Home / ಲೇಖನ / ವಿಜ್ಞಾನ / ಜೈವಿಕ ಡಿಸೆಲ್ – ಹೊಂಗೆ ಎಣ್ಣೆ

ಜೈವಿಕ ಡಿಸೆಲ್ – ಹೊಂಗೆ ಎಣ್ಣೆ

ನಮ್ಮ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಆಮದಿನ ಮೇಲೆ ಅಪಾರ ಪ್ರಮಾಣದ ವಿದೇಶಿ ವಿನಿಮಯ ವ್ಯಚ್ಚವಾಗುತ್ತದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿಯ ಮೇಲೆ ಗಂಭೀರ ಪರಿಣಾಮಗಳು ಬೀರುತ್ತವೆ. ಇದಕ್ಕಿಂತಲೂ ಮಿಗಿಲಾಗಿ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು ನಾವೇ ತಂದು ಕೊಂಡಂತಾಗುತ್ತದೆ. ಇದೆಲ್ಲ ಸಮಸ್ಯೆಗಳಿಗೆ ಮಾರ್‍ಗೋಪಾಯ ಕಂಡು ಹಿಡಿಯಲಾಗಿದೆ. ಪೆಟ್ರೋಲಿಯಂ ಇಂಧನಗಳ ಬದಲಿಗೆ ಸಸ್ಯಗಳಿಂದ ಉತ್ಪತ್ತಿಯಾಗುವ ಜೈವಿಕ ಇಂಧನವನ್ನು ಬಳಸುವುದು. ಹೀಗೆ ಹಲವಾರು ಸಸ್ಯಗಳ ಎಣ್ಣೆಗಳನ್ನು ಬದಲಿ ಇಂಧನವಾಗಿ ಬಳಸಬಹುದುದಾಗಿದೆ. ಇವುಗಳಲ್ಲಿ ಹೊಂಗೆ ಎಣ್ಣೆ ಪ್ರಮುಖವಾಗುತ್ತದೆ. ಬಹು ಉಪಯೋಗಿ ಹೊಂಗೆಮರ ರೈತರಿಗೆ ಉಪಕಾರಿಯಾಗಿದೆ. ಈ ಮರವು ದೇಶದೆಲ್ಲೆಡೆ ಬೆಳೆಯುತ್ತದೆ. ಹೆಚ್ಚಾಗಿ ಮಳೆ ಕಡಿಮೆ ಬೀಳುವ ಎಲ್ಲ ತರಹದ ಭೂಮಿಗಳಲ್ಲಿ ಹೇರಳವಾಗಿ ಹುಲುಸಾಗಿ, ಬೆಳೆಯುತ್ತದೆ. ಈ ಹೊಂಗೆಮರದ ಶಾಸ್ತ್ರೀಯ ಹೆಸರು “ಪೊಂಗೆಮಿಯಾ ಪಿನ್ನೇಟಿ” ಎಂದು ಕರೆಯುತ್ತಿದ್ದು, ಇದರ ಬೀಜದಿಂದ ಬರುವ ಎಣ್ಣೆಯನ್ನು ಸಾಂಪ್ರದಾಯಿಕ ದೀಪ ಬೆಳೆಗಿಸಲು ಔಷಧಿ ರೂಪದಲ್ಲಿ ಉಪಯೋಗಿಸುತ್ತಾರೆ. ಇದರ ಎಣ್ಣೆಯನ್ನು ಡಿಸೆಲ್‌ಗೆ ಬದಲಾಗಿ ಬಳಸುವ ಸಂಶೋಧನೆ ಯಶಸ್ವಿಯಾಗಿದೆ. ಜತೆಗೆ ದೇಶಿ ತಯಾರಿಕೆಯುಳ್ಳ ಬಹು ಉಪಯೋಗಿ ವಸ್ತು ಕೂಡ ಆಗಿದೆ ಎಂದು ವಿಜ್ಞಾನಿಗಳ ಅಭಿಪ್ರಾಯ. ಕಾರು, ಟ್ರಾಕ್ಟರ್, ಗಿರಣಿಗಳಿಗೆ ಈ ಎಣ್ಣೆಯನ್ನು ಹಾಕಿ ಓಡಿಸಬಹುದು. ಇದಕ್ಕೆ “ಜೈವಿಕ ಡಿಸೆಲ್” ಎಂದೇ ಕರೆಯುತ್ತಾರೆ.

