Home / ಲೇಖನ / ಇತರೆ / ಮತಸಂಪಾದನೆಗೆ ರಾಮಬಾಣ ಉಪಾಯ

ಮತಸಂಪಾದನೆಗೆ ರಾಮಬಾಣ ಉಪಾಯ

ಬರ್‍ರಿ, ಬರ್‍ರಿ ಗೋಪಾಳರಾವ ನಮ್ಮನ್ನಗ್ದಿ ಮರೇತ್ರಂತ ತಿಳಕೂಂಡಿದ್ದಿವಿ. ಬರ್ರಿ ಇಲ್ಲೆ ಕೂಡಬರ್ರಿ. ಅಕಡೆ ಕೂಡಬಾಡ್ರಿ ನಿಮ್ಮ ಕೂಡುವ ಸ್ಥಾನ ಈ ಗಾದಿಯ ಮೇಲೆ ಅದೆ. ನಿಮ್ಮನ್ನ ತೆಳಗ ಕೂಡ್ರಿಸಿ ನಾವೆಲ್ಲಿ ಕೂಡ್ರ ಬೇಕು. ಗಾದಿಯ ಮ್ಕಾಲಿ ಕೂಡ್ರಿ ರಾಯರೆ.

ಎಲಾ, ಅಲ್ಲಿ ಯಾರಿದೀರಿ ಎರಡು ಕಪ್ಪು ಉತ್ತಮ ಚಹಾ ಮಾಡಂತ ಹೇಳ್ರಿ. ಗೋಪಾಳರಾಯರಿಗೆ ಸ್ಟ್ರಾಂಗ ಚಹಾ ಬೇಕು ಗೊತ್ತದ ಇಲ್ಲೊ. ತಾಜಾ ಹಾಲು ಹಾಕಲಿಕ್ಕೆ ಹೇಳು.

ಇದ್ನೋಡ್ರಿ ಆನಂದರಾವ, ಗೋಪಾಳಾರಾವ ಅಂದ್ರ ಒಂದು ವ್ಯಕ್ತಿ ಅದ, ವ್ಯಕ್ತಿ. ಒಬ್ಬ ಮನುಷ್ಯ ತಮ್ಮವ ಅಂತ ಅಂದ್ರ ಜೀವ ಹೋದರು ಅವನ ಕೈ ಬಿಡುವದಿಲ್ಲ. ಬಹಳ ದಿವಸದಾಗ ಅವರ ಭೆಟ್ಟಿಯಾಗಿದ್ದಿಲ್ಲ ಎಂದು ತಿಳಿದು ನಿನ್ನೆ ಅವರ ಮನಿಗೆ ಹೋಗಿದ್ದೆ. ಗೋಪಾಳ್ರಾಯರು ಮನೆಯಾಗದ್ದಿಲ್ಲಂತ ಅವರ ಮನ್ಯಾಗ ಹೇಳಿಬಂದೆ. ಇಂದು ಬೆಳಗಾಗುವದರೂಳಗೆ ಗೋಪಾಳಾರಾವ ಇಲ್ಲಿ ಹಜರರಿದ್ದಾರ. ಋಣಾನಬಂಧ? ಅಂದ್ರ ಹೀಂಗ ಇರಬೇಕು. ನಮ್ಮದು ಅವರದು ಗೆಳತನ ಅಂತ ಅಂದ್ರ ನಮ್ಮ ಪೂರ್‍ತೆಕ್ಕ ಇಲ್ಲ ಅದು. ವಂಶಪರಂಪರಾಗಿದ್ದು ಅದು ಅವರ ತಂದಿ ನಮ್ಮ ತಂದಿ ಮನೂಗಳಿಯೊಳಗ ಸಾಲಿ ಕಲಿಯುವ ಮುಂದೆ ಇಬ್ಬರೂ ಕೂಡಿ ಸಾಲಿ ತಪ್ಪಿಸಿ ಗಿಡ ಮಂಗ್ಯಾನ ಆಟಾ ಆಡಲಿಕ್ಕೆ ಹೋಗುತ್ತಿದ್ದರು. ಅಂದಿನಿಂದ ಅವರದು ನಮ್ಮದು ಗೆಳೆತನ.

