Home / ಕವನ / ಕವಿತೆ / ಬಾಲಿ ತಾ ಮೈನೆರದು

ಬಾಲಿ ತಾ ಮೈನೆರದು

ಬಾಲಿ ತಾ ಮೈನೆರದು ಬಾಗಿಲದಾಗೆ ನಿಂತಾಳ|
ಬಾಳೇಲಿ ಹಂಗ ಮಕ ಬಾಡೇ| ಸೋ ||೧||

ಬಾಳೇಲಿ ಹಂಗ ಮಕ ಬಾಡಿ ಅವರವ್ವಾ|
ಬಾ ಬಾಲಿನಂದ ಕರದಾಳ| ಸೋ ||೨||

ರಂಬಿ ತಾ ಮೈಯನೆರದ ಅಂಗಳದಾಗ ನಿಂತಾಳ|
ನಿಂಬೆಲಿ ಹಾಂಗ ಮಕ ಬಾಡೇ| ಸೋ ||೩||

ನಿಂಬೀಯ ಎಲೀ ಹಂಗ ಮಗ ಬಾಡಿ ಅವರವ್ವಾ|
ಬಾ ರಂಬಿನಂದು ಕರದಾಳ| ಸೋ ||೪||

ಓದೂವ ಸಾಲ್ಯಾಗ ಮಾವಯ್ಯ ಕುಂತಾನ|
ಸಸಿ ಹೋಗಿ ಕಾಲಾ ಹಿಡದಾಳ| ಸೋ ||೫||

ಸಸಿ ಹೋಗಿ ಕಾಲಾ ಹಿಡಿದು ತಾ ಕೇಳ್ಯಾಳ|
ಗೊಂಬಿಲ್ಲರಿ ನಮ್ಮ ಎಡಽಬಲಽ| ಸೋ ||೬||

ಬಡಗ್ಯಾರ ಕರಸ್ಯಾರ ಹಿಡಿ ಹೊನ್ನ ಕುಡಸ್ಯಾರ|
ಚಂದನದ ಗೊಂಬಿ ಕೆತ್ತಸ್ಯಾರ| ಸೋ ||೭||

ವಡ್ಡ ರನ ಕರಸ್ಯಾರ ಹಿಡಿ ಹೊನ್ನ ಕೊಡಸ್ಯಾರ|
ಅಂಗಳದಾಗ ಭಾಂವಿ ಹೊಡಸ್ಯಾರ| ಸೋ ||೮||

ಅಂಗಳದಾಗಽ ಭಾಂವಿ ಹೊಡಸ್ಯಾರ ತೆಂಗೆವ್ವಾ|
ಇಲ್ಲೇ ಮೆಲಿಯವ್ವ ಹೊಲಿನೀರ| ಸೋ ||೯||

ನೀರ ಮಡಽ ಬಿಟ್ಟು ಹಾಲ ಮಡಕ ಹೋಗಿ|
ಹಸನಾಗಿ ಒಗಿರಿ ಮಡೀಗೋಳಽ| ಸೋ ||೧೦||

ಹಸನಾಗಿ ಒಗಿರಿ ಮಡಿಗೋಳ ಈ ಮನಿಗಿ|
ದಸಿಮಕದಳಿಯ ಬರಽತಾನಽ| ಸೋ ||೧೨||
*****

ಈ ಹಾಡಿನಲ್ಲಿ ಸೊಸೆಯ ಸಲುವಾಗಿ ಮಾವಯ್ಯನು ತೋರಿಸುವ ಅಕ್ಕರತೆಯು ವರ್ಣಿಸಲ್ಪಟ್ಟಿದೆ.

ಛಂದಸ್ಸು:- ತ್ರಿಪದಿ

ಶಬ್ಧ ಪ್ರಯೋಗಗಳು:- ಮಕಬಾಡಿ=ಮುಖವು ಬಾಡಿ. ಬಡಿಗ್ಯಾರು=ಬಡಗಿಗಳು. ಮೆಲಿ=ಮೀ (ಎರಕೊಳ್ಳು). ಮಡಿಗೋಳ=ಮಡಿಗಳನ್ನು. ದಸಿ ಮಕದ=ಒಳ್ಳೇ ದಶೆಯುಳ್ಳ ಮುಖಾಕೃತಿಯ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...