Home / ಲೇಖನ / ವಿಜ್ಞಾನ / ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಟಿಕ್ ಬದಲು ಪಾಲಿಮರ್

ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಟಿಕ್ ಬದಲು ಪಾಲಿಮರ್

‘ಪ್ಲಾಸ್ಟಿಕ್’ ಎಂದ ತಕ್ಷಣ ಪರಿಸರಕ್ಕೆ ಎಲ್ಲ ರೀತಿಗಳಿಂದಲೂ ‘ಮಾರಕ’ ವೆಂಬ ಸತ್ಯ ಜನಸಾಮಾನ್ಯರಿಗೆ ತಿಳಿದಿದೆ. ಪ್ಲಾಸ್ಟಿಕ್ ಹಾಳೆ, ಚೀಲ, ಹೊದಿಕೆ ಇನ್ನಿತರ ವಸ್ತುಗಳು ಬಣ್ಣಗಳಲ್ಲಿ ಬಿಡುಗಡೆಯಾಗುತ್ತಿದೆ. ಇವುಗಳಿಂದ ಹಾನಿಯಾಗುತ್ತದೆ ಎಂಬ ಸತ್ಯ ಗೊತ್ತಾದ ನಂತರ ವಿಜ್ಞಾನಿಗಳು ಇವುಗಳ ಬದಲಿಗೆ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಬಹುಕೃತ ಬಳಕೆಯಾಗಬಲ್ಲ ‘ಪಾಲಿಮರ್’ ಅನ್ನು ಕಂಡು ಹಿಡಿದಿದ್ದಾರೆ. ಬಯೊಡಿಗ್ರೆಡ್ ಆಗಬಲ್ಲ ಹೊಸವಸ್ತುಗಳ ಬಗ್ಗೆ ವಿಜ್ಞಾನಿಗಳು ಈ ಪಾಲಿಮಾರನ್ನು ಆವಿಷ್ಕಾರಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಸ್ಟಾರ್‍ಚ್ ಮತ್ತು ಜೇಡಿ (ಕ್ಲೆ) ಮಣ್ಣಿನಿಂದ ಆಧರಿತವಾದ ಪ್ಲಾಸ್ಟಿಕ್ (ಥರ್‍ಮೋಪ್ಲಾಸ್ಪಿಕ್) ವಂತೆಯೇ ತಯಾರಿಸಲ್ಪಡುವ ಬಯೋಪಾಲಿಮರನ್ನು ಆವಿಷ್ಕಾರಗೊಳಿಸಲಾಗಿದೆ. ಇದು ಪ್ಲಾಸ್ಬಿಕ್ ನಷ್ಟೇ ಶಕ್ತಿಸಾಮರ್ಥ್ಯ ಮತ್ತು ಮೃದುತ್ವ ಗುಣಗಳನ್ನು (ಫ್ಲೆಕ್ಸಿಬಿಲಿಟಿ) ಹೊಂದಿದೆ. ಪ್ರಾಣವಾಯು ಇಂಗಾಲದ ಡೈ ಆಕ್ಸೈಡ್ ಮತ್ತು ನೀರಾವಿಗಳನ್ನು ತಯಾರಿಸಬಲ್ಲದಾಗಿದೆ. ಮುಖ್ಯವಾಗಿ ಇದು ಬಯೋಡಿಗ್ರೆಡೆಬಲ್ ಆಗಿದೆ. ಇದರ ಹಾಳೆಗಳಿಂದ ರಕ್ಷಿಸಿದ ಆಹಾರ ಪದಾರ್ಥಗಳ ಮೇಲೆ ಯಾವುದೇ ತರಹದ ದುಷ್ಟರಿಣಾಮಗಳು ಇದುವರೆಗೆ ಕಂಡು ಬಂದಿಲ್ಲವಾದ್ದರಿಂದ ಫಲಿತಾಂಶ ಯಶಸ್ವಿ ಎನಿಸಿದೆ. ಇದೊಂದು ಅತ್ಯುತ್ತಮ ಪ್ಯಾಕೆಜಿಂಗ್, ವಸ್ತುಗಳಿಗೆ ಬಳೆಸಬಹುದಾದ ವಸ್ತುವಾಗಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...