ಈ ಹೊಂಗೆಮರಗಳನ್ನು ನಮ್ಮ ರೈತರು ತಮ್ಮ ಜಮೀನುಗಳ ಬದುಗಳಲ್ಲಿ ಬೆಳೆಸಬಹುದು. ದಾರಿಯುದ್ದಕ್ಕೂ ಹಾಕಬಹುದು. ಒಳ್ಳೆಯ ನೆರಳಿನ ಮರಕೂಡ. ಇದರ ಎಣ್ಣೆಯಿಂದ ಕೃಷಿ ಆಧಾರಿತ ಸಣ್ಣಸಣ್ಣ ಕೈಗಾರಿಕೆಗಳಿಗೆ ಉಪಯೋಗಿಸಲು ಇತ್ತೀಚೆಗೆ ಹೆಚ್ಚಿನ ಮಹತ್ವ ಬರುತ್ತಿದೆ.

ಡಿಸೆಲ್‌ಗೆ ಬದಲಾಗಿ ಈ ಎಣ್ಣೆಯನ್ನು ಬಳೆಸಿದರೆ ದುಬಾರಿ ಹಣ ನೀಡಿ, ಪೆಟ್ರೋಲ್ ಡಿಸೆಲ್‌ ತರಬೇಕಿಲ್ಲ. ಗ್ರಾಮೀಣ ಕೈಗಾರಿಕೆಗಳಲ್ಲಿಯೇ ಈ ಎಣ್ಣೆಯನ್ನು ತಯಾರಿಸಬಹುದು. ಕೃಷಿ ಕಾರ್‍ಯಗಳು ಸುಲಭವಾಗಿ, ಸಮಯ ಉಳಿಯುತ್ತದೆ. ಹೊಂಗೆ ಎಣ್ಣೆ ತೆಗೆದ ನಂತರ ಉಳಿಯುವ ಹೂಂಗೆಹಿಂಡಿ ಜಮೀನುಗಳಿಗೆ ಉತ್ತಮ ಸಾವಯವ ಗೊಬ್ಬರವಾಗುತ್ತದೆ. ಇಳುವರಿ ಕೂಡ ಹೆಚ್ಚಾಗುತ್ತದೆ. ಹೊಂಗೆ ಹಿಂಡಿ ಬಳಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ತೇವಾಂಶ ಕೀಟನಾಶಕವಾಗಿಯೂ ಕೆಲಸ ಮಾಡುತ್ತದೆ ಮತ್ತು ಮಣ್ಣಿನ ಸಂಪೂರ್‍ಣ ಆರೋಗ್ಯ ಕಾಪಾಡುತ್ತದೆ. ರಸಗೂಬ್ಬರಕ್ಕಾಗಿ ಮಾಡುತ್ತಿದ್ದ ವೆಚ್ಚ ಕಡಿಮೆಯಾಗುತ್ತದೆ.

ಹೊಂಗೆ ಎಣ್ಣೆಯಿಂದ ಉಗಳುವ ಹೊಗೆಯಲ್ಲಿ ವಿಷಾಧಾರಿತ ಆಮ್ಲಗಳು ಕಡಿಮೆ ಇರುತ್ತವೆ ಎಂದು ಕಂಡು ಹಿಡಿಯಲಾಗಿದೆ. ವಾಯುಮಾಲಿನ್ಯ ಕಡಿಮೆಯಾಗಿ ಆರೋಗ್ಯಕರ ಪರಿಸರ ನಿರ್‍ಮಾಣವಾಗುತ್ತದೆ. ಈ ಸತ್ಯವನ್ನು ನಮ್ಮ ವಿದ್ಯಾವಂತ ರೈತರು, ಪ್ರಗತಿಪರ ಕೃಷಿಕರು ಚಿಂತನೆ ಮಾಡಿ ಹೊಂಗೆ ಎಣ್ಣೆಯಿಂದಾಗುವ ಮಹತ್ವವನ್ನು ಅರಿಯಬೇಕಿದೆ. *****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...