Home / ಬಾಲ ಚಿಲುಮೆ / ಕಥೆ / ಶಿಲಾದಿತ್ಯ

ಶಿಲಾದಿತ್ಯ

ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು. ಆತನು ಅದನ್ನು ಹತ್ತಿ ಯುದ್ಧಕ್ಕೆ ಹೋಗುವನು. ಅಲ್ಲಿ ಯಾರ ಆಯುಧವೂ ಆತನನ್ನು ಗಾಯ ಪಡಿಸಲಾರದು. ಆತನು ಎಲ್ಲರನ್ನೂ ಗೆದ್ದು ಬಿಡುವನು. ಹೀಗೆಯೇ ಆತನು ಎಷ್ಟೋ ಯುದ್ಧಗಳನ್ನು ಗೆದ್ದು ಚಕ್ರವರ್‍ತಿಯಾಗಿದ್ದನು.

ಒಂದು ಸಲ ಅರಸನು ಅಲ್ಲಿ ಪೂಜೆಗೆ ಹೋಗುವಾಗ ಹಗೆಯವನು ಒಬ್ಬನು ಬಂದು ಕೊಳಕು ಬಟ್ಟೆಯ ಚೂರು ಒಂದನ್ನು ಇಟ್ಟುಕೊಂಡಿದ್ದು, ಅದನ್ನು ಆತನಿಗೆ ಕಾಣದಂತೆ ಉಡಿಯಲ್ಲಿ ಹಾಕಿಬಿಟ್ಟನು. ಅರಸನು ಎಂದಿನಂತೆ ಭಕ್ತಿಯಿಂದ ಪೂಜೆ ಮಾಡಿದರೂ ಏಳು ಬಣ್ಣದ ಕುದುರೆಯು ಬರಲಿಲ್ಲ. ಓಹೋ! ಏನೋ ಮೈಲಿಗೆಯಾಗಿರಬಹುದೆಂದು ನೋಡಲು, ಆತನು ಆರಿಯದಂತೆಯೇ ಆತನ ಉಡಿಯಲ್ಲಿ ಒಂದು ಚೂರು ಮೈಲಿಗೆ ಬಟ್ಟೆಯಿತ್ತು. ಅರಸನಿಗೆ ಆಗ ಕೊಳದಿಂದ ಕುದುರೆಯು ಬರದೆ ಇರಲು ಕಾರಣವೇನು ಎಂಬುದು ತಿಳಿಯಿತು. ಮತ್ತೆ ಮಿಂದು ಮಡಿಯುಟ್ಟು ಪೂಜಿಸಿದನು. ಆದರೂ ಕುದುರೆಯು ಬರಲಿಲ್ಲ. ಒಂದು ಸಲ ಮೈಲಿಗೆ ಸೋಕಿ, ಕೊಳದ ಮಹಿಮೆಯೇ ಹೋಗಿಬಿಟ್ಟಿತು.

ಅಂದಿನ ದಿನವೂ ಯುದ್ಧವಿತ್ತು. ಶಿಲಾದಿತ್ಯನೂ ಹೋದನು. ಆದರೆ ಆತನಿಗೆ ಅಂದಿನ ಯುದ್ಧವೇ ಕೊನೆಯಾಯಿತು. ಆತನು ಅಂದಿನ ರಣರಂಗದಿಂದ ಹಿಂತಿರುಗಲೇ ಇಲ್ಲ. ಆತನು ಅಲ್ಲಿಯೇ ಮಡಿದು ಹೋದನು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...