Home / ಬಾಲ ಚಿಲುಮೆ / ಕಥೆ / ನೇರಿಲು ಹಣ್ಣಿನ ಕಥೆ

ನೇರಿಲು ಹಣ್ಣಿನ ಕಥೆ

ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್ಲ!” ಎಂದು ಅಲ್ಲಿದ್ದ ಋಷಿಗಳನ್ನು ವಿಚಾರಿಸಿದನು. ಅವರು, “ಅಯ್ಯಾ! ಇದು ಕಣ್ವಋಷಿಯ ಆಶ್ರಮದ ಹಣ್ಣು. ಆಲ್ಲಿ ವರ್‍ಷಕ್ಕೊಂದು ಸಲ ಇಂತಹುದೊಂದು ದೊಡ್ಡ ಹಣ್ಣಾಗುವುದು. ಆಗ ಋಷಿಯು ಕಣ್ಣು ಬಿಟ್ಟು ಕೈ ಚಾಚುವನು. ಹಣ್ಣು ಹೋಗಿ ಅವನ ಕೈಯ್ಯಲ್ಲಿ ಕೂಡುವುದು. ಆತನು ಇದನ್ನು ತಿಂದು, ಮತ್ತೆ ತಪಸ್ಸಿಗೆ ಕುಳಿತುಕೊಳ್ಳುವನು” ಎಂದರು.

ಇದನ್ನು ಕೇಳಿ ಧರ್‍ಮರಾಯನಿಗೆ “ಭೀಮನು ಋಷಿಯ ಹಣ್ಣನ್ನು ತಂದು ಬಿಟ್ಟನು. ಇನ್ನಾತನು ಕಣ್ಣು ತೆರೆವ ವೇಳಗೆ ಹಣ್ಣು ಇಲ್ಲದೆ ಇರಲು, ಆತನು ಎಷ್ಟುನೊಂದು ಕೊಳ್ಳುವನೋ! ಇನ್ನೇನು ಗತಿ?” ಎಂದು ದಿಗಿಲಾಯಿತು. ಕೂಡಲೆ ತನಗೆ ದಿಕ್ಕಾದ ಶ್ರೀಕೃಷ್ಣನನ್ನು ನೆನೆದನು. ಆತನೂ ಮಾಡುತ್ತಿದ್ದ ಕೆಲಸವನ್ನು ಬಿಟ್ಟುಬಂದನು. ಕೂಡಲೆ ಧರ್‍ಮರಾಯನು “ಕೃಷ್ಣಾ! ಹೀಗಾಗಿ ಹೋಯಿತು. ಭೀಮನು ಹಣ್ಣು ತಂದು ಬಿಟ್ಟನು. ಇನ್ನೇನು ಗತಿ” ಎಂದು ಅತ್ತನು. ಶ್ರೀಕೃಷ್ಣನು “ಇರಲಿ. ಬಾ” ಎಂದು ಅವರನ್ನೆಲ್ಲಾ ಆ ಮರದ ಬಳಿಗೆ ಕರೆದುಕೊಂಡು ಹೋದನು. ಅಲ್ಲಿ ಪಾಂಡವರನ್ನು ಕುರಿತು “ಅಯ್ಯಾ! ಈ ಹಣ್ಣು ಮೊದಲಿನಂತೆ ತೊಟ್ಟಿಗೆ ಸೇರಿತೊಳ್ಳಬೇಕಾದರೆ, ನಿಮ್ಮ ನಿಮ್ಮ ಮನಸ್ಸಿನಲ್ಲಿರುವುದನ್ನು ಮುಚ್ಚು ಮರೆಯಿಲ್ಲದೆ ಹೇಳಬೇಕು. ನೀವು ಹಾಗೆ ದಿಟ ಹೇಳಿದರೆ, ಅದು ತಾನೇ ಹೋಗಿ ತೊಟ್ಟಿಗೆ ಸೇರಿಕೊಳ್ಳುತ್ತದೆ. ಸುಳ್ಳು ಹೇಳಿದರೆ ಬಿದ್ದು ಹೋಗುತ್ತದೆ” ಎಂದನು.

ಎಲ್ಲರೂ “ಹಾಗೆ ಆಗಲಿ” ಎಂದರು. ಧರ್ಮರಾಯನು ತನ್ನ ಮನಸ್ಸಿನಲ್ಲಿದ್ದುದನ್ನು ಹೇಳಿದನು. ಹಣ್ಣು ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಭೀಮನು ನಿಜವನ್ನೇ ನುಡಿದನು. ಇನ್ನೂ ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಅರ್‍ಜುನನು ಸತ್ಯವನ್ನು ಆಡಿದನು. ಮತ್ತೂ ಒಂದಾಳು ಎತ್ತರ ಹತ್ತಿತು. ನಕುಲ ಸಹದೇವರೂ ನಿಶ್ಚಯವನ್ನೇ ನುಡಿದರು. ದ್ರೌಪದಿಯೂ ತನ್ನ ಮನಸ್ಸಿನಲ್ಲಿ ಇದ್ದುದನ್ನು ಕೊಂಚವೂ ಮುಚ್ಚದೆ ಹೇಳಿದಳು. ಹಣ್ಣು ಹೋಗಿ ತನ್ನ ಎಡೆಯನ್ನು ಸೇರಿತು.

ಪಾಂಡವರು ಬದುಕಿದೆವೆಂದು ಕೃಷ್ಣನನ್ನು ಕೊಂಡಾಡಿದರು. ಕೃಷ್ಣನು “ಅಯ್ಯಾ! ನನ್ನನ್ನು ಏಕೆ ಹೊಗಳುವಿರಿ? ಇದು ನೀವು ಆಡಿದ ದಿಟದ ಮಹಿಮೆ!” ಎಂದು ಹೇಳಿದನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...