Home / ಕವನ / ಕವಿತೆ / ಮಹಾತ್ಮರು

ಮಹಾತ್ಮರು

೧. ಚರಮ ಗೀತೆ

ಜಗದಿ ಕತ್ತಲು ಮುಸುಕಿ ಮುಂದರಿಯದಾಯ್ತಿಂದು
ನಡಯಿಸುವ ತಂದೆ ನೀ ಮರೆಯಾಗೆ ನಮ್ಮಿಂದ
ನಾವು ತಬ್ಬಲಿಯಾಗಿ ಬಾಳಲೆ೦ತಿನ್ನಕಟ!
ಜೀವಾತ್ಮ ತೋಲಗಿರುವ ದೇಹದಂತೆ!

ಗಾಂಧಿಗುಂ ಜರೆಯುಂಟೆ-ಮೃತಿಯುಂಟೆ-ಅಳಿವುಂಟೆ
ಎಂದೆಮ್ಮನಾಶ್ಚರ್ಯಗೊಳಿಸಿ ನೀನೊಮ್ಮೆಗೇ
ಮೂಗುವಡಿಸೀ ಜಗವ ಪಯಣಗೈವರೆ ತಾತ
ಸ್ವಾತಂತ್ರ ಸಂಗ್ರಾಮದೇಕವೀರ !!

ಹೃದಯ ಬರಡಾಯ್ತಮಮ ಶೂನ್ಯ ಮಾಯ್ತೀ ಲೋಕ
ತುಂಬಿದೀ ಭರತಪದ ಬರಿದಾಯ್ತು ಬದುಕುಳಿದು
ಭಾರತಿಯ ನಡುನೀರಿನಲಿ ಬಿಟ್ಟು ನಡೆವರೇ
ಓ ಮಹಾತ್ಮನೆ ಜ್ಯೋತಿಯಾರಿಸುವರೆ !!

ಭಾರತಿಯ ಹಿರಿದೆನಿಸಿ ನಲಿಸುವವರಾರಿನ್ನು
ಮೆರೆದಹಿಂಸಾವ್ರತದಿ ಬೆಳಕಿತ್ತ ಭಾಸ್ಕರನೆ
ಅಸ್ತಮಿಸುತೆಲ್ಲಿರುವೆ ಪುಣ್ಯಮೂರುತಿ ನಿನ್ನ
ದಿವ್ಯ ದರ್ಶನವಿತ್ತು ಮುಗುಳುನಗೆಯ !!

ನೊಂದು ಬೆಂದಿತು ಹೃದಯ ಶೋಕವೊಂದೇ ತುಂಬಿ
ದುಃಖಸಾಗರಮಾಯ್ತು ಭರತಭೂಮಿಯ ನೆಲವು
ಭಕ್ತಪದ ಸಮ್ರಾಟ ನುಡಿ ಬಾರೆಲೈ ತಂದೆ,
ಕಣ್ಣೀರಿನಿಂದೊರೆವೆ ಚರಮ ಗೀತೆ!

೨ ಜಗಜ್ಜನಕ ಗಾ೦ಧಿಜೀ

ಭರತರಾಷ್ಟ್ರದ ಜನಕ ಗುರುವರ | ದೇವನನುಪಮ ಯೋಗಿಯೆ
ಸರುವ ಹೃದಯವ ಹೊಕ್ಕು ಸತ್ಯದ | ಮರ್ಮವರುಹಿದ ತ್ಯಾಗಿಯೆ
ಹಿರಿಯ ಸ್ವಾತಂತ್ರ್ಯವನು ಬೋಧಿಸಿ | ಮನವನರಳಿಸಿ ಕೆರಳಿಸಿ
ಧರುಮದರ್ಥವ ತಿಳುಹಿ ಮತಗಳ | ನೊಂದು ಮಾಡಿದ ಮಹಋಷಿ.

ವಿನಯ ಸತ್ಯ ಪ್ರೇಮ ಸಹನ | ತ್ಯಾಗಮೌದಾರ್ಯ೦ಗಳ
ಘನತೆ ಪೌರುಷ ಧೃತಿ ನಿವೇಕ ವಿ| ಚಾರ ನಿರ್ಮಲ ಗುಣಗಳ
ಮುನಿ ವಿರಾಜಿತ ಮನ ಸುಶೋಭಿತ | ಯೋಗಿ ಹೃದಯದ ನಗೆಗಳ
ವನಧಿ ಗಾಂಧಿಮಹಾತ್ಮ ನಿನ್ನನು | ತಿಳಿವರಾರೀ ಬಗೆಗಳ.

