Home / ಕವನ / ಕವಿತೆ / ನೂಲು ಸುತ್ತುವ ಹಾಡು

ನೂಲು ಸುತ್ತುವ ಹಾಡು

ಸಣ್ಣ ಖಂಡಿಽಕ್ಹಿಡಿದು ಕನ್ನಿ ತಾ ಬರತಾಳಽಽ|
ಚೆನ್ನಮಲ್ಲೈನ ನೆನಽವೂತ ||
ಚೆನ್ನಮಲ್ಲೈನ ನೆನವೂತೀ ಕಳಸಕಽಽ|
ಛೆಂದಾಗಿ ನೂಲಾ ತೊಡಽಽಸವ್ವಾ ||೧||

ಹಸರ ಖಂಡಿಽಕ್ಹಿಡಿದು ಕುಸುಮಲ್ಲಿ ತಾ ಬರತಾಳಽಽ|
ಬಸವೇಸುರನಿಂಗನ ನೆನವೂತ||
ಬಸವೇಸುರನಿಂಗನ ನೆನವೂತೀ ಕಳೆಸಾಕಽಽ|
ಹಸನಾಗಿ ನೂಲಾ ತೊಡಽಽಸವ್ವಾ ||೨||

ಆ ನಾಡದ ಬಡಗ್ಯಾ ಮಾಡಽಬಲ್ಲದ ಮಣಿಯಽಽ|
ಮಾಡುತ ಮಾಣಿಽಕ ಜಡಽದಾರ ||
ಮಾಡುತ ಮಾಣಿಽಕ ಜಡಿಸಿ ತಂದಾ ಮಣಿಯಽಽ|
ಯಾವಲ್ಲಿ ಇಡವೂನ ಹಡದವ್ವಾ ||೩||

ಆ ನಾಡದ ಬಡಗ್ಯಾ ಮಾಡಽಬಲ್ಲದ ಮಣಿಯಽಽ|
ಕೆತ್ತೂತ ಮುತ್ತಾ ಜಡಽದಾರ||
ಕೆತ್ತೂತ ಮುತ್ತಾ ಜಡೆಸಿ ತಂದಾ ಮಣಿಯಽಽ|
ಯಾವಲ್ಲಿ ಇಡವೂನ ಹಡೆದವ್ವಾ ||೪||

ಅಲ್ಲಂಬ್ಹರಿವ್ಯಾಗ ಗಿಲ್ಲಂಬು ಮಗಿನ್ಹಾಕಿ|
ನಿಲ್ಲದಲೆ ನೀರ ಬೆರಽಸ್ಯಾರ ||
ನಿಲ್ಲದಲೆ ನೀರ ಬೆರಸ್ಯಾರ ತಂಗೆವನಽಽ|
ಫಿಲ್ಲ್ಯಾದ ಕಾಲ ಕೆಸರಾಗೆ ||೫||
*****

ಲಗ್ನದಲ್ಲಿ ವಿಧಿಪೂರ್ವಕವಾಗಿ ಸ್ನಾನಮಾಡಿಸುವ ಪ್ರಸಂಗಗಳು ಎರಡು ಸಾರೆ ಬರುತ್ತವೆ. ಒಮ್ಮೆ ಅರಿಸಿಣ ಹಚ್ಚುವಾಗ; ಇನ್ನೊಮ್ಮೆ ಅಕ್ಷತೆಯ ಕಾಲಕ್ಕೆ. ಆಗ ನಾಲ್ಕು ಮೂಲೆಗೆ ನಾಲ್ಕು ತಂಬಿಗೆಗಳನ್ನಿಟ್ಟು, ಅವುಗಳ ಸುತ್ತು ಮುತ್ತು ಮೇರೆಯಂತೆ ನೂಲು ಸುತ್ತಿ, ನಟ್ಟ ನಡುವೆ ಮಣೆಗಳನ್ನಿಟ್ಟು ಮದುಮಕ್ಕಳಿಗೆ ಎರೆಯುತ್ತಾರೆ. ಆಗಿನ ಕಾಲಕ್ಕೆ ನೂಲು ಸುತ್ತುವ ಹಾಡಿದು.

ಛಂದಸ್ಸು:— ತ್ರಿಪದಿ.

ಶಬ್ದ ಪ್ರಯೋಗಗಳು:- ಖಂಡಿಕಿ=ನೂಲಿನ ಕುಕ್ಕುಡಿ, ಹಸನ=ಸ್ವಚ್ಛ. ಅಲ್ಲ್‌ ಮತ್ತು ಗಿಲ್ಣ್=ನೀರಿನ ಸಪ್ಪಳ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...