Home / ಬಾಲ ಚಿಲುಮೆ / ಕಥೆ / ತಂದೆಯೂ ಮಕ್ಕಳೂ

ತಂದೆಯೂ ಮಕ್ಕಳೂ

ಆಶ್ರಮದಲ್ಲಿ ಅರಳಿಯ ಮರದ ಕೆಳಗೆ ಒಂದು ಜಿಂಕೆಯ ಚರ್‍ಮದ ಮೇಲೆ ವಿಶ್ವಾಮಿತ್ರರು ಕುಳಿತಿದ್ದರು. ಆಗ ಒಬ್ಬ ಹುಡುಗನು ಏದುತ್ತಾ ಓಡಿಬಂದು ಅವರ ಕಾಲಿಗೆ ಬಿದ್ದನು. ಅವರೂ “ಯಾರು? ಶುನಶ್ಶೇಫನೇನೋ? ಎಲಾ! ಕೊನೆಗೆ ಬದುಕಿಕೂಂಡೆಯಾ? ಭಲೆ! ಸಂತೋಷ! ಬಾ! ಕುಳಿತುಕೋ” ಎಂದರು. ಅವನೂ ಕೈ ಮುಗಿದು ಗುರುಗಳೇ! ತಮ್ಮ ಕೃಪೆಯಿಂದ ನಾನು ಉಳಿದುಕೊಂಡೆನು. ಇನ್ನು ಮುಂದಕ್ಕೆ ತಾಯಿ, ತಂದೆ, ಬಂಧು, ಬಳಗಗಳೆಲ್ಲವೂ ತಾವೇ! ನಾನೂ ತಮ್ಮ ಮಕ್ಕಳಲ್ಲಿ ಒಬ್ಬನಾಗಿ ಸೇವೆ ಮಾಡಿಕೊಂಡು ಇರುತ್ತೇನೆ. ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು. ಅವನ ಕಣ್ಣುಗಳಿಂದ ನೀರು ಹರಿಯುತ್ತ ಇತ್ತು. ಅದನ್ನು ನೋಡಿ ವಿಶ್ವಾಮಿತ್ರರಿಗೆ ಮನಸ್ಸು ಕರಗಿ ಹೋಯಿತು. “ಹೂ! ಹಾಗೆಯೇ ಆಗಲಿ ಇರು!” ಎಂದರು. ಅವನನ್ನು ಕೊಲ್ಲಬೇಕೆಂದು ಯಾರೋ ಹಿಡಿದುಕೊಂಡು ಹೋಗಿದ್ದರು. ವಿಶ್ವಾಮಿತ್ರರ ಕೃಪೆಯಿಂದ ಅವನು ಅವರ ಕಯ್ಯಿಂದ ತಪ್ಪಿಸಿಕೊಂಡು ಬದುಕಿ ಬಂದಿದ್ದನು.

ಅವರಿಗೆ ಆವೇಳೆಗಾಗಲೆ ಆರು ಜನ ಮಕ್ಕಳಿದ್ದರು. ಮೊದಲಿನ ಮೂವರು ಯಾವಾಗಲೂ ತಂದೆಯು ಹೇಳಿದಕ್ಕೆ ಪ್ರತಿಯನ್ನೇ ಹೇಳುವರು. ಕೊನೆಯ ಮೂವರು ತಂದೆಯ ಮಾತು ಎಂದರೆ, ಏನೇ ಆಗಲಿ ಎರಡು ಮಾತು ಆಡುತ್ತಿರಲಿಲ್ಲ. ಆರು ಜನರನ್ನೂ ಕರೆಸಿ “ಅಯ್ಯಾ! ಈ ಶುನಶ್ಶೇಫನು ಗುರುಹಿರಿಯರಲ್ಲಿ ಭಕ್ತಿಯುಳ್ಳವನು. ಇವನು ನಿಮ್ಮೆಲ್ಲರಿಗಿಂತಲೂ ವಿದ್ಯೆಯಲ್ಲಿಯೂ, ತಪಸ್ಸಿನಲ್ಲಿಯೂ ಹಿರಿಯನು. ಇವನೂ ನಿಮ್ಮಲ್ಲಿ ಒಬ್ಬನಾಗಿ ಇದ್ದು ಕೊಂಡಿರಲಿ” ಎಂದು ಹೇಳಿದರು.

ಮೊದಲ ಮೂವರು ಎಂದಿನಂತೆ ಎದುರು ಆಡಿದರು. ವಿಶ್ವಾಮಿತ್ರರೂ ಒಂದು ಸಲ ಹೇಳಿದರು. ಎರಡು ಸಲ ಹೇಳಿದರು. ಮೂರನೆಯ ಸಲವೂ ಹೇಳಿದರು. ಅವರು ಕೇಳಲಿಲ್ಲ. “ನಿಮ್ಮ ಮನೆಯೇ ಬೇಡ” ಎಂದು ಎಲ್ಲಿಗೋ ಹೊರಟು ಹೋದರು.

ಕೊನೆಯ ಮೂವರು “ತಂದೆಯೇ! ನೀನೇ ನಮಗೆ ದೇವರು. ನೀನು ಹೇಳಿದುದೇ ನಮಗೆ ವೇದವಾಕ್ಯವು. ನಿನ್ನ ಇಷ್ಟದಂತೆಯೇ ಆಗಲಿ. ಶುನಶ್ಶೇಫನೇ ನಮಗೆಲ್ಲ ಹಿರಿಯವನಾಗಲಿ” ಎಂದು ಒಪ್ಪಿಕೊಂಡರು. ವಿಶ್ವಾಮಿತ್ರರಿಗೆ ಸಂತೋಷವಾಯಿತು. ಆ ನಾಲ್ವರಿಗೂ ಸಕಲ ವಿದ್ಯೆಗಳನ್ನೂ ಉಪದೇಶಿಸಿ, ಸಿದ್ಧಿಯಾಗುವಂತೆ ಅನುಗ್ರಹಿಸಿದರು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...