Home / ಬಾಲ ಚಿಲುಮೆ / ಕಥೆ / ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...