Home / ಬಾಲ ಚಿಲುಮೆ / ಕಥೆ / ಬಡಗಿಗಳೂ ಆನೆಯೂ

ಬಡಗಿಗಳೂ ಆನೆಯೂ

ಕಪಿಲಾನದಿಯ ತೀರದಲ್ಲಿ ಒಂದು ಕಾಡು. ಬಡಗಿಗಳು ಅಲ್ಲಿ ಮರವನ್ನು ಕುಯ್ಯುತ್ತಿದ್ದರು. ಎಲ್ಲರೂ ತಮ್ಮ ತಮ್ಮ ಪಾಡಿಗೆ ತಾವು ತಾವು ಕೆಲಸ ಮಾಡುತ್ತಿದ್ದರು. ಆಗ ಆನೆಯು ಘೀಳಿಟ್ಟಿಂತೆ ಆಗಲು ಎಲ್ಲರಿಗೂ ಹೆದರಿಕೆ ಆಯಿತು. ಮತ್ತೂ ಒಂದು ಸಲ ಹಾಗೆಯೇ ಅದೇ ಶಬ್ದ ಕೇಳಿಸಿತು. ಎಲ್ಲಿಯವರು ಅಲ್ಲಲ್ಲೇ ಅಡಗಿಕೊಂಡು ಬಿಟ್ಟರು.

ಒಂದು ದೊಡ್ಡ ಕೊಂಬಿನಾನೆ ಕುಂಟುತ್ತಾ ಬಂತು. ಅದಕ್ಕೆ ಬಲಗಡೆಯ ಮುಂಗಾಲು ಮುಂದಕ್ಕೆ ಇಡುವುದಕ್ಕೂ ಆಗದಷ್ಟು ಗಾತ್ರ ಬಾತುಕೊಂಡಿತ್ತು. ಬಲು ಕಸ್ಟದಿಂದ ಆನೆಯು ಆ ಬಡಗಿಗಳು ಇರುವ ತಾವಿಗೆ ಬಂತು. ಇನ್ನು ಮುಂದೆ ಹೋಗಲಾರದೆ ಮಲಗಿಕೊಂಡು ಬಿಟ್ಟಿತು. ಅದು ನೋವಿನಿಂದ ನರಳುತ್ತಿತ್ತು.

