿತು ಮೃಗಜಲದಾ ಹುಸಿಹೊನಲು ;
ಮರೆಯಾಯಿತು ಸುಟ್ಟುರೆಗಳ ಹೊಯಿಲು,
ಬರಿ ಬಾನೊಳು ತುಂಬಿದೆ ನೀರ್‌ ಮುಗಿಲು !
ಬರಗಾಲದ ಬಾಧೆಯ ಹಣಿಯಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ !


ಮುಂಗಾರಿನ ಕಾರ್‍ಮೋಡದ ಕೂಟ….
ಮುನ್ನೀರಲೆಗಳ ತಾಂಡವದಾಟ….
ಕಂಗೆಡಿಸುವ ಕೋಲ್ಮಿಂಚಿನ ಕಾಟ….
ಹಿಂಗಿದುವೋ ಸಿಡಿಲಿನ ಗುಡುಗಾಟ-
ಸಮಯೋಗದ ಸರಿಯನು ಸುರಿಸಲಿಕೆ
ಇದೊ, ಶ್ರಾವಣ ಬಂದಿದೆ ಭೂತಲಕೆ !


ಕಾಡುವ ತಗರಿನ ಕೊಂಬನು ಕಳೆದು….
ಹೋರುವ ಹೋರಿಯ ಹಮ್ಮನು ಹಿಳಿದು….
ಹೆಣ್‌-ಗಂಡನು ಹುರುಪಿಸಿ ಮನಸೆಳೆದು….
ರಣಹೇಡಿ ಏಡಿಯಾ ತಲೆ ತುಳಿದು….
ಮೃಗರಾಜನ ಮೈ ಗುಣ ಮೆರೆಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಬಾನೊಳು ತುಂಬಿದೆ ಜೀವನ ಜಲವು….
ಬುವಿಯೊಳು ತಂಗಿದೆ ಬೆಳಕಿನ ಬಲವು….
‘ಏಳಲಿ, ಏಳಲಿ, ಕೃಷಿಕರ ಕುಲವು’ …
ಗಾಳಿ ಕೂಗುತಿದೆ ಕೇಳದೆ ಉಲಿವು ?
ನಮ್ಮೆಲ್ಲರ ಹಸಿವನ್ನು ತಣಿಸಲಿಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ !


ಬರತ ತೊರೆಗಳದೊ, ಸೂಸಿ ಹರಿದಿವೆ….
ಅರತ ಕೆರೆಗಳಗೊ, ತುಂಬಿ ಮೆರೆದಿವೆ….
ಬರಡು ಬಳ್ಳಿ-ಗಿಡ ಚಿಗಿತು ನಗುತಿವೆ…
ಬರಿಹೊಲ-ನೆಲ ಸಸಿ-ಹಸಿರನುಗುತಿವೆ….
ಚೆಲುವಿಂಗೆ ಗೆಲವ ತಾನೀಯಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!


‘ಬಂದಿದೆ ಗೆಳೆಯರೆ ನಲ್ಮಳೆಗಾಲ….
‘ತಂದಿದೆ ಬಲ್‌ಬೆಳಸಿಗೆ ಹದಗಾಲ….
‘ಉಳುಮೆ-ಬಿಗೆಗೆ ಇದುವೆ ಸಕಾಲ….
‘ಕಳೆದುಕೊಳ್ಳದಿರಿ, ನಿಮ್ಮಯ ಪಾಲ’ –
ಇಂತೊರೆದು ಜಗವ ಜಾಗರಿಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಶ್ರಾವಣದೀ ಶುಭಯೋಗವೆಂಧದೋ
ದೇವಭಾವ ತಲೆಯೆತ್ತಿ ನಿಂತುದೋ!
ಹಾವು-ಹುಳುವನೂ ದೇವರು ಎನುವ …
ಭಾವನೆಯಲಿ ಜನ ಪೂಜಿಸುತಿಹುದೊ ?
ಆ ದೇವನ ಮಹಿಮೆಯ ಗಾಯನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಕನಸಿರದಾ ನಿದ್ದೆ ಯನೋಡಿಸುತ….
ಮನದಾಶೆಗೆ ಕುಸುರನು ಮೂಡಿಸುತ…
ಮನುಕುಲವನೆ ಉಯ್ಯಲೆಯಾಡಿಸುತ…
ಕಣಸಿನ ಕತೆಗಳ ಕೊಂಡಾಡಿಸುತ-
ಸವಿಯೊಲವನು ಹಂಚುತ ಮನಮನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಬರಲಿದೆ ಮಾನವಮಿಯ ಬಲರಾಗ
ಕರೆದಿದೆ ಗೆಲವಿನ ದಸರೆಯ ಭೋಗ….
ತರಲಿದೆ ಇದೆ ದೀವಳಿಗೆಯ ಯೋಗ….
ಬೆಳಕಿನ ರಾಜ್ಯವೆ ಇಳೆಯೊಳಗಾಗ..
ಆ ಬೆಳಕಿನ ದಾರಿಯ ತಿಳುಹಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!
* * *

ಜನಜೀವನ ಪಾವನ ಗೈಯಲಿಕೆ
ಇದೊ, ಬಂದಿದೆ ಶ್ರಾವಣ ಭಾರತಕೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...