Home / ಲೇಖನ / ಇತರೆ / ಮತಸಂಪಾದನೆಗೆ ರಾಮಬಾಣ ಉಪಾಯ

ಮತಸಂಪಾದನೆಗೆ ರಾಮಬಾಣ ಉಪಾಯ

ಬರ್‍ರಿ, ಬರ್‍ರಿ ಗೋಪಾಳರಾವ ನಮ್ಮನ್ನಗ್ದಿ ಮರೇತ್ರಂತ ತಿಳಕೂಂಡಿದ್ದಿವಿ. ಬರ್ರಿ ಇಲ್ಲೆ ಕೂಡಬರ್ರಿ. ಅಕಡೆ ಕೂಡಬಾಡ್ರಿ ನಿಮ್ಮ ಕೂಡುವ ಸ್ಥಾನ ಈ ಗಾದಿಯ ಮೇಲೆ ಅದೆ. ನಿಮ್ಮನ್ನ ತೆಳಗ ಕೂಡ್ರಿಸಿ ನಾವೆಲ್ಲಿ ಕೂಡ್ರ ಬೇಕು. ಗಾದಿಯ ಮ್ಕಾಲಿ ಕೂಡ್ರಿ ರಾಯರೆ.

ಎಲಾ, ಅಲ್ಲಿ ಯಾರಿದೀರಿ ಎರಡು ಕಪ್ಪು ಉತ್ತಮ ಚಹಾ ಮಾಡಂತ ಹೇಳ್ರಿ. ಗೋಪಾಳರಾಯರಿಗೆ ಸ್ಟ್ರಾಂಗ ಚಹಾ ಬೇಕು ಗೊತ್ತದ ಇಲ್ಲೊ. ತಾಜಾ ಹಾಲು ಹಾಕಲಿಕ್ಕೆ ಹೇಳು.

ಇದ್ನೋಡ್ರಿ ಆನಂದರಾವ, ಗೋಪಾಳಾರಾವ ಅಂದ್ರ ಒಂದು ವ್ಯಕ್ತಿ ಅದ, ವ್ಯಕ್ತಿ. ಒಬ್ಬ ಮನುಷ್ಯ ತಮ್ಮವ ಅಂತ ಅಂದ್ರ ಜೀವ ಹೋದರು ಅವನ ಕೈ ಬಿಡುವದಿಲ್ಲ. ಬಹಳ ದಿವಸದಾಗ ಅವರ ಭೆಟ್ಟಿಯಾಗಿದ್ದಿಲ್ಲ ಎಂದು ತಿಳಿದು ನಿನ್ನೆ ಅವರ ಮನಿಗೆ ಹೋಗಿದ್ದೆ. ಗೋಪಾಳ್ರಾಯರು ಮನೆಯಾಗದ್ದಿಲ್ಲಂತ ಅವರ ಮನ್ಯಾಗ ಹೇಳಿಬಂದೆ. ಇಂದು ಬೆಳಗಾಗುವದರೂಳಗೆ ಗೋಪಾಳಾರಾವ ಇಲ್ಲಿ ಹಜರರಿದ್ದಾರ. ಋಣಾನಬಂಧ? ಅಂದ್ರ ಹೀಂಗ ಇರಬೇಕು. ನಮ್ಮದು ಅವರದು ಗೆಳತನ ಅಂತ ಅಂದ್ರ ನಮ್ಮ ಪೂರ್‍ತೆಕ್ಕ ಇಲ್ಲ ಅದು. ವಂಶಪರಂಪರಾಗಿದ್ದು ಅದು ಅವರ ತಂದಿ ನಮ್ಮ ತಂದಿ ಮನೂಗಳಿಯೊಳಗ ಸಾಲಿ ಕಲಿಯುವ ಮುಂದೆ ಇಬ್ಬರೂ ಕೂಡಿ ಸಾಲಿ ತಪ್ಪಿಸಿ ಗಿಡ ಮಂಗ್ಯಾನ ಆಟಾ ಆಡಲಿಕ್ಕೆ ಹೋಗುತ್ತಿದ್ದರು. ಅಂದಿನಿಂದ ಅವರದು ನಮ್ಮದು ಗೆಳೆತನ.

