Home / ಬಾಲ ಚಿಲುಮೆ / ಕಥೆ / ತಂದೆಯೂ ಮಕ್ಕಳೂ

ತಂದೆಯೂ ಮಕ್ಕಳೂ

ಆಶ್ರಮದಲ್ಲಿ ಅರಳಿಯ ಮರದ ಕೆಳಗೆ ಒಂದು ಜಿಂಕೆಯ ಚರ್‍ಮದ ಮೇಲೆ ವಿಶ್ವಾಮಿತ್ರರು ಕುಳಿತಿದ್ದರು. ಆಗ ಒಬ್ಬ ಹುಡುಗನು ಏದುತ್ತಾ ಓಡಿಬಂದು ಅವರ ಕಾಲಿಗೆ ಬಿದ್ದನು. ಅವರೂ “ಯಾರು? ಶುನಶ್ಶೇಫನೇನೋ? ಎಲಾ! ಕೊನೆಗೆ ಬದುಕಿಕೂಂಡೆಯಾ? ಭಲೆ! ಸಂತೋಷ! ಬಾ! ಕುಳಿತುಕೋ” ಎಂದರು. ಅವನೂ ಕೈ ಮುಗಿದು ಗುರುಗಳೇ! ತಮ್ಮ ಕೃಪೆಯಿಂದ ನಾನು ಉಳಿದುಕೊಂಡೆನು. ಇನ್ನು ಮುಂದಕ್ಕೆ ತಾಯಿ, ತಂದೆ, ಬಂಧು, ಬಳಗಗಳೆಲ್ಲವೂ ತಾವೇ! ನಾನೂ ತಮ್ಮ ಮಕ್ಕಳಲ್ಲಿ ಒಬ್ಬನಾಗಿ ಸೇವೆ ಮಾಡಿಕೊಂಡು ಇರುತ್ತೇನೆ. ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು. ಅವನ ಕಣ್ಣುಗಳಿಂದ ನೀರು ಹರಿಯುತ್ತ ಇತ್ತು. ಅದನ್ನು ನೋಡಿ ವಿಶ್ವಾಮಿತ್ರರಿಗೆ ಮನಸ್ಸು ಕರಗಿ ಹೋಯಿತು. “ಹೂ! ಹಾಗೆಯೇ ಆಗಲಿ ಇರು!” ಎಂದರು. ಅವನನ್ನು ಕೊಲ್ಲಬೇಕೆಂದು ಯಾರೋ ಹಿಡಿದುಕೊಂಡು ಹೋಗಿದ್ದರು. ವಿಶ್ವಾಮಿತ್ರರ ಕೃಪೆಯಿಂದ ಅವನು ಅವರ ಕಯ್ಯಿಂದ ತಪ್ಪಿಸಿಕೊಂಡು ಬದುಕಿ ಬಂದಿದ್ದನು.

ಅವರಿಗೆ ಆವೇಳೆಗಾಗಲೆ ಆರು ಜನ ಮಕ್ಕಳಿದ್ದರು. ಮೊದಲಿನ ಮೂವರು ಯಾವಾಗಲೂ ತಂದೆಯು ಹೇಳಿದಕ್ಕೆ ಪ್ರತಿಯನ್ನೇ ಹೇಳುವರು. ಕೊನೆಯ ಮೂವರು ತಂದೆಯ ಮಾತು ಎಂದರೆ, ಏನೇ ಆಗಲಿ ಎರಡು ಮಾತು ಆಡುತ್ತಿರಲಿಲ್ಲ. ಆರು ಜನರನ್ನೂ ಕರೆಸಿ “ಅಯ್ಯಾ! ಈ ಶುನಶ್ಶೇಫನು ಗುರುಹಿರಿಯರಲ್ಲಿ ಭಕ್ತಿಯುಳ್ಳವನು. ಇವನು ನಿಮ್ಮೆಲ್ಲರಿಗಿಂತಲೂ ವಿದ್ಯೆಯಲ್ಲಿಯೂ, ತಪಸ್ಸಿನಲ್ಲಿಯೂ ಹಿರಿಯನು. ಇವನೂ ನಿಮ್ಮಲ್ಲಿ ಒಬ್ಬನಾಗಿ ಇದ್ದು ಕೊಂಡಿರಲಿ” ಎಂದು ಹೇಳಿದರು.

ಮೊದಲ ಮೂವರು ಎಂದಿನಂತೆ ಎದುರು ಆಡಿದರು. ವಿಶ್ವಾಮಿತ್ರರೂ ಒಂದು ಸಲ ಹೇಳಿದರು. ಎರಡು ಸಲ ಹೇಳಿದರು. ಮೂರನೆಯ ಸಲವೂ ಹೇಳಿದರು. ಅವರು ಕೇಳಲಿಲ್ಲ. “ನಿಮ್ಮ ಮನೆಯೇ ಬೇಡ” ಎಂದು ಎಲ್ಲಿಗೋ ಹೊರಟು ಹೋದರು.

ಕೊನೆಯ ಮೂವರು “ತಂದೆಯೇ! ನೀನೇ ನಮಗೆ ದೇವರು. ನೀನು ಹೇಳಿದುದೇ ನಮಗೆ ವೇದವಾಕ್ಯವು. ನಿನ್ನ ಇಷ್ಟದಂತೆಯೇ ಆಗಲಿ. ಶುನಶ್ಶೇಫನೇ ನಮಗೆಲ್ಲ ಹಿರಿಯವನಾಗಲಿ” ಎಂದು ಒಪ್ಪಿಕೊಂಡರು. ವಿಶ್ವಾಮಿತ್ರರಿಗೆ ಸಂತೋಷವಾಯಿತು. ಆ ನಾಲ್ವರಿಗೂ ಸಕಲ ವಿದ್ಯೆಗಳನ್ನೂ ಉಪದೇಶಿಸಿ, ಸಿದ್ಧಿಯಾಗುವಂತೆ ಅನುಗ್ರಹಿಸಿದರು.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...