Home / ಲೇಖನ / ವಿಜ್ಞಾನ / ಅಪಾಯಗಳಿಗೆ ಮುನ್ಸೂಚನೆ ನೀಡುವ ಪ್ರಾಣಿಲೋಕ!

ಅಪಾಯಗಳಿಗೆ ಮುನ್ಸೂಚನೆ ನೀಡುವ ಪ್ರಾಣಿಲೋಕ!

ಇದ್ದಕ್ಕಿದ್ದಂತೆ ನೈಸರ್‍ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆಕ್ರಮಿಸಿಕೊಂಡ ಆಘಾತವೆಂದು ಅಂದು ಕೊಳ್ಳುತ್ತವೆ. ಆದರೆ ಇಂಥಹ ಅಪಾಯಗಳನ್ನು ಮುಂಚಿತವಾಗಿಯೇ ಮನಗಂಡ ಅನೇಕ ಪಕ್ಷಿ ಪ್ರಾಣಿಗಳು ನಮಗೆ ಅನೇಕ ಸೂಚನೆಗಳನ್ನು ನೀಡುತ್ತವೆ. ನಾವು ಗಮನಿಸುವುದೇ ಇಲ್ಲ. ಈಗ ನೋಡಿ ಪ್ರಾಣಿ, ಪಕ್ಷಿ, ಜಲಚರಗಳು ಅಪಾಯಗಳ ಮುನ್ಸೂಚನೆಯನ್ನು ಹೀಗೆ ನೀಡುತ್ತದೆ. (ವೈಜ್ಞಾನಿಕವಾಗಿ ಕಂಡು ಹಿಡಿಯಲಾಗಿದೆ.) ಹಾವು ಮತ್ತು ಇಲಿಗಳು ತಮ್ಮ ಬಿಲಗಳನ್ನು ಬಿಟ್ಟು ದಿಕ್ಕೆಟ್ಟು ಓಡುತ್ತವೆ. ಮೀನುಗಳು ನೀರಿನಿಂದ ಹಾರುತ್ತವೆ. ಆಕ್ವೇರಿಯಂ ಮೀನುಗಳು ಡಿಕ್ಕಿ ಹೊಡೆಯುತ್ತವೆ. ಆಮೆಗಳು ಪಲ್ಟಿ ಹೊಡೆಯುತ್ತ ಧಾವಿಸುತ್ತದೆ. ದನ, ಕರು, ಕುರಿ, ಮತ್ತು ಕುದುರೆಗಳು ತಾವು ಇರುವ ಸ್ಥಳಕ್ಕೆ ಹೋಗುವದಿಲ್ಲ, ಕೋಳಿಮರಿಗಳು ಗಿಡ ಏರುತ್ತವೆ. ಬಾತು ಕೋಳಿಗಳು ನೀರಿಗೆ ಹೋಗಲು ನಿರಾಕರಿಸುತ್ತವೆ. ನಾಯಿಗಳು ವಿನಾಕಾರಣ ಬೊಗಳುತ್ತವೆ, ಹಂದಿಗಳು ಪರಸ್ಪರ ಕಚ್ಚಾಡುತ್ತವೆ. ಜಿಂಕೆಗಳು ದಿಕ್ಕೆಟ್ಟು ಓಡುತ್ತವೆ ಮತ್ತು ಜಿರಳೆಗಳು ವೃತ್ತಾಕಾರವಾಗಿ ಸುತ್ತುತ್ತವೆ. ಇದೆಲ್ಲ ಕ್ರಿಯೆ ನಡೆಯುವದು ಭೂಕಂಪದ ಮುನ್ಸೂಚನೆಯನ್ನು ತಿಳಿಸುತ್ತದೆ. ಜ್ವಾಲಾಮುಖಿ, ಬಿರುಗಾಳಿ, ಅಥವಾ ನೈಸರ್‍ಗಿಕ ವಿಕೋಪಗಳಾದರೆ, ಜೆಲ್ಲಿ ಮೀನು ೧೦-೧೫ ಗಂಟೆಗಳ ಮೊದಲೇ ಬಿರುಗಾಳಿಯ ಮುನ್ಸೂಚನ ಅರಿಯುತ್ತದೆ. ಆದ್ದರಿಂದ ಸಮುದ್ರ ದಂಡೆಯಿಂದ ಸಮುದ್ರದಾಳಕ್ಕೆ ಹೋಗುತ್ತದೆ. ಕೇಡುಗಾಲ ಬಂದಾಗ ಅದನ್ನರಿತ ಮೀನು ಸಮುದ್ರದಾಳದ ಮೀನು ನೀರಿನ ಮೇಲೆ ಬರುತ್ತದೆ. ಆರ್‍ಕ್ಟಿಕ್ ಪ್ರದೇಶದಲ್ಲಿ ವಾಸಿಸುವ ಟಾರಾಮಿಗಾನ್ ಎಂಬ ಹಕ್ಕಿಯನ್ನು ಪಕ್ಷಿ ಸಂಕುಲದ ಜೋತಿಷಿ ಎಂದೇ ಗುರುತಿಸಲಾಗುತ್ತದೆ. ಏಕೆಂದರೆ ತನ್ನ ಪರಿಸರದಲ್ಲಿ ಮುಂದೆ ಆಗಲಿರುವ ಬದಲಾವಣೆಗಳನ್ನು ಗುರುತಿಸುತ್ತದೆ. ವೈಪರಿತ್ಯವಾದ ಸೂಚನೆಗಳೆನಾದರೂ ತಿಳಿದರೆ ಅಲ್ಲಿಂದ ಜಾಗ ಖಾಲಿಮಾಡಿ ಬಿಡುತ್ತವೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...