Home / ಕವನ / ಕವಿತೆ / ರನ್ನದುಡುಗುಣಿ

ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ
ಹೊನ್ನಿನಾ ಡಾಬಾ ಇಟ್ಟಿದಳಽ|
ಎಣಕೆನಿಲ್ಲದೆ ಮಾಣಿಕಸಽರ
ಎದಿಬದಿ ತಾನು ಹಾಕುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೧||

ಕಸೂತಿ ಕುಬಸಾ ಕೈಯಲಿ ಕನ್ನಡಿ
ನೆರಽಳ ನೋಡಿ ಹಿಗ್ಗುವಳಽ|
ಬಸವೇಸೂರನ ಎಡದಲಿ ಕುಂತು
ಹಸ್ಯಾಮಾಡಿ ತಾ ನಗುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೨||

ಮುಗಿನಾಗ ಹೊಳೆವ ಮುತ್ತಿನ ಮೂಗುತಿ
ಮಿಗಿಲಾದ ಆಭರಣಿಟ್ಟಿದಳಽ|
ಅಚ್ಚರಂಗದ ಶಾಲನುಟ್ಟು
ಅನಂತ ಕೋಟಿ ರೂಪವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೩||

ದುಂಡಗೈಯವಳು ದಿಮಿದಿಮಿಗಾರಳು
ದುಂಡಮುತ್ತಿನ ವಾರಳಽ|
ಹಿಂಡ ಗೆಳದ್ಯಾರು ಕಂಡುಸಿ ಕರದರ
ಹೆಣೂಲ ಭಂಗಾರ ಹಾಕುವಳಽ
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೪||

ಧನೂರ ಬಣ್ಣಾ ಶಾಲ ಕೈಯಲಿ
ಐದು ಅಂಕುಶಾ ಹಿಡಿದವಳಽ
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೫||
*****

ಈ ಹಾಡಿನಲ್ಲಿ ಪಸ್ತ್ರಾಭರಣಗಳ ವರ್ಣನೆಯಿದೆ.

ಛಂದಸ್ಸು:- ಮಂದಾನಿಲ ರಗಳೆ

ಶಬ್ದಪ್ರಯೋಗಗಳು:- ಇಟ್ಟಿದಳ=ಇಟ್ಟದ್ದಾಳೆ. ಎಣಿಕಿನಿಲ್ಲದೆ=ಎಣಿಕೆ ಇಲ್ಲದೆ, ಹಸ್ಯಾ ಮಾಡಿ=ಹಾಸ್ಯ ಮಾಡಿ. ದಿಮಿದಿಮಿಗಾರಳ=ತುಂಬು ಮೈಯವಳು. ವಾರಳು=ಓರಣವುಳ್ಳವಳ. ಕಂಡುಸಿ=ಖಂಡಿತವಾಗಿ. ಧನೂರ ಬಣ್ಣ=ಧನ್ನೂರಿನ ಸೀರೆ.

“ಬಸವೇಸೂರನ ಮಡದಿ.” ಇಲ್ಲಿ ವರನನ್ನು ಬಸವೇಶ್ವರನಿಗೆ ಹೋಲಿಸಿದೆ. ಹೀಗೆ ಇಂತಹ ಹಾಡುಗಳಲ್ಲಿ ಗಂಡಹೆಂಡಿರನ್ನು ಶಿವಪಾರ್ವತಿಯರಿಗೂ ಹರಿಲಕ್ಷ್ಮಿಯರಿಗೂ ಹೋಲಿಸುವುದುಂಟು.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...