Home / ಕವನ / ಕವಿತೆ / ಹಸುಮಗಳಽ ನೀಲಮ್ಮ

ಹಸುಮಗಳಽ ನೀಲಮ್ಮ

ಹಸುಮಗಳ ನೀಲಮ್ಮ ಬಸವಗ ಶರಣೆನ್ನ|
ನಸಲಿ ಮಾರಗದ ವಡಿಯಾಗ| ಈ ಶರಣವು ಮಾಡಿ|
ಹಸಿಗಿ ಬಾಗನ್ನಿ ಗರುಡಽವ ||೧||

ಹಕ್ಕಿ ಹಸಿಗೊಯ್ಯ ಕೋಗಿಲ ಪತ್ತಽಲೊಯ್ಯ|
ಅಕ್ಕ ನಾಗಮ್ಮ ಕತೀ ನಡಿಸ| ಈ ಸೋಬಾನಾ|
ಸಾಗನೂರವರ ಮನಿಯಾಗ ||೨||

ಆರಸರ ಹೆಂಡಽರ್‍ಯಾ ಅರವತ್ತಿನ ರಾಣ್ಯರ್‍ಯಾ|
ನೀಲವಽರಣ ಬಳಿಯವರ್‍ಯಾ| ನಮ್ಮವ್ವಗಳಿರ್‍ಯಾ|
ಬೇಗ ಸೋಬನಕ ಬರಽಬೇಕ ||೩||

ಗೌಡರ ಹೆಂಡರ್‍ಯಾ ಅರವತ್ತಿನ ರಾಣ್ಯಾರ್‍ಯಾ|
ನೀಲವಽರಣದ ಬಳಿಯವರ್‍ಯಾ| ನಮ್ಮವ್ವಗಳಿರ್‍ಯಾ|
ಬೇಗ ಸೋಬನಕ ಬರಽಬೇಕ ||೪||

ಹೆಂದಽರ ಮ್ಯಾಲಲ್ಲಿ ಜೋಡೆಡ್ಡು ಗಿಣಿ ಕೂತು|
ಪಂಕನಲ್ಲಾಡಿ ನಗತಾವ| ಅವು ಮಾತಾಡ್ಯಾವ|
ಅಕ್ಕ ಭಾವಾಗ ವರನಂದ ||೫||

ಕುಂಬೀಯನೆ ಮ್ಯಾಲ ಜೋಡೆಡ್ಡ ಗಿಣಿ ಕೂತು|
ಕಂಗನಲ್ಲಾಡಿ ನಗತಾವ| ಅವು ಮಾತಾಡ್ಯಾವ|
ತಂಗಿ ಮೈದುನಗ ವರನಂದ ||೬||

ಇಟ್ಟು ಹಾಡನೆಲ್ಲ ಒತ್ತಿ ಭರಣವ ತುಂಬಿ|
ವಜ್ಜರದ ಕೀಲಿ ಜಡಽದೇವ| ಈ ನಮ್ಮಽ ಹಾಡ|
ಸೋಬನಿದ್ದಲ್ಲಿ ತಗಽದೇವ ||೭||
*****

ಫಲಶೋಭನದ ಸಂಭ್ರಮವು ಇದರಲ್ಲಿ ವರ್ಣಿಸಲ್ಪಟ್ಟಿದೆ.

ಛಂದಸ್ಸು:- ತ್ರಿಪದಿ.

ಶಬ್ದ ಪ್ರಯೋಗಗಳು:- ನಸಲಿಮಾರಗ=ನೊಸಲಮಾರ್ಗ(?) ಅರವತ್ತಿನ ರಾಣ್ಯರ್‍ಯಾ=ದೊಡ್ಡ ಮನೆತನದ ಮೂಲಕ ಮನೆಗೆಲಸವು ಮುಗಿಯುವುದಕ್ಕೆ ತಡೆವಾಗುವುದರಿಂದ ಅರವೊತ್ತಿಗೆ ಸರವೊತ್ತಿಗೆ ಊಟ ಮಾಡುವರು. ಎಡ್ಡು=ಎರಡು. ಪಂಕನಲ್ಲಾಡಿ-ಪಕ್ಕಗಳನ್ನು ಅಲುಗಿಸಿ. ಕಂಗದಲ್ಲಾಡಿ=ಗರಿಗಳನ್ನು ಅದುರಿಸಿ. ವರ=ತಕ್ಕ. ಹೆಕ್ಕಿ ಹಸಿಗೊಯ್ಯ=ಹಕ್ಕಿಗಳಿರಾ ಸೇಸೆ ಎರೆಯಿರಿ. ಕತೀ ನಡಿಸು=ಕಾರ್ಯವನ್ನು ಸಾಗಿಸು.

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...