Home / ಬಾಲ ಚಿಲುಮೆ / ಕಥೆ / ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...