Home / ಬಾಲ ಚಿಲುಮೆ / ಕಥೆ / ಹುಲಿಯೂ ಬೆಕ್ಕೂ

ಹುಲಿಯೂ ಬೆಕ್ಕೂ

ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು “ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು” ಎಂದಿತು. ಹುಲಿಯು “ಹಾಗೇ ಆಗಲಿ” ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ್ಕರೆಯಿಂದ ಕಲಿಸಲು ಮೊದಲು ಮಾಡಿತು.

ಆದರೆ ಬೆಕ್ಕಿಗೆ ಬಹಳ ಬುದ್ಧಿ. ತನಗಿಂತ ಗಾತ್ರದಲ್ಲಿ ದೊಡ್ಡದಾದ ಹುಲಿಯು ಮೇಲೆ ಬಿದ್ದರೆ ತಾನು ಉಳಿಯುವುದು ಅನುಮಾನವೆಂದು, ದೂರದಲ್ಲಿಯೇ ಇರುತ್ತಿತ್ತು. ಗುಟ್ಟರೆ ಹಾಕುವುದು, ಸದ್ದಾಗದಂತೆ ನಡೆಯುವುದು, ಪೊದೆಗಳಲ್ಲಿ ಅವಿತುಕೊಳ್ಳುವುದು, ಗುರಿಯಿಟ್ಟು ಹಾರುವುದು ಮೊದಲಾದ ವಿದ್ಯೆಗಳನ್ನು ಹೇಳಿಕೊಟ್ಟಿತು. ಹುಲಿಯು ಬಹಳ ವಿಧೇಯನಾಗಿ ಎಲ್ಲವನ್ನೂ ಕಲಿತುಕೊಂಡಿತು. ಅಲ್ಲಿಗೆ ಒಂದು ವರುಷವಾಯಿತು.

ಎರಡನೆಯ ವರುಷ ಕೊಂಚ ಕಷ್ಟದ ಪಾಠಗಳಿಗೆ ಆರಂಭವಾಯಿತು. ಕತ್ತಲಲ್ಲಿ ನೋಡುವುದು, ಹೊಂಚು ಹಾಕುವುದು, ಬಾಲವನ್ನು ನೆಲಕ್ಕಪ್ಪಳಿಸುವುದು, ಇವೆಲ್ಲವನ್ನೂ ಕಲಿತುಕೊಂಡಿತು.

ಮೂರನೆಯ ವರುಷ ಇನ್ನೂ ಕಷ್ಟದ ಪಾಠಗಳು. ಆದರೆ ಆಲ್ಲಿ ಕಲಿಯುವುದು ಹೆಚ್ಚಾಗಿರಲಿಲ್ಲ. ಆ ವರ್‍ಷ, ಉಗುರುಗಳನ್ನು ಬೇಕಾದಾಗ ಈಚೆಗೆ ಬಿಡುವುದು, ಬೇಡವಾದಾಗ ಒಳಗೆ ಎಳೆದುಕೊಳ್ಳುವುದು ಇದೊಂದು, ಮರ ಹತ್ತುವುದೊಂದು, ಹೀಗೆ ಎರಡೇ ಕಲಿಯಬೇಕಾಗಿದ್ದುದು. ಹುಲಿಯು ಉಗುರನ್ನು ಬಿಟ್ಟು ಎಳೆದುಕೊಳ್ಳುವುದನ್ನು ಕಲಿತುಕೊಂಡಿತು. ಬೆಕ್ಕು ಮರವನ್ನು ಹತ್ತುವುದನ್ನು ಹೇಳಿಕೊಡುತ್ತದೆ. ಎಷ್ಟುಸಲ ಹೇಳಿದರೂ ಹುಲಿಯು ಎಲ್ಲೋ ನೋಡಿಕೊಂಡಿತ್ತು. ಅದಕ್ಕೆ ತಿಳಿಯಲಿಲ್ಲ. ಅದಕ್ಕಾಗಿ ಬೆಕ್ಕು ಅದನ್ನು ಬೆತ್ತದಿಂದ ಹಾಗೆಂದಿತು, ಹುಲಿಯು ತಿರುಗಿ ತಟ್ಟನೆ ಮೇಲೆ ಬಿತ್ತು. ಆದರೆ ಬೆಕ್ಕು ಬಹಳ ಎಚ್ಚರಿಕೆಯಿಂದಿತ್ತು. ಹುಲಿಗೆ ಸಿಕ್ಕಲಿಲ್ಲ. ತಟ್ಟನೆ ಮರವನ್ನು ಹತ್ತಿ ಕೊಂಡಿತು. ಹುಲಿಗೆ ಮರ ಹತ್ತಲು ಆಗಲಿಲ್ಲ. ಆಗ ಅದಕ್ಕೆ “ನನಗೆ ಮರವನ್ನು ಹತ್ತುವುದು ಬರುವುದಿಲ್ಲ” ಎಂಬುದು ನೆನಪಿಗೆ ಬಂತು.

ಮತ್ತೆ ಬೆಕ್ಕು ಅವಿಧೇಯನಾದ ಹುಲಿಯನ್ನು ನಂಬಲಿಲ್ಲ. ತನ್ನ ಕೆಟ್ಟ ನಡತೆಗಾಗಿ ಹುಲಿಯು ಬಹಳ ನೊಂದುಕೊಂಡಿತು. ತಾನು ವಿಧೇಯನಾಗಿರುವೆನೆಂದು ಹೇಳಿಕೊಂಡಿತು. ಬೆಕ್ಕು “ನೀನು ಅವಿಧೇಯ. ಹೇಳಿದ ಹಾಗೆ ಕೇಳುವವನಲ್ಲ. ನಿನಗೆ ನಾನು ಪಾಠ ವನ್ನು ಹೇಳುವುದಿಲ್ಲ” ಎಂದು ಹೇಳಿಬಿಟ್ಟಿತು. ಹುಲಿಯು ಅತ್ತು, ಕಣ್ಣೀರು, ಕರೆಯಿತು. ಆದರೂ ಬೆಕ್ಕು ಮರ ಹತ್ತುವುದನ್ನು ಅದಕ್ಕೆ ಕಲಿಸಿ ಕೊಡಲಿಲ್ಲ. “ನನಗೆ ಮರ ಹತ್ತುವುದು ಬರುನುದಿಲ್ಲ” ಎಂದು ಹುಲಿಯು ಈಗಲೂ ಅಳುವುದಂತೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...