Home / ಬಾಲ ಚಿಲುಮೆ / ಕಥೆ / ರಾಮೂ ಶ್ಯಾಮೂ

ರಾಮೂ ಶ್ಯಾಮೂ

ರಾಮೂ ಶ್ಯಾಮೂ ಇಬ್ಬರೂ ಒಳ್ಳೆಯ ಸಂಗಾತಿಗಳು. ಯಾವಾಗಲು ಅವರು ಜತೆಯಲ್ಲೇ ಇರುವರು. ಅಡುವಾಗ ಇಬ್ಬರೂ ಒಟ್ಟಿಗೆ ಆಡುವರು. ಓದುವಾಗ ಇಬ್ಬರೂ ಓದುವರು ಆದರೂ ಇವರಿಬ್ಬರಿಗೂ ಒಂದು ಭೇದವಿತ್ತು. ರಾಮು ಹೊತ್ತಿಗೆ ಸರಿಯಾಗಿ ಶಾಲೆಗೆ ಬರುವನು. ಶ್ಯಾಮು ಹೊತ್ತು ಹೋಗಿಯೇ ಬರುವನು. ಎಂಟು ಘಂಟೆಗೆ ಬರಬೇಕಾದರೆ ಎಂಟೂವರೆಗೆ ಬರುವನು.

ಮಹಾರಾಜರ ವರ್‍ಧಂತಿ ಬಂತು. ಉಪಾಧ್ಯಾಯರು ಬಂದು “ಈ ದಿನ ಎಲ್ಲರಿಗೂ ಲಾಡು ಕೊಡುತ್ತದೆ. ಎಲ್ಲರೂ ಮೂರು ಘಂಟೆಯ ವೇಳೆಗೆ ಸರಿಯಾಗಿ ಇಲ್ಲಿಗೆ ಬಂದು ಇರಬೇಕು” ಎಂದು ಹೇಳಿದರು.

ರಾಮೂಗೆ ಗೊತ್ತು ಶ್ಯಾಮು ಹೊತ್ತಾಗಿ ಬರುತ್ತಾನೆ ಎಂದು. ಆದರೆ ಶ್ಯಾಮೂಗೆ ಲಾಡು ತಪ್ಪಿ ಹೋಗುವುದು ಅವನಿಗೆ ಇಷ್ಟವಿಲ್ಲ. ಅದಕ್ಕಾಗಿ ಅವನು ಶ್ಯಾಮು ಮನೆಗೆ ಒಂದೂವರೆಗೇ ಹೋದನು, ಅವನು ಇನ್ನೂ ಊಟವೇ ಮಾಡಿರಲಿಲ್ಲ. “ಶಾಲೆಗೆ ಬರುವುದಿಲ್ಲವೇನೋ? ಲಾಡು ಕೊಡುತ್ತಾರೆ” ಎಂದನು. “ಹೌದಪ್ಪ! ಬೇಗ ಹೋಗಬೇಕು” ಎಂದು ಶ್ಯಾಮೂ ಅವಸರಪಟ್ಟು, ಬೇಗ ಬೇಗ ಊಟಮಾಡಿದನು. ಮಡಿಬಟ್ಟೆಗಳನ್ನು ಉಟ್ಟು ತೊಟ್ಟು ಕೊಂಡನು. ರಾಮೂ ಜತೆಯಲ್ಲಿ ಶಾಲೆಗೆ ಬಂದನು. ಅವನಿಗೆ, ಏನೋ ಬಹಳ ಜಾಗ್ರತೆ ಬಂದಂತೆ ಇದ್ದರೂ, ಎರಡೂ ಮುಕ್ಕಾಲು ಘಂಟೆಯಾಗಿತ್ತು. ಶ್ಯಾಮು ಹೊತ್ತಿಗೆ ಸರಿಯಾಗಿ ಬಂದುದು ಎಲ್ಲರಿಗೂ ಆಶ್ಚರ್‍ಯ. ಮೂರು ಘಂಟೆಗೆ ಸರಿಯಾಗಿ ಘಂಟೆಯು ಬಾರಿಸಿತು. ಹುಡುಗರೆಲ್ಲರೂ ಬಂದು ಶಾಲೆಯ ಅಂಗಳದಲ್ಲಿ ಸೇರಿದರು. ಉಪಾಧ್ಯಾಯರು ಬಾಗಿಲಲ್ಲಿ ನಿಂತು, ಒಬ್ಬೊಬ್ಬರಿಗೆ ಒಂದೊಂದು ಲಾಡು ಕೊಟ್ಟು ಕಳುಹಿಸಿದರು.

ರಾಮೂ ಶ್ಯಾಮೂ ಲಾಡುವನ್ನು ಈಸಿ ಕೊಂಡು ಈಚೆಗೆ ಬಂದರು. ಬಾಗಿಲಲ್ಲಿ ಭೀಮನು ಅಳುತ್ತ ನಿಂತಿದ್ದನು. ಉಪಾಧ್ಯಾಯರು “ನಿನಗೆ ಅದೇ ಶಿಕ್ಷೆ! ಕೊಡುವುದಿಲ್ಲ ಹೋಗು” ಎನ್ನುತ್ತಿದ್ದರು. ಭೀಮನು ಅಳುತ್ತಿದ್ದನು. ರಾಮುವು “ಶ್ಯಾಮೂ! ನೋಡಿದೆಯಾ? ನಿನಗೂ ಹೀಗೆ ಆಗಬೇಕಾಗಿತ್ತು. ನೀನು ನಿತ್ಯ ಬರುತ್ತಿದ್ದ ಹಾಗೆ ಇವನು ಹೊತ್ತುಮೀರಿ ಬಂದನು. ಇವನಿಗೆ ಲಾಡು ತಪ್ಪಿ ಹೋಯಿತು” ಎಂದನು.

ಆವತ್ತು ಅವನಿಗೆ ತಾನು ಮಾಡುತ್ತಿದ್ದ ತಪ್ಪು ತಿಳಿಯಿತು. “ನಿತ್ಯವೂ ಹೊತ್ತಿಗೆ ಸರಿಯಾಗಿ ಶಾಲೆಗೆ ಹೋಗು” ಎಂದು ತಂದೆ ತಾಯಿಗಳು ಹೇಳುತ್ತಿದ್ದರು ಅವನೂ ಹೂ ಎಂದುಕೊಂಡಿದ್ದನು ಅಷ್ಟೆ. ಆದರೆ ಆವತ್ತು ಅವನಿಗೆ ತಿಳಿಯಿತು. ಇನ್ನು ಮೇಲೆ ಯಾವತ್ತೂ ಹೊತ್ತುಹೋಗಿ ಶಾಲೆಗೆ ಹೋಗುವುದಿಲ್ಲ ‌ಎಂದು ಮಸ್ಸಿನಲ್ಲಿ ಗಟ್ಟಿ ಮಾಡಿದನು. ಅದೇ ಮೇರೆಗೆ ಹೊತ್ತಿಗೆ ಸರಿಯಾಗಿ ಬರಲಾರಂಭಿಸಿದನು.

ಈಗ ಅದೇ ಶ್ಯಾಮು ದೊಡ್ಡ ವ್ಯಾಪಾರಿಯಾಗಿದ್ದಾನೆ. ಈಗ ಅವನನನ್ನು ಕೇಳಿದರೆ “ಹುಡುಗರು ಯಾವಾಗಲೂ ಹೊತ್ತು ಮೀರಿ ಹೋಗಬಾರದು” ಎಂದು ತನ್ನ ಕಥೆಯನ್ನು ಹೇಳುತ್ತಾನೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...