ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಬ್ಬಿಮರಿ
Next post ಷೇಕ್ಸ್‌ಪಿಯರ್

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…