ಆನೆಯು ಬಾಧೆ ಪಡುತ್ತಿರುವುದು ಬಡಗಿಗಳಿಗೆ ತಿಳಿಯಿತು. ಮನಸ್ಸು ನಿಲ್ಲದೆ ಆದುದು ಆಗಲಿ ಎಂದು ಅವಿತಿದ್ದವನು ಆನೆಯ ಬಳಿಗೆ ಹೋದನು. ಅವನು ಹತ್ತಿರ ಬಂದರೂ ಆನೆಯು ಏನೂ ಮಾಡಲಿಲ್ಲ. ಅವನಿಗೆ ಧೈರ್‍ಯವಾಗಿ, ಇನ್ನೂ ಹತ್ತಿರಕ್ಕೆ ಹೋದನು. ಆನೆಯು ಅವನ ಮುಖವನ್ನು ನೋಡಿ, ಕಣ್ಣೀರು ಬಿಟ್ಟಿತು. ಅದನ್ನು ನೋಡಿದರೆ “ನೀನು ಬಂದು ಏನಾಗಿದೆ ನೋಡು” ಎಂದು ಹೇಳುವ ಹಾಗೆ ತೋರಿತು. ಅದೂ ಒಂದು ಸಲ ನರಳಿತು. ಇನ್ನು ಸೈರಿಸುವುದು ಅಸಾಧ್ಯವಾಗಿ, ಊದಿದ ಕಾಲಿನ ಬಳಿಗೆ ಹೋದನು. ಎಡಗೈಯಲ್ಲಿ ಜೀವವನ್ನು ಹಿಡಿದುಕೊಂಡು, ಆ ಕಾಲನ್ನು ಹಿಡಿದು ನೋಡಿದರೆ. ಸುಮಾರು ಒಂದು ಗೇಣುದ್ದ, ಒಂದು ಹೆಬ್ಬೆರಳು ದಪ್ಪ ಇರುವ ಸಿಬಿರು ಚುಚ್ಚಿಕೊಂಡಿರುವುದು ಕಂಡು ಬಂತು. ಆದರಿಂದ ಆನೆಗೆ ಎಷ್ಟು ನೋವಾಗಿರಬಹುದೋ ಎಂದು ಅವನಿಗೆ ಕಣ್ಣಿನಲ್ಲಿ ನೀರು ಬಂತು. ಕೂಡಲೇ ತನ್ನವರನ್ನು ಕರೆದು ಬಿಸಿ ನೀರು ಕಾಯಿಸಿ ತರಿಸಿ ಅದನ್ನು ಹಾಕಿ ತೊಳೆದನು. ಆನೆಗೂ ಕೊಂಚ ಹಿತವಾಗಿ, ಒಂದು ನಿಟ್ಟುಸಿರು ಬಿಟ್ಟಿತು. ಹಾಗೇ ಇನ್ನೂ ಸ್ವಲ್ಪ ಬಿಸಿನೀರು ಹಾಕುತ್ತಿದ್ದು, ಕೊನೆಗೆ ಆ ಸಿಬಿರನ್ನು ಕಿತ್ತುಬಿಟ್ಟಿನು. ಸಿಬಿರು ಈಚೆಗೆ ಬಂದು ಬಿಟ್ಟಿತು. ಆ ವೇಳೆಗೆ ಧೈರ್‍ಯಗೊಂಡು ಎಲ್ಲರೂ ಅಲ್ಲಿಗೆ ಬಂದರು. ಆ ಗಾಯದಲ್ಲಿದ್ದ ಕೀವು ರಕ್ತಗಳನ ಚೆನ್ನಾಗಿ ತೊಳೆದು ಅದಕ್ಕೆ ತಮ್ಮಲ್ಲಿದ್ದ ಔಷಧಿಯನ್ನು ಹಾಕಿದರು.

ಆ ಹುಣ್ಣು ಆರುವುದಕ್ಕೆ ಒಂದು ತಿಂಗಳು ಹಿಡಿಯಿತು, ಅದುವರೆಗೂ ಆನೆಯು ಅಲ್ಲಿಯೇ ಇತ್ತು. ಬಡಗಿಗಳೂ ಅದಕ್ಕೆ ಅಲ್ಲಿಗೇ ಸೊಪ್ಪು ತಂದು ಹಾಕುತ್ತಿದ್ದರು. ಜತೆಗೆ ‘ಪಾಪ!’ ಎಂದು ತಾವು ತಂದಿದ್ದ ಬುತ್ತಿಯಲ್ಲೂ ಕೊಂಚಕೊಂಚ ಕೊಡುತ್ತಿದ್ದರು. ಆನೆಗೆ ಬಡಗಿಗಳಲ್ಲಿ ಪ್ರೀತಿ ಹುಟ್ಟಿತು. ಆನೆಯು ಅವರನ್ನು ಬಿಟ್ಟು ಹೋಗಲಾರದೆ ಆಲಿಯೇ ನಿಂತು ಬಿಟ್ಟಿತು. ಅವರಿಗಾಗಿ ಏನಾದರೂ ಕೆಲಸ ಮಾಡಿಕೊಡಬೇಕೆಂದು ದಿಮ್ಮಿಗಳನ್ನು ಸಾಗಿಸುವುದು, ಮರ ಎಳೆಯುವುದು ಮೊದಲಾದ ಕೆಲಸಗಳನ್ನು ಮಾಡಿಕೊಡುತ್ತಿತ್ತು. ಬಡಗಿಗಳ ಮಕ್ಕಳು ಯಾವತ್ತಾದರೂ ಬಂದರೆ ಅವರನ್ನು ಬೆನ್ನಿನ ಮೇಲೆ ಕೂಡಿಸಿಕೊಂಡು ಓಡಾಡಿಸುತ್ತಿತ್ತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...