ಪುಟ್ಟೂ

ಮೈಸೂರಲ್ಲಿ ನವರಾತ್ರಿ ಬಂತು. ಶಾಲೆಗಳನ್ನೆಲ್ಲಾ ಮುಚ್ಚಿದರು. ಮುಚ್ಚುವ ದಿನಸ ಉಪಾಧ್ಯಾಯರು-ಬಂದು “ನಾಡಿದ್ದು ಶ್ರಿಮನ್ಮಹಾರಾಜರು ಒಂಭತ್ತು ಘಂಟೆ ಸರಿಯಾಗಿ ಸಿಂಹಾಸನದ ಮೇಲೆ ಕುಳಿತು ಕೊಳ್ಳುವರು. ಆ ವೇಳೆಯಲ್ಲಿ “ನಾವೆಲ್ಲರೂ ಹೋಗಿ ಆ ಮಹೋತ್ಸವವನ್ನು ನೋಡಲಿ’ ಎಂದು ಅರಮನೆಯ ಮುಂದೆ ಮರದ ಮೆಟ್ಟಲು ಹಾಕಿಸಿರುವರು. ನಾವು ಅಲ್ಲಿ ಹೋಗಿ ಕುಳಿತುಕೊಳ್ಳ ಬೇಕಾದರೆ ಎಂಟಕ್ಕೆ ಸರಿಯಾಗಿ ಹೋಗಬೇಕು. ನೀವೆಲ್ಲರೂ ಸರಿಯಾಗಿ ಇಲ್ಲಿಗೆ ಏಳೂವರೆ ಘಂಟೆಗೆ ಬಂದು ಬಿಡಿ. ಹೊತ್ತಾಗಿ ಬಂದವರಿಗೆ ನೋಟವು ತಪ್ಪಿ ಹೋಗುವುದು” ಎಂದು ಹೇಳಿದರು.

ನವರಾತ್ರಿಯ ಪಾಡ್ಯದ ದಿನ ಎಲ್ಲರೂ ಸರಿಯಾಗಿ ಏಳೂವರೆಗೆ ಬಂದರು. ಪುಟ್ಟೂಗೆ ನೋಟವನ್ನು ನೋಡಲು ಹೋಗುವೆನೆಂಬ ಸಂತೋಷ. ಕಂಡಕಂಡವರಿಗೆಲ್ಲ “ಮಹಾರಾಜರು ಸಿಂಹಾಸನದ ಮೇಲೆ ಕುಳಿತುಕೊಳ್ಳುವುದನ್ನು ನೋಡಲು ನಾವೆಲ್ಲ ಹೋಗುತ್ತೇವೆ” ಎಂದು ಹೇಳಿಕೊಂಡು ಹೊರಟನು. ಇವನು ಶಾಲೆಗೆ ಬರುವುದರೊಳಗೆ ಎಂಟುಘಂಟೆ ಆಗಿ ಹೋಯಿತು. ಎಲ್ಲಾ ಹುಡುಗರನ್ನೂ ಕರೆದುಕೊಂಡು ಉಪಾಧ್ಯಾಯರು ಹೊರಟು ಹೋಗಿದ್ದರು. ಪುಟ್ಟೂಗೆ ಬಹಳ ದುಃಖವಾಯಿತು. ಅರಮನೆಯ ಮುಂದಕ್ಕಾದರೂ ಹೋಗೋಣ ಎಂದುಕೊಂಡು ಆತುರದಿಂದ ಓಡಿಹೋದನು. ಅಲ್ಲಿಯೂ ಹೊತ್ತಾಗಿ ಹೋಗಿತ್ತು. ಉಪಾಧ್ಯಾಯರು ಎಲ್ಲರನ್ನೂ ಕರೆದುಕೊಂಡು ಹೋಗಿ ಮರದ ಮೆಟ್ಟಿಲಿನ ಮೇಲೆ ಕುಳಿತುಬಿಟ್ಟಿದ್ದರು. ಎಲ್ಲಿ ನೋಡಿದರೂ ಜನ. ಎತ್ತಲಾಗಿ ಹೋದರೂ ಪೋಲೀಸಿನವರು. ಇವನನ್ನು ಕೇಳುವವರೇ ಇಲ್ಲ. ಪುಟ್ಟೂ ಪೆಚ್ಚು ಮುಖ ಹಾಕಿಕೊಂಡು ಎಲ್ಲಿಯೋ ನಿಂತಿದ್ದು ಮನೆಗೆ ಹೋದನು.

ಆವತ್ತು ತಾನು ಪಟ್ಟ ದುಃಖವನ್ನು ಮರೆಯಲಿಲ್ಲ. ಅಂದಿನಿಂದ ಅವನು ಎಲ್ಲಿಗೆ ಹೋಗಬೇಕಾಗಿರಲಿ ಹೊತ್ತಿಗೆ ಸರಿಯಾಗಿ ಹೋಗುವನು. ಶಾಲೆಗಂತೂ ಅವನು ಯಾವತ್ತೂ ಹೊತ್ತು ಮೀರಿ ಹೋಗಲಿಲ್ಲ.
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...