ಪುಟ್ಟೂ

ಮೈಸೂರಲ್ಲಿ ನವರಾತ್ರಿ ಬಂತು. ಶಾಲೆಗಳನ್ನೆಲ್ಲಾ ಮುಚ್ಚಿದರು. ಮುಚ್ಚುವ ದಿನಸ ಉಪಾಧ್ಯಾಯರು-ಬಂದು “ನಾಡಿದ್ದು ಶ್ರಿಮನ್ಮಹಾರಾಜರು ಒಂಭತ್ತು ಘಂಟೆ ಸರಿಯಾಗಿ ಸಿಂಹಾಸನದ ಮೇಲೆ ಕುಳಿತು ಕೊಳ್ಳುವರು. ಆ ವೇಳೆಯಲ್ಲಿ “ನಾವೆಲ್ಲರೂ ಹೋಗಿ ಆ ಮಹೋತ್ಸವವನ್ನು ನೋಡಲಿ’ ಎಂದು ಅರಮನೆಯ ಮುಂದೆ ಮರದ ಮೆಟ್ಟಲು ಹಾಕಿಸಿರುವರು. ನಾವು ಅಲ್ಲಿ ಹೋಗಿ ಕುಳಿತುಕೊಳ್ಳ ಬೇಕಾದರೆ ಎಂಟಕ್ಕೆ ಸರಿಯಾಗಿ ಹೋಗಬೇಕು. ನೀವೆಲ್ಲರೂ ಸರಿಯಾಗಿ ಇಲ್ಲಿಗೆ ಏಳೂವರೆ ಘಂಟೆಗೆ ಬಂದು ಬಿಡಿ. ಹೊತ್ತಾಗಿ ಬಂದವರಿಗೆ ನೋಟವು ತಪ್ಪಿ ಹೋಗುವುದು” ಎಂದು ಹೇಳಿದರು.

ನವರಾತ್ರಿಯ ಪಾಡ್ಯದ ದಿನ ಎಲ್ಲರೂ ಸರಿಯಾಗಿ ಏಳೂವರೆಗೆ ಬಂದರು. ಪುಟ್ಟೂಗೆ ನೋಟವನ್ನು ನೋಡಲು ಹೋಗುವೆನೆಂಬ ಸಂತೋಷ. ಕಂಡಕಂಡವರಿಗೆಲ್ಲ “ಮಹಾರಾಜರು ಸಿಂಹಾಸನದ ಮೇಲೆ ಕುಳಿತುಕೊಳ್ಳುವುದನ್ನು ನೋಡಲು ನಾವೆಲ್ಲ ಹೋಗುತ್ತೇವೆ” ಎಂದು ಹೇಳಿಕೊಂಡು ಹೊರಟನು. ಇವನು ಶಾಲೆಗೆ ಬರುವುದರೊಳಗೆ ಎಂಟುಘಂಟೆ ಆಗಿ ಹೋಯಿತು. ಎಲ್ಲಾ ಹುಡುಗರನ್ನೂ ಕರೆದುಕೊಂಡು ಉಪಾಧ್ಯಾಯರು ಹೊರಟು ಹೋಗಿದ್ದರು. ಪುಟ್ಟೂಗೆ ಬಹಳ ದುಃಖವಾಯಿತು. ಅರಮನೆಯ ಮುಂದಕ್ಕಾದರೂ ಹೋಗೋಣ ಎಂದುಕೊಂಡು ಆತುರದಿಂದ ಓಡಿಹೋದನು. ಅಲ್ಲಿಯೂ ಹೊತ್ತಾಗಿ ಹೋಗಿತ್ತು. ಉಪಾಧ್ಯಾಯರು ಎಲ್ಲರನ್ನೂ ಕರೆದುಕೊಂಡು ಹೋಗಿ ಮರದ ಮೆಟ್ಟಿಲಿನ ಮೇಲೆ ಕುಳಿತುಬಿಟ್ಟಿದ್ದರು. ಎಲ್ಲಿ ನೋಡಿದರೂ ಜನ. ಎತ್ತಲಾಗಿ ಹೋದರೂ ಪೋಲೀಸಿನವರು. ಇವನನ್ನು ಕೇಳುವವರೇ ಇಲ್ಲ. ಪುಟ್ಟೂ ಪೆಚ್ಚು ಮುಖ ಹಾಕಿಕೊಂಡು ಎಲ್ಲಿಯೋ ನಿಂತಿದ್ದು ಮನೆಗೆ ಹೋದನು.

ಆವತ್ತು ತಾನು ಪಟ್ಟ ದುಃಖವನ್ನು ಮರೆಯಲಿಲ್ಲ. ಅಂದಿನಿಂದ ಅವನು ಎಲ್ಲಿಗೆ ಹೋಗಬೇಕಾಗಿರಲಿ ಹೊತ್ತಿಗೆ ಸರಿಯಾಗಿ ಹೋಗುವನು. ಶಾಲೆಗಂತೂ ಅವನು ಯಾವತ್ತೂ ಹೊತ್ತು ಮೀರಿ ಹೋಗಲಿಲ್ಲ.
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...