ಯಾಕ್ರೀ ಗೋಪಾಳ ರಾವ, ಆಗಿನ ಗಿಡಮಾಗ್ಯಾನ ಆಟದ ದಿವಸ ಹೋದವು. ಈಗಿನ ಹುಡುಗರು ಖೋಡಿಗಳು ಕೆರಿಕೆಟ, ಹಾಕಿ, ಅಂತಾವ ದುಡ್ಡಿನ ಹೊರ್‍ತು ಕೆಲಸಿಲ್ಲ. ನಮ್ಮ ಆಟಗಳಿಗೆ ಒಂದು ದುಡ್ಡು ಸಹ ಖರ್‍ಚು ಹತ್ತುದಿಲ್ಲ.

ಎಲಾ, ಚಹ ಆಗಿದ್ದರ ತರ್‍ಯೋ ಸಂಗಡ ಎನರೆ ಖಾರ ತೊಗೊಂಬರ್‍ಯೋ ಆದರ ಹೊರ್‍ತಾಗಿ ಚಹಕ್ಕ ರುಚಿನೇ ಬರುವದಿಲ್ಲ. ಗೋಪಾಳ್ರಾವ ಅಂದರ ಚಹೆದ ಪಕ್ಕಾ ಸವಿಗಾರರು, ಹಳದೀ ಡಬ್ಬಿಯ ಹೊರ್‍ತು ಗೊತ್ತಿಲ್ಲ ಅವರಿಗೆ.

ನಾನು ಮ್ಯುನಿಸಿಪಾಲ್ಟಿಯ ಚುನಾವಣಿಗೆ ನಿಂತದ್ದು ಅರರಿಗೆ ಹೇಳಲಿಕ್ಕ ಬೇಡ, ನನ್ನ ಚುನಾವಣೆ ಅಂದ್ರ ಅನರ ಚುನಾವಣೆ ಇದ್ದಂಗ. ಗೋಪಾಳ್ರಾಯರಷ್ಟು ಆತ್ಮೀಯ ಭಾವನೆಯಿಂದ ಕಲಸ ಮಾಡನವರೆಂದರೆ ಕ್ವಚಿತ್‌ ಸಿಗುವರು. ಎಲಾ, ಎಲಿ ಅಡಕಿ ಡಬ್ಬಿ ತಗೊಳ್ಳಿರೋ, ವಿಳೇದೆಲಿ ಕೂಡಿಗಿವು ಅವ ಕೂಡಗಿವು, ಇನ್ನೇನು ಕೇಳಬೇಕ ನಿಮಗ, ಎಲ್ಲ ನೆನಪಿನಲ್ಲರಿಲ್ಲಿರಲಿ, ಅಂದ್ರ ಆತು ೨೮ ನೇ ತಾರೀಖು ಮಾತ್ರ ನೆನಪಿನಲ್ಲಿರಿಲಿ.

ಸ್ನಾನದ ವಾಳ್ಯಾ ಆದಂತೆ ತೋರತದ. ವಿನಾಕಾರಣ ನಿಮ್ಮ ಅನ್ಬೇಕಕ್ಕ ಯಾಕ ಹರಕತ್ತು ಮಾಡಬೇಕು ಹೋಗಿಬರ್ರಿ. ನಮಸ್ಕಾರ (ಹೊರಗೆ ಬಂದ ಮೇಲೆ ಗೋಪಾಳರಾಯರ) ೬ ತಿಂಗಳಿಗೊಮ್ಮೆ ಮ್ಯುನಸಿಪಾಲ್ಟಿಯ ಚುನಾವಣಿ ಇದ್ದರೆ ಎಷ್ಟು ಮಜಾ ಆಗುತ್ತಿತ್ತು ಎಂದರು!
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...