Home / ಬಾಲ ಚಿಲುಮೆ / ಕಥೆ / ಶಿಲಾದಿತ್ಯ

ಶಿಲಾದಿತ್ಯ

ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು. ಆತನು ಅದನ್ನು ಹತ್ತಿ ಯುದ್ಧಕ್ಕೆ ಹೋಗುವನು. ಅಲ್ಲಿ ಯಾರ ಆಯುಧವೂ ಆತನನ್ನು ಗಾಯ ಪಡಿಸಲಾರದು. ಆತನು ಎಲ್ಲರನ್ನೂ ಗೆದ್ದು ಬಿಡುವನು. ಹೀಗೆಯೇ ಆತನು ಎಷ್ಟೋ ಯುದ್ಧಗಳನ್ನು ಗೆದ್ದು ಚಕ್ರವರ್‍ತಿಯಾಗಿದ್ದನು.

ಒಂದು ಸಲ ಅರಸನು ಅಲ್ಲಿ ಪೂಜೆಗೆ ಹೋಗುವಾಗ ಹಗೆಯವನು ಒಬ್ಬನು ಬಂದು ಕೊಳಕು ಬಟ್ಟೆಯ ಚೂರು ಒಂದನ್ನು ಇಟ್ಟುಕೊಂಡಿದ್ದು, ಅದನ್ನು ಆತನಿಗೆ ಕಾಣದಂತೆ ಉಡಿಯಲ್ಲಿ ಹಾಕಿಬಿಟ್ಟನು. ಅರಸನು ಎಂದಿನಂತೆ ಭಕ್ತಿಯಿಂದ ಪೂಜೆ ಮಾಡಿದರೂ ಏಳು ಬಣ್ಣದ ಕುದುರೆಯು ಬರಲಿಲ್ಲ. ಓಹೋ! ಏನೋ ಮೈಲಿಗೆಯಾಗಿರಬಹುದೆಂದು ನೋಡಲು, ಆತನು ಆರಿಯದಂತೆಯೇ ಆತನ ಉಡಿಯಲ್ಲಿ ಒಂದು ಚೂರು ಮೈಲಿಗೆ ಬಟ್ಟೆಯಿತ್ತು. ಅರಸನಿಗೆ ಆಗ ಕೊಳದಿಂದ ಕುದುರೆಯು ಬರದೆ ಇರಲು ಕಾರಣವೇನು ಎಂಬುದು ತಿಳಿಯಿತು. ಮತ್ತೆ ಮಿಂದು ಮಡಿಯುಟ್ಟು ಪೂಜಿಸಿದನು. ಆದರೂ ಕುದುರೆಯು ಬರಲಿಲ್ಲ. ಒಂದು ಸಲ ಮೈಲಿಗೆ ಸೋಕಿ, ಕೊಳದ ಮಹಿಮೆಯೇ ಹೋಗಿಬಿಟ್ಟಿತು.

ಅಂದಿನ ದಿನವೂ ಯುದ್ಧವಿತ್ತು. ಶಿಲಾದಿತ್ಯನೂ ಹೋದನು. ಆದರೆ ಆತನಿಗೆ ಅಂದಿನ ಯುದ್ಧವೇ ಕೊನೆಯಾಯಿತು. ಆತನು ಅಂದಿನ ರಣರಂಗದಿಂದ ಹಿಂತಿರುಗಲೇ ಇಲ್ಲ. ಆತನು ಅಲ್ಲಿಯೇ ಮಡಿದು ಹೋದನು.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...