Home / ಕವನ / ಕವಿತೆ / ನೂಲು ಸುತ್ತುವ ಹಾಡು

ನೂಲು ಸುತ್ತುವ ಹಾಡು

ಸಣ್ಣ ಖಂಡಿಽಕ್ಹಿಡಿದು ಕನ್ನಿ ತಾ ಬರತಾಳಽಽ|
ಚೆನ್ನಮಲ್ಲೈನ ನೆನಽವೂತ ||
ಚೆನ್ನಮಲ್ಲೈನ ನೆನವೂತೀ ಕಳಸಕಽಽ|
ಛೆಂದಾಗಿ ನೂಲಾ ತೊಡಽಽಸವ್ವಾ ||೧||

ಹಸರ ಖಂಡಿಽಕ್ಹಿಡಿದು ಕುಸುಮಲ್ಲಿ ತಾ ಬರತಾಳಽಽ|
ಬಸವೇಸುರನಿಂಗನ ನೆನವೂತ||
ಬಸವೇಸುರನಿಂಗನ ನೆನವೂತೀ ಕಳೆಸಾಕಽಽ|
ಹಸನಾಗಿ ನೂಲಾ ತೊಡಽಽಸವ್ವಾ ||೨||

ಆ ನಾಡದ ಬಡಗ್ಯಾ ಮಾಡಽಬಲ್ಲದ ಮಣಿಯಽಽ|
ಮಾಡುತ ಮಾಣಿಽಕ ಜಡಽದಾರ ||
ಮಾಡುತ ಮಾಣಿಽಕ ಜಡಿಸಿ ತಂದಾ ಮಣಿಯಽಽ|
ಯಾವಲ್ಲಿ ಇಡವೂನ ಹಡದವ್ವಾ ||೩||

ಆ ನಾಡದ ಬಡಗ್ಯಾ ಮಾಡಽಬಲ್ಲದ ಮಣಿಯಽಽ|
ಕೆತ್ತೂತ ಮುತ್ತಾ ಜಡಽದಾರ||
ಕೆತ್ತೂತ ಮುತ್ತಾ ಜಡೆಸಿ ತಂದಾ ಮಣಿಯಽಽ|
ಯಾವಲ್ಲಿ ಇಡವೂನ ಹಡೆದವ್ವಾ ||೪||

ಅಲ್ಲಂಬ್ಹರಿವ್ಯಾಗ ಗಿಲ್ಲಂಬು ಮಗಿನ್ಹಾಕಿ|
ನಿಲ್ಲದಲೆ ನೀರ ಬೆರಽಸ್ಯಾರ ||
ನಿಲ್ಲದಲೆ ನೀರ ಬೆರಸ್ಯಾರ ತಂಗೆವನಽಽ|
ಫಿಲ್ಲ್ಯಾದ ಕಾಲ ಕೆಸರಾಗೆ ||೫||
*****

ಲಗ್ನದಲ್ಲಿ ವಿಧಿಪೂರ್ವಕವಾಗಿ ಸ್ನಾನಮಾಡಿಸುವ ಪ್ರಸಂಗಗಳು ಎರಡು ಸಾರೆ ಬರುತ್ತವೆ. ಒಮ್ಮೆ ಅರಿಸಿಣ ಹಚ್ಚುವಾಗ; ಇನ್ನೊಮ್ಮೆ ಅಕ್ಷತೆಯ ಕಾಲಕ್ಕೆ. ಆಗ ನಾಲ್ಕು ಮೂಲೆಗೆ ನಾಲ್ಕು ತಂಬಿಗೆಗಳನ್ನಿಟ್ಟು, ಅವುಗಳ ಸುತ್ತು ಮುತ್ತು ಮೇರೆಯಂತೆ ನೂಲು ಸುತ್ತಿ, ನಟ್ಟ ನಡುವೆ ಮಣೆಗಳನ್ನಿಟ್ಟು ಮದುಮಕ್ಕಳಿಗೆ ಎರೆಯುತ್ತಾರೆ. ಆಗಿನ ಕಾಲಕ್ಕೆ ನೂಲು ಸುತ್ತುವ ಹಾಡಿದು.

ಛಂದಸ್ಸು:— ತ್ರಿಪದಿ.

ಶಬ್ದ ಪ್ರಯೋಗಗಳು:- ಖಂಡಿಕಿ=ನೂಲಿನ ಕುಕ್ಕುಡಿ, ಹಸನ=ಸ್ವಚ್ಛ. ಅಲ್ಲ್‌ ಮತ್ತು ಗಿಲ್ಣ್=ನೀರಿನ ಸಪ್ಪಳ.

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...