ಯಾಕ್ರೀ ಗೋಪಾಳ ರಾವ, ಆಗಿನ ಗಿಡಮಾಗ್ಯಾನ ಆಟದ ದಿವಸ ಹೋದವು. ಈಗಿನ ಹುಡುಗರು ಖೋಡಿಗಳು ಕೆರಿಕೆಟ, ಹಾಕಿ, ಅಂತಾವ ದುಡ್ಡಿನ ಹೊರ್‍ತು ಕೆಲಸಿಲ್ಲ. ನಮ್ಮ ಆಟಗಳಿಗೆ ಒಂದು ದುಡ್ಡು ಸಹ ಖರ್‍ಚು ಹತ್ತುದಿಲ್ಲ.

ಎಲಾ, ಚಹ ಆಗಿದ್ದರ ತರ್‍ಯೋ ಸಂಗಡ ಎನರೆ ಖಾರ ತೊಗೊಂಬರ್‍ಯೋ ಆದರ ಹೊರ್‍ತಾಗಿ ಚಹಕ್ಕ ರುಚಿನೇ ಬರುವದಿಲ್ಲ. ಗೋಪಾಳ್ರಾವ ಅಂದರ ಚಹೆದ ಪಕ್ಕಾ ಸವಿಗಾರರು, ಹಳದೀ ಡಬ್ಬಿಯ ಹೊರ್‍ತು ಗೊತ್ತಿಲ್ಲ ಅವರಿಗೆ.

ನಾನು ಮ್ಯುನಿಸಿಪಾಲ್ಟಿಯ ಚುನಾವಣಿಗೆ ನಿಂತದ್ದು ಅರರಿಗೆ ಹೇಳಲಿಕ್ಕ ಬೇಡ, ನನ್ನ ಚುನಾವಣೆ ಅಂದ್ರ ಅನರ ಚುನಾವಣೆ ಇದ್ದಂಗ. ಗೋಪಾಳ್ರಾಯರಷ್ಟು ಆತ್ಮೀಯ ಭಾವನೆಯಿಂದ ಕಲಸ ಮಾಡನವರೆಂದರೆ ಕ್ವಚಿತ್‌ ಸಿಗುವರು. ಎಲಾ, ಎಲಿ ಅಡಕಿ ಡಬ್ಬಿ ತಗೊಳ್ಳಿರೋ, ವಿಳೇದೆಲಿ ಕೂಡಿಗಿವು ಅವ ಕೂಡಗಿವು, ಇನ್ನೇನು ಕೇಳಬೇಕ ನಿಮಗ, ಎಲ್ಲ ನೆನಪಿನಲ್ಲರಿಲ್ಲಿರಲಿ, ಅಂದ್ರ ಆತು ೨೮ ನೇ ತಾರೀಖು ಮಾತ್ರ ನೆನಪಿನಲ್ಲಿರಿಲಿ.

ಸ್ನಾನದ ವಾಳ್ಯಾ ಆದಂತೆ ತೋರತದ. ವಿನಾಕಾರಣ ನಿಮ್ಮ ಅನ್ಬೇಕಕ್ಕ ಯಾಕ ಹರಕತ್ತು ಮಾಡಬೇಕು ಹೋಗಿಬರ್ರಿ. ನಮಸ್ಕಾರ (ಹೊರಗೆ ಬಂದ ಮೇಲೆ ಗೋಪಾಳರಾಯರ) ೬ ತಿಂಗಳಿಗೊಮ್ಮೆ ಮ್ಯುನಸಿಪಾಲ್ಟಿಯ ಚುನಾವಣಿ ಇದ್ದರೆ ಎಷ್ಟು ಮಜಾ ಆಗುತ್ತಿತ್ತು ಎಂದರು!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...