Home / ಕವನ / ಕವಿತೆ / ಹಣಿಯೆಂಬೊ ಭಾಂವಕ

ಹಣಿಯೆಂಬೊ ಭಾಂವಕ

ಹಣಿಯೆಂಬೊ ಭಾಂವಕ ಹೆಣಿಯಂದ ದಂಡೀಯ|
ಮಗ್ಗಿ ತಿರುವಂದ ಮಲಕೀಲಿ| ಸೋ ಎನ್ನೀರೆ ||೧||

ಹುಬ್ಬಂಬು ಭಾಂವಕ ತಿದ್ದೊಂದ ದಂಡೀಯ|
ಗೊನಿಯ ತಿರುವಂದ ಮಲಕೀಲಿ| ಸೋ… ||೨||

ಕಡಗಽವ ಇಡಸ್ಯಾರ ಕಡಗಣ್ಣಿಲಿ ನೋಡ್ಯಾರ|
ಕೊಡವೀಗಿ ತಮಗ ವರನೆಂದ| ಸೋ… ||೩||

ದ್ವಾರ್‍ಯಾಗೋಳಿಡಿಸ್ಯಾರ ಮಾರೀಯ ನೊಡ್ಯಾರ|
ನಾರೀಗಿ ತಮಗ ವರನಂದ| ಸೋ… ||೪||

ಹಸಿಯ ಜಗಲಿಯ ಮ್ಯಾಲ ಒಯ್ದಿಟ್ಟರ ಭಾಸಿಂಗ|
ತಂಗೆವ್ವಾ ಹೋಗಿ ತಗತಾರ| ಸೋ… ||೫||

ತಂಗೀಯವ್ವಾ ಹೋಗಿ ತಗತಾರ ಭಾಸಿಂಗ|
ನಂದಿ ಸೋಪನದ ನಸಲೀಗಿ| ಸೋ… ||೬||

ದಂಡಿ ತಂದಣ್ಣಾಗ ಕುಂಡ್ರೂ ಗದ್ದೀಗ್ಹಾಕಿ|
ಗುಂಡ ಗದ್ದ್ಯಾಣದ ಹೊಲ ಕೊಟ್ಟ| ಸೋ… ||೭||

ಗುಂಡಽನೆ ಗದ್ದ್ಯಾಣದ ಹೊಲ ಕೊಟ್ಟ ತಮ್ಮಾಽಗ|
ದಂಡಿ ತಂದಣಗ ಉಣಕೊಟ್ಟ| ಸೋ… ||೮||
*****

ಈ ಹಾಡಿನಲ್ಲಿ ಸತಿಯ ವಿಷಯದಲ್ಲಿ ಪತಿಗಿರುವ ಅಕ್ಕರತೆ ವರ್ಣಿಸಲ್ಪಟ್ಟಿದೆ. ಹಣೆಗೆ ದಂಡೆಯನ್ನು ಕಟ್ಟಿ ನೋಡುತ್ತಾನೆ. ಕೈಗೆ ಕಡೆಗ, ದ್ವಾರೇ ಮುಂತಾದ ಆಭರಣಗಳನ್ನಿಡಿಸಿ ನೋಡುತ್ತಾನೆ. ಅಷ್ಟಕ್ಕೂ ಸಾಲದೆ ಬಾಸಿಗವನ್ನು ತನ್ನಿರೆನ್ನುತ್ತಾನೆ. ತಂದು ಕೊಟ್ಟವರಿಗೆ ಪಾರಿತೋಷಿಕವನ್ನು ಕೊಡುತ್ತಾನೆ.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧದಂತಿದೆ.

ಶಬ್ದ ಪ್ರಯೋಗಗಳು:- ಭಾಂವಕ್ಕ=ಸ್ಥಾನಕ್ಕೆ. ಗೊನಿ=ಗೊಂಚಲು. ಕೊಡವಿ=ದಸುವುಗಳು. ತಗತಾರ=ತೆಗೆದುಕೊಂಡು ಬಾರೆ. ನಂದಿಸೋಪಾನ=ಪೂರ್ವಕಾಲದಲ್ಲಿ ಪ್ರಚಾರದಲ್ಲಿದ್ದ ಮೆಟ್ಟಿಲುಗಳ ಸಾಲು. ನಸಲೀಗಿ=ನೊಸಲಿಗೆ(ಹಣೆಗೆ). ಗುಂಡುಗದ್ಯಾಣದ ಹೊಲ=ದುಂಡಗಿನ ಆಕಾರದ ಹೊನ್ನಿನ ನಾಣ್ಯಗಳನ್ನು ಕೊಟ್ಟು ಕೊಂಡ ಹೊಲ.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...