Home / ಬಾಲ ಚಿಲುಮೆ / ಕಥೆ / ಬಡಗಿಗಳೂ ಆನೆಯೂ

ಬಡಗಿಗಳೂ ಆನೆಯೂ

ಕಪಿಲಾನದಿಯ ತೀರದಲ್ಲಿ ಒಂದು ಕಾಡು. ಬಡಗಿಗಳು ಅಲ್ಲಿ ಮರವನ್ನು ಕುಯ್ಯುತ್ತಿದ್ದರು. ಎಲ್ಲರೂ ತಮ್ಮ ತಮ್ಮ ಪಾಡಿಗೆ ತಾವು ತಾವು ಕೆಲಸ ಮಾಡುತ್ತಿದ್ದರು. ಆಗ ಆನೆಯು ಘೀಳಿಟ್ಟಿಂತೆ ಆಗಲು ಎಲ್ಲರಿಗೂ ಹೆದರಿಕೆ ಆಯಿತು. ಮತ್ತೂ ಒಂದು ಸಲ ಹಾಗೆಯೇ ಅದೇ ಶಬ್ದ ಕೇಳಿಸಿತು. ಎಲ್ಲಿಯವರು ಅಲ್ಲಲ್ಲೇ ಅಡಗಿಕೊಂಡು ಬಿಟ್ಟರು.

ಒಂದು ದೊಡ್ಡ ಕೊಂಬಿನಾನೆ ಕುಂಟುತ್ತಾ ಬಂತು. ಅದಕ್ಕೆ ಬಲಗಡೆಯ ಮುಂಗಾಲು ಮುಂದಕ್ಕೆ ಇಡುವುದಕ್ಕೂ ಆಗದಷ್ಟು ಗಾತ್ರ ಬಾತುಕೊಂಡಿತ್ತು. ಬಲು ಕಸ್ಟದಿಂದ ಆನೆಯು ಆ ಬಡಗಿಗಳು ಇರುವ ತಾವಿಗೆ ಬಂತು. ಇನ್ನು ಮುಂದೆ ಹೋಗಲಾರದೆ ಮಲಗಿಕೊಂಡು ಬಿಟ್ಟಿತು. ಅದು ನೋವಿನಿಂದ ನರಳುತ್ತಿತ್ತು.

