Home / ಬಾಲ ಚಿಲುಮೆ / ಕಥೆ / ತಂದೆಯೂ ಮಕ್ಕಳೂ

ತಂದೆಯೂ ಮಕ್ಕಳೂ

ಆಶ್ರಮದಲ್ಲಿ ಅರಳಿಯ ಮರದ ಕೆಳಗೆ ಒಂದು ಜಿಂಕೆಯ ಚರ್‍ಮದ ಮೇಲೆ ವಿಶ್ವಾಮಿತ್ರರು ಕುಳಿತಿದ್ದರು. ಆಗ ಒಬ್ಬ ಹುಡುಗನು ಏದುತ್ತಾ ಓಡಿಬಂದು ಅವರ ಕಾಲಿಗೆ ಬಿದ್ದನು. ಅವರೂ “ಯಾರು? ಶುನಶ್ಶೇಫನೇನೋ? ಎಲಾ! ಕೊನೆಗೆ ಬದುಕಿಕೂಂಡೆಯಾ? ಭಲೆ! ಸಂತೋಷ! ಬಾ! ಕುಳಿತುಕೋ” ಎಂದರು. ಅವನೂ ಕೈ ಮುಗಿದು ಗುರುಗಳೇ! ತಮ್ಮ ಕೃಪೆಯಿಂದ ನಾನು ಉಳಿದುಕೊಂಡೆನು. ಇನ್ನು ಮುಂದಕ್ಕೆ ತಾಯಿ, ತಂದೆ, ಬಂಧು, ಬಳಗಗಳೆಲ್ಲವೂ ತಾವೇ! ನಾನೂ ತಮ್ಮ ಮಕ್ಕಳಲ್ಲಿ ಒಬ್ಬನಾಗಿ ಸೇವೆ ಮಾಡಿಕೊಂಡು ಇರುತ್ತೇನೆ. ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು. ಅವನ ಕಣ್ಣುಗಳಿಂದ ನೀರು ಹರಿಯುತ್ತ ಇತ್ತು. ಅದನ್ನು ನೋಡಿ ವಿಶ್ವಾಮಿತ್ರರಿಗೆ ಮನಸ್ಸು ಕರಗಿ ಹೋಯಿತು. “ಹೂ! ಹಾಗೆಯೇ ಆಗಲಿ ಇರು!” ಎಂದರು. ಅವನನ್ನು ಕೊಲ್ಲಬೇಕೆಂದು ಯಾರೋ ಹಿಡಿದುಕೊಂಡು ಹೋಗಿದ್ದರು. ವಿಶ್ವಾಮಿತ್ರರ ಕೃಪೆಯಿಂದ ಅವನು ಅವರ ಕಯ್ಯಿಂದ ತಪ್ಪಿಸಿಕೊಂಡು ಬದುಕಿ ಬಂದಿದ್ದನು.

ಅವರಿಗೆ ಆವೇಳೆಗಾಗಲೆ ಆರು ಜನ ಮಕ್ಕಳಿದ್ದರು. ಮೊದಲಿನ ಮೂವರು ಯಾವಾಗಲೂ ತಂದೆಯು ಹೇಳಿದಕ್ಕೆ ಪ್ರತಿಯನ್ನೇ ಹೇಳುವರು. ಕೊನೆಯ ಮೂವರು ತಂದೆಯ ಮಾತು ಎಂದರೆ, ಏನೇ ಆಗಲಿ ಎರಡು ಮಾತು ಆಡುತ್ತಿರಲಿಲ್ಲ. ಆರು ಜನರನ್ನೂ ಕರೆಸಿ “ಅಯ್ಯಾ! ಈ ಶುನಶ್ಶೇಫನು ಗುರುಹಿರಿಯರಲ್ಲಿ ಭಕ್ತಿಯುಳ್ಳವನು. ಇವನು ನಿಮ್ಮೆಲ್ಲರಿಗಿಂತಲೂ ವಿದ್ಯೆಯಲ್ಲಿಯೂ, ತಪಸ್ಸಿನಲ್ಲಿಯೂ ಹಿರಿಯನು. ಇವನೂ ನಿಮ್ಮಲ್ಲಿ ಒಬ್ಬನಾಗಿ ಇದ್ದು ಕೊಂಡಿರಲಿ” ಎಂದು ಹೇಳಿದರು.

ಮೊದಲ ಮೂವರು ಎಂದಿನಂತೆ ಎದುರು ಆಡಿದರು. ವಿಶ್ವಾಮಿತ್ರರೂ ಒಂದು ಸಲ ಹೇಳಿದರು. ಎರಡು ಸಲ ಹೇಳಿದರು. ಮೂರನೆಯ ಸಲವೂ ಹೇಳಿದರು. ಅವರು ಕೇಳಲಿಲ್ಲ. “ನಿಮ್ಮ ಮನೆಯೇ ಬೇಡ” ಎಂದು ಎಲ್ಲಿಗೋ ಹೊರಟು ಹೋದರು.

ಕೊನೆಯ ಮೂವರು “ತಂದೆಯೇ! ನೀನೇ ನಮಗೆ ದೇವರು. ನೀನು ಹೇಳಿದುದೇ ನಮಗೆ ವೇದವಾಕ್ಯವು. ನಿನ್ನ ಇಷ್ಟದಂತೆಯೇ ಆಗಲಿ. ಶುನಶ್ಶೇಫನೇ ನಮಗೆಲ್ಲ ಹಿರಿಯವನಾಗಲಿ” ಎಂದು ಒಪ್ಪಿಕೊಂಡರು. ವಿಶ್ವಾಮಿತ್ರರಿಗೆ ಸಂತೋಷವಾಯಿತು. ಆ ನಾಲ್ವರಿಗೂ ಸಕಲ ವಿದ್ಯೆಗಳನ್ನೂ ಉಪದೇಶಿಸಿ, ಸಿದ್ಧಿಯಾಗುವಂತೆ ಅನುಗ್ರಹಿಸಿದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...