ಜೀವಕೆಲ್ಲಕೆ ಕೊಟ್ಟು ಚೇತನ | ಸಕಲ ಹೃದಯವ ಸೇರಿದೆ
ನೋವನೊಪ್ಪಿದೆ ಸಾವನಪ್ಪಿದೆ | ಜಡ ಶರೀರವ ತೂರಿದೆ.
ಭಾವಿತಾತ್ಮನೆ ಬಂದ ಭೂಮಿ ಪ | ವಿತ್ರಮಾಯ್ತು ತ್ಯಾಗದೆ
ಆವ ಘನತೆಯ ಮಹಿಮೆಯಿಂದಲಿ | ನಿನ್ನ ಪಡೆದೆವೊ ಪುಣ್ಯದೆ.

ಲೋಕ ವೈಭವ ನಿನ್ನ ಸುಸ್ವಾ | ಗತಿಸಿ ಕರೆದರೆ ನೋಡದೆ
ಸಾಕು ಹರಿಜನ ಸೇವೆಯೆಂದೇ | ಉಸಿರು ಮೀಸಲು ಮಾಡಿದೆ.
ಬೇಕು ಮನಸಾ ವಾಚ ಕರ್ಮದೊ | ಳೊಂದೆ ಕೃತಿ ಧೃತಿಯೆನ್ನುತೆ
ಏಕಕಂಠದೊಳೊರದೆ ಶ್ರದ್ದಾ | ಸಹನೆ ಪಾವನಮೆನ್ನುತೆ.

ನೀರು-ನಲಮಾಕಾಶ-ಗಾಳಿಯು | ನಿರುತ ಪಾವನವಾದುದು
ಶೌರ್ಯ ಶಮೆ ದಮೆ ತಪಸು ಶೌಚಾ | ಚಾರ ಜೋತಿಯ ಪಡದುದು
ಆರು ಬಳಗಂ ನಿನ್ನದಾವುದು | ಎಲ್ಲ ಲೋಕವ ಸೇರ್ದುದು !
ಆರು ನಿನ್ನವರಲ್ಲ ಧರೆಯಲಿ ? | ನಿನ್ನದಲ್ಲದದಾವುದು?

ಸಿರಿ ಸರಸ್ವತಿ ಶಕ್ತಿ ನಿನಗೂಲಿ | ದಿಹರು ತಾವ್ನಲಿಯುತ್ತಲಿ
ಹರಿಹರಾದಿ ವಿರಿಂಚಿ ಧರ್ಮರು | ಹರಸುತಲಿವರು ಮುದದಲಿ
ವರ ಕುಬೇರನು ತೊತ್ತು ಶಕ್ರನು | ವಿಭವ ತೊರೆದನು ಒಲ್ಲದೆ
ಚರಣಸೇವೆಯ ಮಾಡಿ ನಿಂದರು | ಎಲ್ಲ ಜನಪದಮೂಲದೆ.

ಜಗದ ಹಿತವಂ ಬಗೆದು ನಿನ್ನನೆ | ಮರೆತೆ ಗುಂಡಿಗೆ ನೀಗಿದೆ
ಒಗೆದು ನಶ್ವರದೇಹ ಸೂಕ್ಷ್ಮದಿ | ಎಲ್ಲ ಹೃದಯವ ಸೇರಿದೆ.
ಭಾರತಿಗೆ ನವಜನ್ಮವೀಯುತ | ಸುಪ್ರಕಾಶದಿ ಬೆಳಗಿದೆ.
ಆರತಿಯನೆತ್ತುತಲಿ ಕಣ್ಮರೆ | ಯಾದೆ ಪೂರಣಗೊಳಿಸದೆ.

ಎಲ್ಲ ಜಗವಂ ಸೆಳೆದು ಸಮ್ರಾಟ್ | ಮಕುಟ ತಾಳಿದೆ ಕಾಣದೆ
ಒಲ್ಲೆನೆಂದರು ಬಿಡದು ನಿನ್ನ೦ | ಲೋಕ ಮೆಚ್ಚಿಹ ಪ್ರೇಮದೆ
ರಾಜತಂತ್ರ ವಿವೇಕ ಪರಮಾ| ರ್ಥಗಳು ಭಕ್ತಿ ವಿರಾಗವು
ರಾಜಿಸುತ್ತಿವೆ ಸುಪ್ರಕಾಶದಿ | ನಿನ್ನ ಹೃದಯವ ನೀಗವು.

ಧರೆಯ ಧನ್ವಂತರಿಯೆ ನೀನೆ | ಲ್ಲಿರಲು ನಮ್ಮನು ನೋಳ್ಪುದು
ಕರೆದು ಕೃಪೆಯಂ ಪೊರೆ ಜಗತ್ತನು | ಅಭಯಹಸ್ತವ ತೋರ್ವುದು.
ಹಿರಿಯ ನೀನವತಾರ ಪುರುಷಂ | ಎಂದು ಲೋಕವೆ ಪೇಳ್ವುದು
ಇರಲಿ ನಿನ್ನೀ ಸ್ಮರಣೆ ಸಂತತ | ಎಲ್ಲರೊಳು ಸಮಭಾವದಿ.
*****
೩೦-೧-೧೯೪೮

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...