ಆನೆಯು ಬಾಧೆ ಪಡುತ್ತಿರುವುದು ಬಡಗಿಗಳಿಗೆ ತಿಳಿಯಿತು. ಮನಸ್ಸು ನಿಲ್ಲದೆ ಆದುದು ಆಗಲಿ ಎಂದು ಅವಿತಿದ್ದವನು ಆನೆಯ ಬಳಿಗೆ ಹೋದನು. ಅವನು ಹತ್ತಿರ ಬಂದರೂ ಆನೆಯು ಏನೂ ಮಾಡಲಿಲ್ಲ. ಅವನಿಗೆ ಧೈರ್‍ಯವಾಗಿ, ಇನ್ನೂ ಹತ್ತಿರಕ್ಕೆ ಹೋದನು. ಆನೆಯು ಅವನ ಮುಖವನ್ನು ನೋಡಿ, ಕಣ್ಣೀರು ಬಿಟ್ಟಿತು. ಅದನ್ನು ನೋಡಿದರೆ “ನೀನು ಬಂದು ಏನಾಗಿದೆ ನೋಡು” ಎಂದು ಹೇಳುವ ಹಾಗೆ ತೋರಿತು. ಅದೂ ಒಂದು ಸಲ ನರಳಿತು. ಇನ್ನು ಸೈರಿಸುವುದು ಅಸಾಧ್ಯವಾಗಿ, ಊದಿದ ಕಾಲಿನ ಬಳಿಗೆ ಹೋದನು. ಎಡಗೈಯಲ್ಲಿ ಜೀವವನ್ನು ಹಿಡಿದುಕೊಂಡು, ಆ ಕಾಲನ್ನು ಹಿಡಿದು ನೋಡಿದರೆ. ಸುಮಾರು ಒಂದು ಗೇಣುದ್ದ, ಒಂದು ಹೆಬ್ಬೆರಳು ದಪ್ಪ ಇರುವ ಸಿಬಿರು ಚುಚ್ಚಿಕೊಂಡಿರುವುದು ಕಂಡು ಬಂತು. ಆದರಿಂದ ಆನೆಗೆ ಎಷ್ಟು ನೋವಾಗಿರಬಹುದೋ ಎಂದು ಅವನಿಗೆ ಕಣ್ಣಿನಲ್ಲಿ ನೀರು ಬಂತು. ಕೂಡಲೇ ತನ್ನವರನ್ನು ಕರೆದು ಬಿಸಿ ನೀರು ಕಾಯಿಸಿ ತರಿಸಿ ಅದನ್ನು ಹಾಕಿ ತೊಳೆದನು. ಆನೆಗೂ ಕೊಂಚ ಹಿತವಾಗಿ, ಒಂದು ನಿಟ್ಟುಸಿರು ಬಿಟ್ಟಿತು. ಹಾಗೇ ಇನ್ನೂ ಸ್ವಲ್ಪ ಬಿಸಿನೀರು ಹಾಕುತ್ತಿದ್ದು, ಕೊನೆಗೆ ಆ ಸಿಬಿರನ್ನು ಕಿತ್ತುಬಿಟ್ಟಿನು. ಸಿಬಿರು ಈಚೆಗೆ ಬಂದು ಬಿಟ್ಟಿತು. ಆ ವೇಳೆಗೆ ಧೈರ್‍ಯಗೊಂಡು ಎಲ್ಲರೂ ಅಲ್ಲಿಗೆ ಬಂದರು. ಆ ಗಾಯದಲ್ಲಿದ್ದ ಕೀವು ರಕ್ತಗಳನ ಚೆನ್ನಾಗಿ ತೊಳೆದು ಅದಕ್ಕೆ ತಮ್ಮಲ್ಲಿದ್ದ ಔಷಧಿಯನ್ನು ಹಾಕಿದರು.

ಆ ಹುಣ್ಣು ಆರುವುದಕ್ಕೆ ಒಂದು ತಿಂಗಳು ಹಿಡಿಯಿತು, ಅದುವರೆಗೂ ಆನೆಯು ಅಲ್ಲಿಯೇ ಇತ್ತು. ಬಡಗಿಗಳೂ ಅದಕ್ಕೆ ಅಲ್ಲಿಗೇ ಸೊಪ್ಪು ತಂದು ಹಾಕುತ್ತಿದ್ದರು. ಜತೆಗೆ ‘ಪಾಪ!’ ಎಂದು ತಾವು ತಂದಿದ್ದ ಬುತ್ತಿಯಲ್ಲೂ ಕೊಂಚಕೊಂಚ ಕೊಡುತ್ತಿದ್ದರು. ಆನೆಗೆ ಬಡಗಿಗಳಲ್ಲಿ ಪ್ರೀತಿ ಹುಟ್ಟಿತು. ಆನೆಯು ಅವರನ್ನು ಬಿಟ್ಟು ಹೋಗಲಾರದೆ ಆಲಿಯೇ ನಿಂತು ಬಿಟ್ಟಿತು. ಅವರಿಗಾಗಿ ಏನಾದರೂ ಕೆಲಸ ಮಾಡಿಕೊಡಬೇಕೆಂದು ದಿಮ್ಮಿಗಳನ್ನು ಸಾಗಿಸುವುದು, ಮರ ಎಳೆಯುವುದು ಮೊದಲಾದ ಕೆಲಸಗಳನ್ನು ಮಾಡಿಕೊಡುತ್ತಿತ್ತು. ಬಡಗಿಗಳ ಮಕ್ಕಳು ಯಾವತ್ತಾದರೂ ಬಂದರೆ ಅವರನ್ನು ಬೆನ್ನಿನ ಮೇಲೆ ಕೂಡಿಸಿಕೊಂಡು ಓಡಾಡಿಸುತ್ತಿತ್ತು.
*****

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...